ಐಸಿಐಸಿಐ Q2 ನಿರೀಕ್ಷೆಗೂ ಮೀರಿದ ಲಾಭ

ಎರಡನೇ ತ್ರೈಮಾಸಿಕದಲ್ಲಿ ನಿವ್ವಳ ಲಾಭದಲ್ಲಿ 1,956 ಕೋಟಿ ರುನಂತೆ ಶೇ 30 ರಷ್ಟು ಏರಿಕೆ ಕಂಡಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 1,503 ಕೋಟಿ ರು ಮಾತ್ರ ಗಳಿಸಿತ್ತು.
ಸಂಸ್ಥೆಯ ಒಟ್ಟಾರೆ ಅನುತ್ಪಾದಕ ಆಸ್ತಿ(NPAs) 2,138 ಕೋಟಿ ರುಗೆ ಏರಿದೆ. ಕಳೆದ ತ್ರೈಮಾಸಿಕದಲ್ಲಿ 1,941 ಕೋಟಿ ರು ನಷ್ಟಿತ್ತು.
ಕಂಪನಿಯ ಒಟ್ಟಾರೆ ಬಡ್ಡಿ ದರ ಅಂತರ ಸುಧಾರಣೆಗೊಂಡು 3.00 % ನಷ್ಟಾಗಿದೆ. 2012ರ Q2 ನಲ್ಲಿ 2.61 % ನಷ್ಟಿತ್ತು. ನಿವ್ವಳ ಬಡ್ಡಿ ಬಡ್ಡಿ ಗಳಿಕೆ 2013ರ Q2 ನಲ್ಲಿ ಶೇ 35 ರಂತೆ 3,371 ಕೋಟಿ ರು ಗೆ ಏರಿದೆ. 2012ರ Q2 ನಲ್ಲಿ 2,506 ಕೋಟಿ ರು ನಷ್ಟಿತ್ತು.
ತೆರಿಗೆ ನಂತರದ ನಿವ್ವಳ ಲಾಭ ಗಳಿಕೆಯಲ್ಲಿ ವರ್ಷದಿಂದ ವರ್ಷಕ್ಕೆ ಶೇ 20 ರಷ್ಟು ಪ್ರಗತಿ ಸಾಧಿಸಲಾಗಿದ್ದು, 2,390 ಕೋಟಿ ರು ಪ್ರಸಕ್ತ ತ್ರೈಮಾಸಿಕದಲ್ಲಿ ಗಳಿಕೆಯಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ 1,992 ಕೋಟಿ ರು ನಷ್ಟಿತ್ತು.
ಸಂಸ್ಥೆಯ capital adequacy ratio 18.28% ನಷ್ಟಿದ್ದು, ಆರ್ ಬಿಐಗೆ ಬೇಕಾದ ಶೇ 9.0 ಮಿತಿಗಿಂತ ಸಾಕಷ್ಟು ಮೇಲಿದೆ.
ಐಸಿಐಸಿಐ ಬ್ಯಾಂಕಿನ ಷೇರುಗಳು ಬಿಎಸ್ ಇನಲ್ಲಿ 2.50 ಗಂಟೆ ಸುಮಾರಿಗೆ 1080.50 ರು ನಂತೆ ಶೇ 0.52 ರಷ್ಟು ಕುಸಿದಿತ್ತು. ಎನ್ ಎಸ್ ಇನಲ್ಲಿ 1080.85 ರು ನಂತೆ ಶೇ 0.58ರಷ್ಟು ಇಳಿದಿತ್ತು.
ಮಾರುಕಟ್ಟೆ ಮೌಲ್ಯ (m-cap) ಆಧಾರದ ಮೇಲೆ ಟಾಪ್ 10 ಸಂಸ್ಥೆಗಳಲ್ಲಿ. ಐಸಿಐಸಿಐ 1,24,718.29 ಕೋಟಿ ರು. ನೊಂದಿಗೆ 10ನೇ ಸ್ಥಾನವನ್ನು ಉಳಿಸಿಕೊಂಡಿದೆ. ಆಗಸ್ಟ್ ತಿಂಗಳಿನಲ್ಲಿ 1,12,006 ಕೋಟಿ ರು. ಆದಾಯದೊಂದಿಗೆ ಐಸಿಐಸಿಐ 10ನೇ ಸ್ಥಾನಕ್ಕೇರಿತ್ತು.
ಬಿಎಸ್ ಇನಲ್ಲಿ ನೋಂದಾಯಿತ ಸಂಸ್ಥೆಯ ಮಾರುಕಟ್ಟೆ ಮೌಲ್ಯವು ಪ್ರತಿದಿನದ ಮಾರುಕಟ್ಟೆ ಏರಿಳಿತ ಹಾಗೂ ಷೇರು ಮೌಲ್ಯದ ಮೇಲೆ ಬದಲಾವಣೆಗೆ ಒಳಪಟ್ಟಿರುತ್ತದೆ. ಇಲ್ಲಿ ನೀಡಿರುವ ಅಂಕಿ ಅಂಶಗಳು ಶುಕ್ರವಾರ, 26,2012ಕ್ಕೆ ಅನ್ವಯವಾಗುವಂತೆ ಮಾತ್ರ ಇದೆ ಎಂದು ಓದಿಕೊಳ್ಳತಕ್ಕದ್ದು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications