ಯಡಿಯೂರಪ್ಪ ಕಾಲೇಜು ಮುಂದಿನ ಮನೆ ನೆಲಸಮ

ಇಲ್ಲಿನ ರಾಷ್ಟ್ರೀಯ ಹೆದ್ದಾರಿ 206ಗೆ ಹೊಂದಿಕೊಂಡಂಎ ಇರುವ ಪಿಇಎಸ್ ಐಟಿ ಕಾಲೇಜಿನ ಮುಂಭಾಗದಲ್ಲಿದ್ದ ಮನೆ ಭಾನುವಾರ ಬೆಳಗ್ಗೆ ನೆಲಸಮವಾಗಿದೆ.
ಪೆಸಿಟ್ ಕಾಲೇಜಿನ ಸೌಂದರ್ಯಕ್ಕೆ ಧಕ್ಕೆ ಉಂಟಾಗುತ್ತೆ ಎಂಬ ಕಾರಣಕ್ಕೆ ಮನೆಯನ್ನು ಏಕಾಏಕಿ ನೆಲಸಮಗೊಳಿಸಲಾಗಿದೆ. ಹೀಗಾಗಿ ಮನೆಯವರು ನೆರವಿಗಾಗಿ ಯಾರೊಂದಿಗೂ ಸಂಪರ್ಕ ಸಾಧಿಸಲು ಆಗಲಿಲ್ಲ. ಕಾಲೇಜು ಆಡಳಿತ ಮಂಡಳಿಯ ಜೊತೆ ಕೈ ಜೋಡಿಸಿದ ಸ್ಥಳೀಯ ಪೊಲೀಸರು ಭಾನುವಾರ ಬೆಳಗ್ಗೆ 4 ಗಂಟೆ ಸುಮಾರಿಗೆ ಮನೆ ಕೆಡವಲು ಆರಂಭಿಸಿದ್ದಾರೆ.
ಮೊದಲಿಗೆ ಪೆಸಿಟ್ ಕಾಲೇಜಿನ ಮುಂದಿನ ಮನೆಯಲ್ಲಿದ್ದವರ ಮೊಬೈಲ್ ಕಸಿದುಕೊಳ್ಳಲಾಗಿದೆ. ನಂತರ ಜೆಸಿಬಿ ಯಂತ್ರಗಳನ್ನು ಬಳಸಿ ಕೆಲ ಹೊತ್ತಿನಲ್ಲಿ ಮನೆ ನೆಲಕ್ಕುರಳಿಸಲಾಗಿದೆ.
ಕೋರ್ಟ್ ಆದೇಶದಂತೆ ಮಣಿಕಂಠನ್ ಎಂಬುವವರಿಗೆ ಸೇರಿದ ಈ ಮನೆಯನ್ನು ನೆಲಸಮಗೊಳಿಸಲಾಗಿದೆ ಎಂದು ಎಸಿಪಿ ವೈಶಾಲಿ ಹೇಳಿದ್ದಾರೆ.
ಕಾಲೇಜು ಮುಂಭಾಗದಲ್ಲಿ ಈ ಹಿಂದೆ ಕೂಡಾ ಹಲವು ಮನೆಗಳಿದ್ದವು, ಸೂಕ್ತ ಪರಿಹಾರ ನೀಡಿ ಎಲ್ಲಾ ಮನೆಗಳನ್ನು ತೆರವುಗೊಳಿಸಲಾಗಿದೆ. ಮಣಿಕಂಠ ಎಂಬ ವ್ಯಕ್ತಿ ಮನೆ ತೆರವುಗೊಳಿಸಲು ನಿರಾಕರಿಸಿದ್ದರು ಎಂದು ತಿಳಿದು ಬಂದಿದೆ.
ಮನೆ ತೆರವುಗೊಳಿಸುವಂತೆ ಸ್ವತಃ ಯಡಿಯೂರಪ್ಪ ಅವರ ಮನೆಯವರು ಬಂದು ಕೇಳಿಕೊಂಡಿದ್ದರೂ ಮಣಿಕಂಠ ಜಗ್ಗಿರಲಿಲ್ಲ. ಕೋರ್ಟ್ ಆದೇಶ ಪಡೆದಿದ್ದೇವೆ ಎಂದು ಹೇಳಿ ಅಧಿಕಾರಿಗಳು ಭಾನುವಾರ ಮುಂಜಾನೆ ಮನೆ ನೆಲಸಮಗೊಳಿಸಿದ್ದಾರೆ.
ರಸ್ತೆ ಅಗಲೀಕರಣ, ಬಸ್ ಶೆಲ್ಟರ್ ನಿರ್ಮಾಣದ ಉದ್ದೇಶದಿಂದ ಮನೆ ಕೆಡವಲಾಗಿದೆ. ಅಸಲಿಗೆ ಮಣಿಕಂಠ ಎಂಬ ವ್ಯಕ್ತಿ ಈ ಮನೆಯ ಅಸಲಿ ಮಾಲೀಕನಲ್ಲ. ಅಸಲಿ ಮಾಲೀಕರಿಗೆ ಸೂಕ್ತ ಪರಿಹಾರ ನೀಡಲಾಗಿದೆ ಎಂದು ಪ್ರೇರಣಾ ಎಜುಕೇಷನ್ ಟ್ರಸ್ಟ್ ನ ಸಿಬ್ಬಂದಿಯೊಬ್ಬರು ಹೇಳಿದ್ದಾರೆ.
ಆದರೆ, ಮನೆ ನೆಲಸಮಗೊಳಿಸುವ ಬಗ್ಗೆ ಮುಂಚಿತವಾಗಿ ನೋಟಿಸ್ ನೀಡಿಲ್ಲ. ನೆಲ ಸಮಗೊಳಿಸುವ ಸಂದರ್ಭದಲ್ಲೂ ಯಾವೊಬ್ಬ ಅಧಿಕಾರಿ ಕೂಡಾ ನೋಟಿಸ್ ನೀಡಿಲ್ಲ ಎಂದು ಮಣಿಕಂಠ ಹಾಗೂ ಅವರ ಕುಟುಂಬದವರು ಗೋಳು ತೋಡಿಕೊಂಡಿದ್ದಾರೆ.
ಮನೆ ಅಸಲಿ ಮಾಲೀಕ ಯಾರು, ಅಧಿಕಾರಿಗಳು ನೋಟಿಸ್ ಏಕೆ ನೀಡಲಿಲ್ಲ ಎಂಬುದರ ಬಗ್ಗೆ ಹೆಚ್ಚಿನ ಮಾಹಿತಿ ಇನ್ನೂ ಹೊರಬೀಳಬೇಕಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications