ಪತ್ರಕರ್ತರ ಕೊಲೆಗೆ ಸಂಚು ಹಾಕಿದ್ದ ಉಗ್ರ ಸೆರೆ

ಜೀವನ್ ಭೀಮಾನಗರ ನಿವಾಸಿ 23 ವರ್ಷದ ಸೈಯದ್ ತಂಜೀಮ್ ಬಂಧಿತ ಉಗ್ರನಾಗಿದ್ದಾನೆ. ಬೆಂಗಳೂರು, ಹುಬ್ಬಳ್ಳಿ, ಹೈದರಾಬಾದಿನಲ್ಲಿ 14 ಜನರನ್ನು ಉಗ್ರರನ್ನು ಬಂಧಿಸಿದ ನಂತರ ಈತ ನಾಪತ್ತೆಯಾಗಿದ್ದ ಎಂದು ಜಂಟಿ ಪೊಲೀಸ್ ಆಯುಕ್ತ ಬಿ ದಯಾನಂದ್ ಹೇಳಿದ್ದಾರೆ.
ಸೆಂಟ್ರಿಂಗ್ ಗುತ್ತಿಗೆದಾರನಾಗಿರುವ ಸೈಯದ್ ತಂಜೀಮ್ ಹಾಗೂ ಬಂಧಿತ ಉಗ್ರ ಶೋಯಬ್ ಅಹ್ಮದ್ ಮಿರ್ಜಾ ನಿಕಟವರ್ತಿಗಳಾಗಿದ್ದಾರೆ. ಬಂಧಿತ ಸೈಯದ್ ಮನೆಯನ್ನು ಪರಿಶೀಲಿಸಲಾಗಿದ್ದು, ಹಲವು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ದಯಾನಂದ್ ಹೇಳಿದರು.
ಪತ್ರಕರ್ತರ ಕೊಲೆಗೆ ಸಂಚು: ಉಗ್ರ ಶೋಯಬ್ ಅಹ್ಮದ್ ಮಿರ್ಜಾ ಹಾಕಿದ ಸ್ಕೆಚ್ ನಂತೆ ಖ್ಯಾತ ಕನ್ನಡ ಅಂಕಣಕಾರರೊಬ್ಬರನ್ನು ಕೊಲೆ ಮಾಡಲು ಸೈಯದ್ ಮುಂದಾಗಿದ್ದ.
ಅಂಕಣಕಾರರ ಮನೆ ವಿಳಾಸ, ದೈನಂದಿನ ಚಟುವಟಿಕೆ, ಅವರು ಉಪಯೋಗಿಸುವ ವಾಹನ, ಅವರ ಬಂಧು ಬಳಗ, ಸ್ನೇಹಿತ ವರ್ಗ, ಸಾಮಾಜಿಕ ಜಾಲ ತಾಣಗಳಲ್ಲಿ ಅವರ ಪರ ವಿರೋಧ ಪತ್ರಿಕ್ರಿಯೆಗಳ ಬಗ್ಗೆ ಉಗ್ರ ಸೈಯದ್ ಅಧ್ಯಯನ ನಡೆಸಿದ್ದ ಎಂದು ತಿಳಿದು ಬಂದಿದೆ.
ಟಿಂಬರ್ ಯಾರ್ಡ್ , ಸೆಂಟ್ರಿಂಗ್ ಕೆಲಸ ಮಾಡಿಕೊಂಡಿದ್ದ ಸೈಯದ್ ಗೆ ಉಗ್ರಗಾಮಿಗಳ ನಂಟು ಬೆಳೆಯಲು ಶೋಯಬ್ ಮಿರ್ಜಾ ಕಾರಣ ಎಂದು ತಿಳಿದು ಬಂದಿದೆ. ನಗರದ ವಸಂತನಗರದ ಗಲ್ಲಿಯೊಂದರಲ್ಲಿ ಅಲೆಯುತ್ತಿದ್ದ ಸೈಯದ್ ನನ್ನು ಪೊಲೀಸರು ಉಪಾಯವಾಗಿ ಬಂಧಿಸಿದ್ದಾರೆ.
ತಂಜೀಮ್ ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ.19ರ ವಶಕ್ಕೆ ಪಡೆಯಲಾಗಿದೆ. ವಿಚಾರಣೆ ಮುಂದುವರೆದಿದೆ ಎಂದು ಉಪ ಪೊಲೀಸ್ ಆಯುಕ್ತ ದಯಾನಂದ ಹೇಳಿದ್ದಾರೆ. [ಬಂಧಿತ ಶಂಕಿತ ಉಗ್ರರ ಪಟ್ಟಿ ]
ಜೆ ಸಿ ನಗರದ ಸೈಬರ್ ಸೆಂಟರ್ ನಲ್ಲಿ ವಿದೇಶಗಳಿಗೆ ಇ ಮೇಲ್ ಮಾಡಲು ಹಾಗೂ ಉಗ್ರಗಾಮಿ ಚಟುವಟಿಕೆ ಬೆಳೆಸಲು ಬೇಕಾದ ಮಾಹಿತಿ ಸಂಗ್ರಹಿಸಲು ಸುರಕ್ಷಿತ ನೆಲೆ ಒದಗಿಸುತ್ತಾ, ಉಗ್ರರ ಜೊತೆ ನಿರಂತರ ಸಂಪರ್ಕ ಹೊಂದಿದ್ದ ಉಮರ್ ಎಂಬ ಶಂಕಿತನನ್ನು ಸೆ.25 ರಂದು ಸಿಸಿಬಿ ಪೊಲೀಸರು ಬಂಧಿಸಿದ್ದರು.
ಬಂಧಿತ ಉಮರ್ ಉದ್ದೀನ್ ಹಾಗೂ ಪತ್ರಕರ್ತ ಮತಿ ಉರ್ ರೆಹಮಾನ್ ಸಿದ್ಧಿಕಿಯೊಂದಿಗೆ ನಿಕಟ ಸಂಪರ್ಕವಿತ್ತು ಎಂದು ವಿಚಾರಣೆಯಿಂದ ತಿಳಿದು ಬಂದಿತ್ತು.
ಬಂದಿತ ಉಗ್ರರು ಹುಬ್ಬಳ್ಳಿ, ಧಾರವಾಡ, ಬೆಂಗಳೂರು, ಭಟ್ಕಳ, ಮಹಾರಾಷ್ಟ್ರ, ಹೈದರಾಬಾದ್ ಮುಂತಾದೆಡೆ ಜಾಲ ಹೊಂದಿದ್ದರು. ಲಷ್ಕರ್ ಇ ತೋಯ್ಬಾ, ಹರ್ಕತ್ ಉಲ್ ಜಿಹಾದ್ ಅಲ್ ಇಸ್ಲಾಮಿಕ್ ಸಂಘಟನೆ ಜೊತೆ ಸಂಪರ್ಕ ಹೊಂದಿದ್ದರು. ಈ 20 ರ ತಂಡ 150ಕ್ಕೂ ವಿದ್ಯಾರ್ಥಿಗಳ ತಲೆಯಲ್ಲಿ ವಿಷಬೀಜ ಬಿತ್ತಿರುವ ಆತಂಕದ ಸಂಗತಿ ಖಚಿತವಾಗಿತ್ತು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications