ನಿಸ್ವಾರ್ಥ ಇನ್ಫೋಸಿಸ್ ಮೂರ್ತಿಗೆ ಹೂವರ್ ಪ್ರಶಸ್ತಿ

ಅಂದರೆ ಅವರಿಗೆ 2012ನೇ ಸಾಲಿಗೆ ಪ್ರತಿಷ್ಠಿತ ಹೂವರ್ ಮೆಡಲ್ ಸಂದಾಯವಾಗಿದೆ. ಸೋಮವಾರ ಸಿಯಾಟಲ್ ನಗರದಲ್ಲಿ ನಡೆದ ವಿಶ್ವ ಮಾನವೀಯ ತಂತ್ರಜ್ಞಾನ ಸಮ್ಮೇಳನದಲ್ಲಿ ಈ ಗೌರವವನ್ನು ಇನ್ಫೋಸಿಸ್ ನಾರಾಯಣ ಮೂರ್ತಿ ಸ್ವೀಕರಿಸಿದರು. ಭಾರತಕ್ಕೆ ಇನ್ಫಿ ಮೂರ್ತಿ ಅವರು ಸಲ್ಲಿಸುತ್ತಿರುವ ಅನನ್ಯ ಕೊಡುಗೆಯನ್ನು ಪರಿಗಣಿಸಿ, ಈ ಪ್ರಶಸ್ತಿ ಕೊಡಮಾಡಲಾಗಿದೆ.
ಅಂದಹಾಗೆ 1929ರಲ್ಲಿ Hoover Medal ಅನ್ನು ಸ್ಥಾಪಿಸಲಾಗಿದೆ. ಇಂಜಿನಿಯರುಗಳು ಮಾನವ ಕುಲಕೋಟಿಗೆ ಸಲ್ಲಿಸುವ ಸ್ವಾರ್ಥರಹಿತ, ತಾಂತ್ರಿಕತೆ ಹೊರತಾದ ಅದ್ಭುತ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತದೆ. ಅಮೆರಿಕದ ಮೂವರು ಮಾಜಿ ಅಧ್ಯಕ್ಷರುಗಳಾದ ಹರ್ಬರ್ಟ್ ಹೂವರ್, ಡ್ವೈಟ್ ಡಿ ಐಸೆನ್ ಹಾವರ್ ಮತ್ತು ಜೇಮ್ಸ್ ಅರ್ಲ್ ಕಾರ್ಟರ್ ಸೇರಿದಂತೆ ಇದುವರೆಗೂ ಒಟ್ಟು 70 ಸಾಧಕರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಎನ್ ಆರ್ ನಾರಾಯಣ ಮೂರ್ತಿ ಅವರು ಆರೋಗ್ಯ ಸೇವೆಗಳು, ಸಾಮಾಜಿಕ ಪುನರ್ವಸತಿ, ಗ್ರಾಮೀಣಾಭಿವೃದ್ಧಿ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ವ್ಯಾಪಕ ಸುಧಾರಣೆ ತರಲು ಪ್ರತಿಷ್ಠಾನ (Infosys Science Foundation) ಸ್ಥಾಪಿಸಿ, ಆ ಮೂಲಕ ಕಾರ್ಯ ಸಾಧನೆ ಮಾಡಿದ್ದನ್ನು ಪರಿಗಣಿಸಿ, ಈ ಪ್ರಶಸ್ತಿ ಕೊಡಮಾಡಲಾಗಿದೆ. ಈ ಪ್ರತಿಷ್ಠಾನವನ್ನು ಭಾರತದಲ್ಲಿ 2009ರಲ್ಲಿ ಸ್ಥಾಪಿಸಲಾಗಿದೆ.
ಅಮೆರಿಕದ The American Society of Mechanical Engineers, the American Society of Civil Engineers, the American Institute of Chemical Engineers, the American Institute of Mining, Metallurgical and Petroleum Engineers and the Institute of Electrical and Electronics Engineers ಸಂಸ್ಥೆಗಳು ಹೂವರ್ ಮೆಡಲ್ ಆಡಳಿತ ಮಂಡಳಿಯ ಉಸ್ತುವಾರಿ ಹೊತ್ತಿವೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications