ಇದು ಅಧಿಕೃತ- ಮಹಾತ್ಮ ಗಾಂಧೀಜಿ ರಾಷ್ಟ್ರಪಿತ ಅಲ್ಲ

ಆದರೆ ಈಗ ಅಧಿಕೃತವಾಗಿ ಕೇಂದ್ರ ಗೃಹ ಸಚಿವಾಲಯ ಈ ಬಗ್ಗೆ ಸ್ಪಷ್ಟನೆ ನೀಡಿದೆ. ಮಹಾತ್ಮ ಗಾಂಧೀಜಿ ಅವರನ್ನು 'ರಾಷ್ಟ್ರಪಿತ' ಎಂದು ಕರೆಯಲಾಗದು. ಅವರಿಗೆ ಆ ಬಿರುದನ್ನು ನೀಡಲಾಗದು ಎಂದು ತಿಳಿಸಿದೆ. ಶಿಕ್ಷಣ ಮತ್ತು ಮಿಲಿಟರಿ ವಿಚಾರಗಳಿಗೆ ಹೊರತಾಗಿ, ಬೇರೆ ಯಾವುದೇ ಕ್ಷೇತ್ರದಲ್ಲಿ ಬಿರುದುಗಳನ್ನು ನೀಡುವುದಕ್ಕೆ ಭಾರತದ ಸಂವಿಧಾನದಲ್ಲಿ ಅವಕಾಶವಿಲ್ಲ ಎಂಬುದು ಗೃಹ ಸಚಿವಾಲಯ ಸ್ಪಷ್ಟನೆ.
ಲಕ್ನೋದ 6ನೆ ತರಗತಿಯ ವಿದ್ಯಾರ್ಥಿನಿ ಐಶ್ವರ್ಯಾ ಪರಾಶರ್ ಮಾಹಿತಿ ಹಕ್ಕು ಕಾಯ್ದೆಯಡಿ ಸಲ್ಲಿಸಿದ್ದ ಅರ್ಜಿಗೆ ಕೇಂದ್ರ ಗೃಹ ಸಚಿವಾಲಯವು ಹೀಗೆ ಉತ್ತರಿಸಿದೆ. ಮಹಾತ್ಮ ಗಾಂಧೀಜಿ ಅವರನ್ನು ರಾಷ್ಟ್ರಪಿತ (Father of the Nation) ಎಂದು ಘೋಷಿಸಬೇಕೆಂದು ಕೋರಿ ಐಶ್ವರ್ಯಾ ಪರಾಶರ್ ರಾಷ್ಟ್ರಪತಿಗೆ ಸಲ್ಲಿಸಿದ ಅರ್ಜಿಗೆ ಸಂಬಂಧಿಸಿ ತಾನು ಯಾವುದೇ ಕ್ರಮವನ್ನು ಕೈಗೊಂಡಿಲ್ಲವೆಂದು ಹೇಳಿದೆ.
ಶಿಕ್ಷಣ ಹಾಗೂ ಸೇನೆಯನ್ನು ಹೊರತುಪಡಿಸಿ ಉಳಿದ ಯಾವುದೇ ಕ್ಷೇತ್ರದಲ್ಲಿ ಬಿರುದುಗಳನ್ನು ನೀಡುವುದಕ್ಕೆ ಸಂವಿಧಾನದ 18(1)ನೆ ಅನುಚ್ಛೇದದಡಿ ಅನುಮತಿ ನೀಡುವುದಿಲ್ಲವೆಂದು ಅದು ಸ್ಪಷ್ಟಪಡಿಸಿದೆ.
ಈ ಹಿಂದೆಯೂ, ಮಹಾತ್ಮ ಗಾಂಧಿ ಅವರನ್ನು ರಾಷ್ಟ್ರಪಿತ ಎಂದು ಕರೆಯುತ್ತಿರುವ ಬಗ್ಗೆ ವಿವರಗಳನ್ನು ಕೇಳಿ ಐಶ್ವರ್ಯಾ ಹಲವಾರು ಆರ್ಟಿಐ ಅರ್ಜಿಗಳನ್ನು ಸಲ್ಲಿಸಿದ್ದರು. ಇದಕ್ಕೆ ಕಳೆದ ವರ್ಷ ಪ್ರತಿಕ್ರಿಯಿಸಿದ್ದ ಗೃಹ ಸಚಿವಾಲಯವು ಮಹಾತ್ಮ ಗಾಂಧಿಗೆ ಅಂತಹ ಯಾವುದೇ ಬಿರುದನ್ನು ನೀಡಿಲ್ಲ ಎಂದು ತಿಳಿಸಿತ್ತು.
ಐಶ್ವರ್ಯಾ ಪರಾಶರ್ ತದನಂತರ ಆಗಿನ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಹಾಗೂ ಪ್ರಧಾನಿ ಮನಮೋಹನ್ ಸಿಂಗ್ಗೆ ಪತ್ರ ಬರೆದು, ಮಹಾತ್ಮ ಗಾಂಧೀಜಿ ಅವರನ್ನು ರಾಷ್ಟ್ರಪಿತ ಎಂದು ಘೋಷಿಸುವ ಬಗ್ಗೆ ಅಧಿಸೂಚನೆಯೊಂದನ್ನು ಹೊರಡಿಸಬೇಕೆಂದು ಆಗ್ರಹಿಸಿದ್ದಳು. ಈಗ ಹೊಸದಾಗಿ, ತನ್ನ ಆ ಪತ್ರಕ್ಕೆ ಸಂಬಂಧಿಸಿ ರಾಷ್ಟ್ರಪತಿ ಹಾಗೂ ಪ್ರಧಾನಿ ಯಾವ ಕ್ರಮವನ್ನು ಕೈಗೊಂಡಿದ್ದಾರೆಂದು ಕೋರಿ ಆಕೆ ಆರ್ಟಿಐ ಅರ್ಜಿ ಸಲ್ಲಿಸಿದ್ದಳು.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications