100 ಕೋಟಿ ಡೀಲ್ ಆರೋಪ, 150 ಕೋಟಿ ಮಾನನಷ್ಟ

ಜಿಂದಾಲ್ ಕಂಪನಿ ವಿರುದ್ಧ ಸುದ್ದಿ ಪ್ರಸಾರ ಮಾಡದಿರಲು ಜೀ ನ್ಯೂಸ್ ವರದಿಗಾರರು 100 ಕೋಟಿ ರು ಕೇಳಿದ್ದರು ಎಂದು ನವೀನ್ ಜಿಂದಾಲ್ ಆರೋಪಿಸಿದ್ದರು,. ಜಿಂದಾಲ್ ಅವರ ಹೇಳಿಕೆ ಸುಳ್ಳು. ಇದರಿಂದ ನಮ್ಮ ಜೀ ಟಿವಿ ಬ್ರ್ಯಾಂಡ್ ಗೆ ಹೊಡೆತ ಬಿದ್ದಿದೆ ಎಂದು ಹೇಳಿ ಜೀ ಸಮೂಹ ಸಂಸ್ಥೆ ಜಿಂದಾಲ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದೆ.
ಜೀ ಟಿವಿ ತಂಡ ಒಡ್ಡಿದ್ದ ಡೀಲ್ ಕುರಿತಂತೆ ಗುರುವಾರ (ಅ.25) ಸುದ್ದಿಗೋಷ್ಠಿ ನಡೆಸಿದ ನವೀನ್, ಅವರು ತೋರಿಸಿದ ವಿಡಿಯೋ ಕ್ಲಿಪ್ಪಿಂಗ್ ನಕಲಿಯಾಗಿದೆ ಎಂದು ಜೀ ನ್ಯೂಸ್ ಹೇಳಿದೆ.
ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಜಿಂದಾಲ್ ಕಂಪನಿ ವಿರುದ್ಧ ಸ್ಟಿಂಗ್ ಆಪರೇಷನ್ ಜೀ ಟಿವಿ ನಡೆಸಿತ್ತು. ಈ ವಿಡಿಯೋ ಪ್ರಸಾರವಾಗಬಾರದು ಎಂದರೆ ಕೋಟ್ಯಂತರ ರುಪಾಯಿ ನೀಡುವಂತೆ ಬೆದರಿಕೆ ಒಡ್ಡಿತ್ತು ಎಂದು ನವೀನ್ ಜಿಂದಾಲ್ ಆರೋಪಿಸಿದ್ದರು.ವಿಡಿಯೋದಲ್ಲಿ ಜೀ ನ್ಯೂಸ್ ವರದಿಗಾರ ಹಾಗೂ ಜಿಂದಾಲ್ ಸಂಸ್ಥೆ ಸಿಬ್ಬಂದಿ ಜೊತೆ ಡೀಲ್ ಮಾಡುತ್ತಿರುವ ದೃಶ್ಯಗಳಿದೆ.
ಅದರೆ, ನೆವೀನ್ ಜಿಂದಾಲ್ ಮಾಡಿದ ಆರೋಪಗಳನ್ನು ಜೀ ಟಿವಿ ಸಂಸ್ಥೆ ನಿರಾಕರಿಸಿತ್ತು. ಈ ರೀತಿ ಆರೋಪಗಳು ಈ ಹಿಂದೆ ಕೂಡಾ ಕೇಳಿ ಬಂದಿತ್ತು. ನಾವು ಇದಕ್ಕೆಲ್ಲ ಹೆದರುವುದಿಲ್ಲ ಎಂದು ಜೀ ಎಂಟರ್ ಪ್ರೈಸರ್ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿಇಒ ಪುನೀತ್ ಗೋಯಾಂಕ ಹೇಳಿದ್ದರು.
ಇದಕ್ಕೆ ಪ್ರತಿಯಾಗಿ ನವೀನ್ ಜಿಂದಾಲ್ ಅವರು ಪುರಾವೆ ಸಮೇತ ಜೀ ಟಿವಿ ಡೀಲ್ ಬಯಲು ಮಾಡಿದ್ದಾರೆ. ಕಲ್ಲಿದ್ದಲು ಹಗರಣದಲ್ಲಿ ಜಿಂದಾಲ್ ಸಂಸ್ಥೆ ಪಾತ್ರ ಇದೆ ಎಂದು ಜೀ ನ್ಯೂಸ್ ವರದಿ ಮಾಡಿತ್ತು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications