ವಿಪ್ರೋಗೆ ನಿರೀಕ್ಷೆ ಮೀರಿ 1611 ಕೋಟಿ ಲಾಭ

ಎರಡನೇ ತ್ರೈಮಾಸಿಕದಲ್ಲಿ ಒಟ್ಟು ಆದಾಯ ಶೇ 17 ರಷ್ಟು ಏರಿಕೆ ಕಂಡು 1,094.37 ಕೋಟಿ ರು ಗಳಿಸಿದೆ. ದೇಶದ ಮೂರನೇ ಅತಿದೊಡ್ಡ ಐಟಿ ಕಂಪನಿ ವಿಪ್ರೋ ತನ್ನ ಐಟಿ ಸರ್ವೀಸಸ್ ವ್ಯವಹಾರದಿಂದ ಸುಮಾರು 1,560 ಮಿಲಿಯನ್ ಡಾಲರ್ ನಿಂದ 1,590 ಮಿಲಿಯನ್ ಡಾಲರ್ ಆದಾಯ ಗಳಿಸುವ ನಿರೀಕ್ಷೆ ಹೊಂದಿದೆ.
ನಿರೀಕ್ಷೆಗೆ ತಕ್ಕ ಪ್ರತಿಫಲ ಸಿಕ್ಕಿದೆ. ಗ್ರಾಹಕರು ಹಾಗೂ ಉದ್ಯೋಗಿಗಳ ನಡುವೆ ನಿರಂತರ ಸಂಪರ್ಕ ಈ ಸಾಧನೆಗೆ ಪೂರಕವಾಗಿದೆ. ಕ್ಲೌಡ್, ಮೊಬಿಲಿಟಿ, ಅನಾಲಿಟಿಕ್ಸ್ ಹಾಗೂ ಸಾಮಾಜಿಕ ಮಾಧ್ಯಮ ಕ್ಷೇತ್ರಗಳಲ್ಲಿ ಬಂಡವಾಳ ಹೂಡಿಕೆ ಮುಂದುವರೆಯಲಿದೆ ಎಂದು ವಿಪ್ರೋ ಸಂಸ್ಥೆಯ ಸಿಎಫ್ ಒ ಸುರೇಶ್ ಸೇನಾಪತಿ ಹೇಳಿದ್ದಾರೆ.
ಎರಡನೇ ತ್ರೈಮಾಸಿಕದಲ್ಲಿ ಐಟಿ ಸರ್ವೀಸಸ್ ವಿಭಾಗದಲ್ಲಿ ಸುಮಾರು 2,017 ಜನರನ್ನು ನೇಮಕ ಮಾಡಿಕೊಳ್ಳಲಾಗಿದೆ, ಸೆಪ್ಟೆಂಬರ್ 30,2012ರ ಗಣತಿಯಂತೆ ವಿಪ್ರೋ ಸಂಸ್ಥೆ ಒಟು ಉದ್ಯೋಗಿಗಳ ಸಂಖ್ಯೆ 1,40,569 ನಷ್ಟಿದೆ.
ವಿಪ್ರೋ ಸಂಸ್ಥೆ ತನ್ನ ಮೊದಲ ತ್ರೈಮಾಸಿಕ ವರದಿ ಮಂಗಳವಾರ(ಜು.24, 2012) ಪ್ರಕಟಿಸಿದ ಬೆನ್ನಲ್ಲೇ ತನ್ನ ಉದ್ಯೋಗಿಗಳಿಗೆ ಶೇ 8ರಷ್ಟು ಸಂಬಳ ಏರಿಕೆ ಘೋಷಿಸಿದೆ.
ಜೂನ್ ತಿಂಗಳಿನಿಂದ ಅನ್ವಯವಾಗುವಂತೆ ಆನ್ ಸೈಟ್ ಉದ್ಯೋಗಿಗಳಿಗೆ ಶೇ 3 ರಷ್ಟು ಹಾಗೂ ಆಫ್ ಶೋರ್ ಉದ್ಯೋಗಿಗಳಿಗೆ ಶೇ 8 ರಷ್ಟು ಸಂಬಳ ಏರಿಕೆಯಾಗಲಿದೆ. ಮೊದಲ ಹಂತದ ಪ್ರಮೋಷನ್ ಹಾಗೂ ಇಂಕ್ರೀಮೆಂಟ್ ಗಳನ್ನು ನೀಡಲು ವಿಪ್ರೋ ಅರಂಭಿಸಿತ್ತು.
ಮುಂಬರುವ ಯುಎಸ್ ಚುನಾವಣೆ ಮೇಲೆ ಕಣ್ಣಿಟ್ಟಿರುವ ವಿಪ್ರೋ ಸಂಸ್ಥೆ, ಚುನಾವಣೆ ನಂತರ ಹೊರ ಗುತ್ತಿಗೆ ಕ್ಷೇತ್ರದಲ್ಲಿ ಉಂಟಾಗುವ ಬದಲಾವಣೆ ಬಗ್ಗೆ ನಿಗಾವಹಿಸಲಾಗುವುದು ಉದ್ಯೋಗ ಕೊರತೆ ಅನುಭವಿಸದಂತೆ ನೋಡಿಕೊಳ್ಳಲಾಗುವುದು ಎಂದು ಸಂಸ್ಥೆ ಉಪಾಧ್ಯಕ್ಷ ಹಾಗೂ ಮಾನವ ಸಂಪನ್ಮೂಲ ಅಧಿಕಾರಿ ಪ್ರತೀಕ್ ಕುಮಾರ್ ಹೇಳಿದ್ದಾರೆ.
ಸ್ಥಳೀಯ ಉದ್ಯೋಗಿಗಳಿಗೆ ಆದ್ಯತೆ ಮೇರೆಗೆ ನೇಮಕಾತಿ ಮಾಡಿಕೊಳ್ಳಲಾಗುವುದು. ಆನ್ ಸೈಟ್ ಉದ್ಯೋಗಿಗಳಲ್ಲಿ ಶೇ 38 ರಷ್ಟು ಸ್ಥಳೀಯರಿದ್ದಾರೆ. H1B ಉದ್ಯೋಗಿಗಳಲ್ಲಿರುವ ಗೊಂದಲ ನಿವಾರಿಸಿ, ಕಾರ್ಯಕ್ಷಮತೆ ಹೆಚ್ಚಿಸಲಾಗುವುದು ಎಂದು ಕುಮಾರ್ ತಿಳಿಸಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications