ನವದೆಹಲಿಯ ಬಿಜೆಪಿ ಕನ್ನಡ ಮಣ್ಣಿನ ಋಣ ಅಪಾರ

ಎಲ್ಲರನ್ನೂ ಸಮಾನತೆ ಮತ್ತು ಭಾವೈಕ್ಯತೆಯಿಂದ ನೋಡಬೇಕಾಗುತ್ತದೆ. ದೇಶ ಅಭಿವೃದ್ದಿ ಹೊಂದಲು ಅವರ ಸಹಕಾರವೂ ಬಹಳಷ್ಟಿದೆ ಎಂದು ಹೇಳಿದ ಅವರು, ನಾನು ಬಿಜೆಪಿಯ ಸದಸ್ಯ ಮಾತ್ರ ಆರ್ ಎಸ್ ಎಸ್ ಸದಸ್ಯನಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಇಂದಿನ ದೇಶದ ರಾಜಕಾರಣದಲ್ಲಿ ಮುತ್ಸದ್ದಿ ಎಂದು ಕರೆಯಬಹುದಾದರೆ ಅದು ಆಡ್ವಾಣಿ ಮಾತ್ರ. ನಾನು ಅವರ ಆಪ್ತನೆಂದು ಈ ಮಾತನ್ನು ಹೇಳುತ್ತಿಲ್ಲ. ಅವರಿಗಿರುವ ದೂರದೃಷ್ಟಿ, ದೇಶಾಭಿಮಾನದಿಂದಾಗಿ ದೇಶದ ಪ್ರಧಾನಿಯಾಗಲು ಅವರೇ ಸೂಕ್ತ ಆಯ್ಕೆ ಎನ್ನಬಹುದೆಂದು ಕುಲಕರ್ಣಿ ಅಭಿಪ್ರಾಯಪಟ್ಟಿದ್ದಾರೆ.
ಬಲ ಪಂಥೀಯ ಮತ್ತು ಎಡ ಪಂಥೀಯ ವಿಚಾರದಲ್ಲಿ ನನಗೆ ಸಂಪೂರ್ಣ ನಂಬಿಕೆ ಇಲ್ಲದಿದ್ದರೂ ಕೆಲವೊಂದು ಕಮ್ಯೂನಿಸ್ಟ್ ತತ್ವದಲ್ಲಿ ನನಗೆ ನಂಬಿಕೆಯಿದೆ. ನರೇಂದ್ರ ಮೋದಿಯವರನ್ನು ಪ್ರಧಾನಿ ಅಭ್ಯರ್ಥಿಯೆಂದು ಘೋಷಿಸಬೇಕೆನ್ನುವ ಕೆಲ ಬಿಜೆಪಿ ನಾಯಕರುಗಳ ಹೇಳಿಕೆಗೆ ನಾನು ಪ್ರತಿಕ್ರಯಿಸುವುದಿಲ್ಲ. ಅದನ್ನು ಪಕ್ಷ ನಿರ್ಧರಿಸುತ್ತದೆ ಎಂದು ಸುಧೀಂದ್ರ ಕುಲಕರ್ಣಿ ಹೇಳಿದ್ದಾರೆ.
ಕರ್ನಾಟಕದಲ್ಲಿ ಬಿಜೆಪಿ ಇಷ್ಟು ಪ್ರಬಲವಾಗಲು ಮತ್ತು ಅಧಿಕಾರಕ್ಕೆ ಬರಲು ಯಡಿಯೂರಪ್ಪ ಅವರ ಕೊಡುಗೆ ಅಪಾರ. ಅವರು ಬಿಜೆಪಿ ತೊರೆಯಬಾರದು ಎನ್ನುವುದು ನನ್ನ ವೈಯಕ್ತಿಕ ನಿಲುವು.
ಇನ್ನೂ ಯಡಿಯೂರಪ್ಪ ಅವರಿಗೆ ಸಮಯ ಮೀರಿಲ್ಲ. ಕರ್ನಾಟಕದಲ್ಲಿ ಚುನಾವಣೆ ಹತ್ತಿರ ಬರುತ್ತಿರುವ ಸಂದರ್ಭದಲ್ಲಿ ಯಡಿಯೂರಪ್ಪ ಅವರ ನಾಯಕತ್ವ ಪಕ್ಷಕ್ಕೆ ಬೇಕೆಂದು ಕುಲಕರ್ಣಿ ಅಭಿಪ್ರಾಯ ಪಟ್ಟಿದ್ದಾರೆ.
ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ. ಮೊದಲು ಪಕ್ಷ ನಂತರ ನಾಯಕ. ಇದು ಆಡ್ವಾಣಿ ವಿಚಾರದಲ್ಲಾಗಲಿ ಅಥವಾ ಯಡಿಯೂರಪ್ಪ ವಿಚಾರದಲ್ಲಾಗಲಿ ನನ್ನ ನಿಲುವು ಬದಲಿಲ್ಲ.
ಕರ್ನಾಟಕದಲ್ಲಿನ ಬಿಜೆಪಿ ಭಿನ್ನಾಭಿಪ್ರಾಯದ ವಿಚಾರದಲ್ಲಿ ನಾನು ಮೂಗು ತೂರಿಸುವುದಿಲ್ಲ. ಪಕ್ಷ ತೆಗೆದುಕೊಳ್ಳುವ ನಿರ್ಣಯವೇ ಅಂತಿಮ ಎಂದು ಕುಲಕರ್ಣಿ ಟಿವಿ9 ಚಕ್ರವ್ಯೂಹ (ಅ28 ಸಂಚಿಕೆ) ಕಾರ್ಯಕ್ರಮದಲ್ಲಿ ಲಕ್ಷ್ಮಣ್ ಹೂಗಾರ್ ಜೊತೆ ಮಾತನಾಡುತ್ತಾ ಹೇಳಿದ್ದಾರೆ.
ನಾನು ಕನ್ನಡಿಗ ಎನ್ನಲು ನನಗೆ ಹೆಮ್ಮೆಯಿದೆ. ಭಾಷಾಭಿಮಾನ, ಸಂಸ್ಕಾರ, ಜನರ ಜೊತೆ ನಡೆದುಕೊಳ್ಳುವ ರೀತಿಯನ್ನು ನನಗೆ ಈ ಭಾಷೆ ಮತ್ತು ಕರ್ನಾಟಕ ಕಲಿಸಿ ಕೊಟ್ಟಿದೆ. "ಈ ಮಣ್ಣಿನ ಋಣವನ್ನು ನಾನೆಂದೂ ಮರೆಯುವುದಿಲ್ಲ" ಎಂದು ಸುಧೀಂದ್ರ ಕುಲಕರ್ಣಿ ಸಂದರ್ಶನದಲ್ಲಿ ಹೇಳಿದರು.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications