ಜೈಲಿನಲ್ಲಿರಬೇಕಾಗಿದ್ದವ ಸಚಿವನಾದುದು ಎಷ್ಟುಸರಿ?

ನಾನು ಹೇಳುತ್ತಿರುವುದು ಅಲ್ಪಸಂಖ್ಯಾತ ಕಲ್ಯಾಣ ಖಾತೆಯ ಸಚಿವರಾಗಿ ಆಯ್ಕೆಯಾಗಿರುವ ರೆಹಮಾನ್ ಖಾನ್ ಬಗ್ಗೆ. ಹಲವು ಅಕ್ರಮಗಳಲ್ಲಿ ಭಾಗಿಯಾಗಿರುವ ರೆಹಮಾನ್ ಖಾನ್ ಅವರಿಗೆ ಜೈಲು ಶಿಕ್ಷೆ ನೀಡಬೇಕಿತ್ತು, ಆದರೆ ಕಾಂಗ್ರೆಸ್ ಸರಕಾರ ಅವರಿಗೆ ಕ್ಯಾಬಿನೆಟ್ ಸಚಿವ ಸ್ಥಾನ ನೀಡಿ ಗೌರವಿಸಿದೆ.
ಮುಸಲ್ಮಾನ ಸಮುದಾಯದ ಜನ ಕಷ್ಟಪಟ್ಟು ಬೆಳೆಸಿದ ಅಮಾನತ್ ಬ್ಯಾಂಕ್ ಅನ್ನು ಲೂಟಿ ಮಾಡಿದ ಅಪಖ್ಯಾತಿ ಅವರ ಮೇಲಿದೆ.
ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದ ಮುಸಲ್ಮಾನ ಸಮುದಾಯದ ಬ್ಯಾಂಕ್ ಅನ್ನು ರೆಹಮಾನ್ ಖಾನ್ ಅವನತಿಯತ್ತ ತಂದು ನಿಲ್ಲಿಸಿದ್ದಾರೆ ಅನ್ವರ್ ಮಾನಿಪ್ಪಡಿ ಹೇಳಿದ್ದಾರೆ.
ಬಿಜಾಪುರದ ವಕ್ಫ್ ಮಂಡಳಿಯ ಆಸ್ತಿ ಲೂಟಿ ಹೊಡೆದ ಬಗ್ಗೆ ಕೂಡಾ ಇವರ ಮೇಲೆ ಲೋಕಾಯುಕ್ತರು ಎಫ್ಐಆರ್ ದಾಖಲಿಸಿದ್ದಾರೆ.
ಅಮಾನತ್ ಬ್ಯಾಂಕಿನ ಹಣವನ್ನು ದೇವಾಂಗ ಸಂಘದವರಿಗೆ ಸಾಲ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿರುವ ತನ್ನ ಆಪ್ತರಿಗೆ ಬೇಕಾಬಿಟ್ಟಿ ಬ್ಯಾಂಕಿನ ಹಣ ನೀಡಿ ಲೂಟಿ ಮಾಡಿದ್ದಾರೆಂದು ಮಾನಿಪ್ಪಾಡಿ ಹೇಳಿದ್ದಾರೆ.
ಮಂಗಳೂರಿನಲ್ಲಿ ಸೋನಿಯಾ ಭೇಟಿ ನೀಡಿದ ಸಂದರ್ಭದಲ್ಲಿ ಪ್ರಾಮಾಣಿಕರಂತೆ ವರ್ತಿಸಿದ ರೆಹಮಾನ್ ಖಾನ್ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿದ್ದು ತಪ್ಪು.
ಇಂತಹ ಕಳಂಕಿತ ವ್ಯಕ್ತಿ ಜೈಲಿನಲ್ಲಿ ಇರಬೇಕಾಗಿರುವುದೇ ಸೂಕ್ತ ಎಂದು ಮಾನಿಪ್ಪಾಡಿ ಹೇಳಿದ್ದಾರೆ.
ಭ್ರಷ್ಟಾಚಾರದ ವಿರುದ್ದ ಮಾತನಾಡುವ ಸೋನಿಯಾ ಗಾಂಧಿ ಮತ್ತು ಪ್ರಧಾನಿ ಮನಮೋಹನ್ ಸಿಂಗ್ ರೆಹಮಾನ್ ಖಾನ್ ಅವರಿಗೆ ಸಚಿವ ಸ್ಥಾನ ನೀಡಿದ್ದಕ್ಕೆ ರಾಜ್ಯದ ಮುಸಲ್ಮಾನರಿಗೆ ಉತ್ತರ ನೀಡಬೇಕಿದೆ.
ಅಮಾನತ್ ಬ್ಯಾಂಕ್ ಲೂಟಿ ಮಾಡಿರುವ ಅಂಕಿಅಂಶವನ್ನು ರಿಸರ್ವ್ ಬ್ಯಾಂಕ್ ಕೂಡಾ ತನ್ನ ವರದಿಯಲ್ಲಿ ಸ್ಪಷ್ಟ ಪಡಿಸಿದೆ ಎಂದು ಅನ್ವರ್ ಮಾನಿಪ್ಪಾಡಿ ಹೇಳಿದ್ದಾರೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications