ಯಾದಗಿರಿಯಲ್ಲಿ ಕನ್ನಡ ಧ್ವಜಕ್ಕೆ ಮತ್ತೆ ಅವಮಾನ

ಇದು ನಡೆದಿರುವ ಯಾದಗಿರಿ ಕೇಂದ್ರ ಬಸ್ ನಿಲ್ದಾಣದ ಮುಂದೆ. ಕಲ್ಯಾಣ ಕರ್ನಾಟಕ ಯುವ ಸೇನೆ ಕಾರ್ಯಕರ್ತರು, ಕೆಂಪು ಮೇಲೆ ಹಳದಿ ಬಣ್ಣವನ್ನು ಕೆಳಗೆ ಮಾಡಿ ಕನ್ನಡ ಧ್ವಜವನ್ನು ಹಾರಿಸಿ ಅವಮಾನ ಮಾಡಿದ್ದಾರೆ. ಇದು ಬೇಕಂತೆ ಮಾಡಿದ್ದೋ, ತಿಳಿಯದೆಯೆ ಮಾಡಿದ್ದೋ, ಅಂತೂ ಕನ್ನಡ ಧ್ವಜಕ್ಕೆ 57ನೇ ಕನ್ನಡ ರಾಜ್ಯೋತ್ಸವದಂದು ಅವಮರ್ಯಾದೆಯಾಗಿದೆ.
ನಗರದ ಹೃದಯ ಭಾಗದಲ್ಲಿಯೇ ಈ ಘಟನೆ ನಡೆದಿರುವುದು ಅನೇಕರ ಆಕ್ರೋಶಕ್ಕೆ ಕಾರಣವಾಗಿದೆ. ಇದನ್ನು ನೋಡಿದ ಸಾರ್ವಜನಿಕರು ಕನ್ನಡಕ್ಕೆ ಅವಮಾನ ಮಾಡಿದವರನ್ನು ಶಿಕ್ಷಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು. ಸ್ವಲ್ಪ ಸಮಯದ ನಂತರ ಕನ್ನಡಪರ ಸಂಘಟನೆಯ ಕಾರ್ಯಕರ್ತರು ಬಂದು ಉಲ್ಟಾಪುಲ್ಟಾ ಹಾರುತ್ತಿದ್ದ ಧ್ವಜವನ್ನು ಸರಿಮಾಡಿ ಮತ್ತೆ ಹಾರಿಸಿದರು.
ಬಾವುಟ ಹಾರಿಸುವ ಸಂದರ್ಭದಲ್ಲಿ ಯಾರಾದರೂ ಇದನ್ನು ಗಮನಿಸಿ ಕೂಡಲೆ ಸರಿಪಡಿಸಬೇಕಿತ್ತು. ಆದರೆ, ಅದನ್ನು ಯಾರೂ ಮಾಡಲು ಹೋಗಿಲ್ಲ. ಕನ್ನಡ ಧ್ವಜ ಕರ್ನಾಟಕದ ಅಧಿಕೃತ ಧ್ವಜ ಎಂಬ ವಾದಕ್ಕೆ ಕರ್ನಾಟಕ ಹೈಕೋರ್ಟ್ ಸಮ್ಮತಿ ನೀಡಿಲ್ಲ, ಕನ್ನಡ ಧ್ವಜವನ್ನು ಕಡ್ಡಾಯವಾಗಿ ಎಲ್ಲೆಡೆ ಹಾರಿಸಬೇಕು ಎಂಬ ಬೇಡಿಕೆಗೆ ಒಪ್ಪಿಗೆಯೂ ಸಿಕ್ಕಿಲ್ಲ. ಆದರೆ, ಸ್ವಇಚ್ಛೆಯಿಂದ ಹಾರಿಸುವಾಗಲಾದರೂ ಹೇಗೆ ಹಾರಿಸಬೇಕು ಎಂಬ ಅರಿವಾದರೂ ಇರಬೇಕಲ್ಲ ಎಂದು ಯಾದಗಿರಿಯ ಹಿರಿಯ ನಾಗರಿಕ ಸಂಗಮೇಶ್ ಪಾಟೀಲ ಅವರು ವಾದ ಮಂಡಿಸುತ್ತಾರೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications