ಜೈಲಿನಲ್ಲಿರಬೇಕಾಗಿದ್ದವ ಸಚಿವನಾದುದು ಎಷ್ಟುಸರಿ?

ನಾನು ಹೇಳುತ್ತಿರುವುದು ಅಲ್ಪಸಂಖ್ಯಾತ ಕಲ್ಯಾಣ ಖಾತೆಯ ಸಚಿವರಾಗಿ ಆಯ್ಕೆಯಾಗಿರುವ ರೆಹಮಾನ್ ಖಾನ್ ಬಗ್ಗೆ. ಹಲವು ಅಕ್ರಮಗಳಲ್ಲಿ ಭಾಗಿಯಾಗಿರುವ ರೆಹಮಾನ್ ಖಾನ್ ಅವರಿಗೆ ಜೈಲು ಶಿಕ್ಷೆ ನೀಡಬೇಕಿತ್ತು, ಆದರೆ ಕಾಂಗ್ರೆಸ್ ಸರಕಾರ ಅವರಿಗೆ ಕ್ಯಾಬಿನೆಟ್ ಸಚಿವ ಸ್ಥಾನ ನೀಡಿ ಗೌರವಿಸಿದೆ.
ಮುಸಲ್ಮಾನ ಸಮುದಾಯದ ಜನ ಕಷ್ಟಪಟ್ಟು ಬೆಳೆಸಿದ ಅಮಾನತ್ ಬ್ಯಾಂಕ್ ಅನ್ನು ಲೂಟಿ ಮಾಡಿದ ಅಪಖ್ಯಾತಿ ಅವರ ಮೇಲಿದೆ.
ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದ ಮುಸಲ್ಮಾನ ಸಮುದಾಯದ ಬ್ಯಾಂಕ್ ಅನ್ನು ರೆಹಮಾನ್ ಖಾನ್ ಅವನತಿಯತ್ತ ತಂದು ನಿಲ್ಲಿಸಿದ್ದಾರೆ ಅನ್ವರ್ ಮಾನಿಪ್ಪಡಿ ಹೇಳಿದ್ದಾರೆ.
ಬಿಜಾಪುರದ ವಕ್ಫ್ ಮಂಡಳಿಯ ಆಸ್ತಿ ಲೂಟಿ ಹೊಡೆದ ಬಗ್ಗೆ ಕೂಡಾ ಇವರ ಮೇಲೆ ಲೋಕಾಯುಕ್ತರು ಎಫ್ಐಆರ್ ದಾಖಲಿಸಿದ್ದಾರೆ.
ಅಮಾನತ್ ಬ್ಯಾಂಕಿನ ಹಣವನ್ನು ದೇವಾಂಗ ಸಂಘದವರಿಗೆ ಸಾಲ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿರುವ ತನ್ನ ಆಪ್ತರಿಗೆ ಬೇಕಾಬಿಟ್ಟಿ ಬ್ಯಾಂಕಿನ ಹಣ ನೀಡಿ ಲೂಟಿ ಮಾಡಿದ್ದಾರೆಂದು ಮಾನಿಪ್ಪಾಡಿ ಹೇಳಿದ್ದಾರೆ.
ಮಂಗಳೂರಿನಲ್ಲಿ ಸೋನಿಯಾ ಭೇಟಿ ನೀಡಿದ ಸಂದರ್ಭದಲ್ಲಿ ಪ್ರಾಮಾಣಿಕರಂತೆ ವರ್ತಿಸಿದ ರೆಹಮಾನ್ ಖಾನ್ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿದ್ದು ತಪ್ಪು.
ಇಂತಹ ಕಳಂಕಿತ ವ್ಯಕ್ತಿ ಜೈಲಿನಲ್ಲಿ ಇರಬೇಕಾಗಿರುವುದೇ ಸೂಕ್ತ ಎಂದು ಮಾನಿಪ್ಪಾಡಿ ಹೇಳಿದ್ದಾರೆ.
ಭ್ರಷ್ಟಾಚಾರದ ವಿರುದ್ದ ಮಾತನಾಡುವ ಸೋನಿಯಾ ಗಾಂಧಿ ಮತ್ತು ಪ್ರಧಾನಿ ಮನಮೋಹನ್ ಸಿಂಗ್ ರೆಹಮಾನ್ ಖಾನ್ ಅವರಿಗೆ ಸಚಿವ ಸ್ಥಾನ ನೀಡಿದ್ದಕ್ಕೆ ರಾಜ್ಯದ ಮುಸಲ್ಮಾನರಿಗೆ ಉತ್ತರ ನೀಡಬೇಕಿದೆ.
ಅಮಾನತ್ ಬ್ಯಾಂಕ್ ಲೂಟಿ ಮಾಡಿರುವ ಅಂಕಿಅಂಶವನ್ನು ರಿಸರ್ವ್ ಬ್ಯಾಂಕ್ ಕೂಡಾ ತನ್ನ ವರದಿಯಲ್ಲಿ ಸ್ಪಷ್ಟ ಪಡಿಸಿದೆ ಎಂದು ಅನ್ವರ್ ಮಾನಿಪ್ಪಾಡಿ ಹೇಳಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications