ಆಭರಣ ಲೂಟಿ; ಕನ್ನಡ ಕಿರುತೆರೆ ನಟ ಬಂಧನ

ವಿವಾಹ ನಿಶ್ಚಿತಾರ್ಥವಾಗಿದ್ದ ಯುವತಿಗೆ ವಿಷ ಮಿಶ್ರಿತ ಕೇಕ್ ನೀಡಿ ಪ್ರಜ್ಞೆ ತಪ್ಪಿಸಿ, ಮದುವೆಗೆಂದು ಕೂಡಿಟ್ಟಿದ್ದ ಚಿನ್ನಾಭರಣ ಹಾಗೂ ನಗದು ದೋಚಿ ಕಿರುತೆರೆ ನಟ ಶಶಿಧರ ಯಾನೆ ನಾರಾಯಣ ಪರಾರಿಯಾಗಿದ್ದ. ಬೆಳ್ತಂಗಡಿ ತಾಲೂಕಿನ ಕಳಂಜದಲ್ಲಿ ನಡೆದಿದ್ದ ಈ ಘಟನೆಯಲ್ಲಿ ಅದೃಷ್ಟವಶಾತ್ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದಳು.
ಆರೋಪ ಎದುರಿಸುತ್ತಿದ್ದರೂ ನ್ಯಾಯಾಲಯದ ವಿಚಾರಣೆಗೆ ಸತತವಾಗಿ ಗೈರು ಹಾಜರಾಗುತ್ತಿದ್ದ ಶಶಿಧರನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.
ಪಂಚರಂಗಿ ಪೋಂ ಪೋಂ, ಮನೆಯೊಂದು ಮೂರು ಬಾಗಿಲು, ರಂಗೋಲಿ ಮುಂತಾದ ಧಾರಾವಾಹಿಗಳಲ್ಲಿ 28 ವರ್ಷದ ಶಶಿ ಅಭಿನಯಿಸಿದ್ದಾನೆ.
ಘಟನೆ ಹಿನ್ನೆಲೆ: ಕಳಂಜಗ್ರಾಮ ಮಾವಿನಡಿ ಮನೆ ನಿವಾಸಿ ಲಿಂಗಪ್ಪ ಗೌಡರ ಪುತ್ರಿ ಹೇಮಾವತಿ (23) ಎಂಬ ಯುವತಿ ಮೋಸಕ್ಕೀಡಾದಳು. ಆಕೆ ಮನೆಯಲ್ಲಿ ಒಂಟಿಯಾಗಿರುವ ಸಮಯ ನೋಡಿದ ಆರೋಪಿ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ನಿವಾಸಿ ಶಶಿ, ಮಹಿಳೆಗೆ ಪ್ರಜ್ಞೆ ತಪ್ಪಿಸುವ ಕೇಕ್ ನೀಡಿ ಮನೆಯಲ್ಲಿದ್ದ ಹತ್ತು ಪವನ್ ಚಿನ್ನ ಹಾಗೂ ಒಂದು ಲಕ್ಷ ನಗದನ್ನು ಹಾಡು-ಹಗಲೇ ದೋಚಿ ಪರಾರಿಯಾಗಿದ್ದ.
ವಿಷಯುಕ್ತ ಕೇಕ್ ತಿಂದ ಹೇಮಾವತಿ ಅರೆ ಪ್ರಜ್ಞಾವಸ್ಥೆಯಲ್ಲಿದ್ದಾಗಲೇ ಆಕೆಯ ಮೈಮೇಲಿದ್ದ ಒಡವೆಗಳನ್ನು ಕಳಚಿದ್ದಾನೆ. ಶಶಿ ಮಾಡುತ್ತಿರುವ ದುಷ್ಕೃತ್ಯದ ಅರಿವು ಉಂಟಾದರೂ ಏನೂ ಮಾಡಲಾಗದ ಸ್ಥಿತಿಯಲ್ಲಿದ್ದ ಹೇಮಾ, ನಂತರ ವಾಂತಿ ಮಾಡಿಕೊಂಡು ಬೊಬ್ಬೆ ಹಾಕತೊಡಗಿದಾಗ, ನೆರೆಮನೆಯವರು ಬಂದು ಆಕೆಯನ್ನು ಆಸ್ಪತ್ರೆಗೆ ಸೇರಿಸಿದ್ದರು. ಉಪ್ಪಿನಂಗಡಿ ಪೊಲೀಸರು ಈ ಕಳವು ಪ್ರಕರಣದ ತನಿಖೆ ಮಾಡಿ ಶಶಿಯನ್ನು ಒಮ್ಮೆ ಬಂಧಿಸಿದ್ದರು.
ಜಾಮೀನ ಮೇಲೆ ಬಿಡುಗಡೆ ಹೊಂದಿದ್ದ ಶಶಿ ಧಾರಾವಾಹಿಗಳಲ್ಲಿ ತೊಡಗಿಕೊಂಡಿದ್ದ. ನಂತರ ವಿಚಾರಣೆ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ.
ವಾರೆಂಟ್ ಹೊರಡಿಸಿದ್ದರೂ ಶಶಿ ಕ್ಯಾರೆ ಎನ್ನಲಿಲ್ಲ. ಕೋರ್ಟ್ ಆದೇಶ ಪಾಲಿಸದ ಕಾರಣಕ್ಕೆ ಶಶಿಯನ್ನು ಪೊಲೀಸರು ಮತ್ತೆ ಬಂಧಿಸಿದ್ದಾರೆ.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications