ಕಿಂಗ್ ಫಿಷರ್ ಏರ್ ಲೈನ್ಸ್ ಗೆ 754 ಕೋಟಿ ರು ನಷ್ಟ

ಕಳೆದ ವರ್ಷ ಇದೇ ಅವಧಿಯಲ್ಲಿ ಸುಮಾರು 469 ಕೋಟಿ ರು ನಷ್ಟ ಹೊಂದಿತ್ತು.
ಕಿಂಗ್ ಫಿಷರ್ ಕಂಪನಿ ಷೇರುಗಳು ಬಿಎಸ್ ಇನಲ್ಲಿ ಬೆಳಗ್ಗೆ 10 ಗಂಟೆ ಸುಮಾರಿಗೆ 12.52 ರು. ನಂತೆ ಶೇ 2.42 ರಷ್ಟು ಕುಸಿತ ಕಂಡಿತ್ತು. ಈ ತ್ರೈಮಾಸಿಕದಲ್ಲಿ ಒಂದು ಅವಧಿಯ ನಷ್ಟ 448 ಕೋಟಿ ರು ಹಾಗೂ ನಿರ್ವಹಣಾ ವೆಚ್ಚ 220 ಕೋಟಿ ರು ನಷ್ಟು ನಷ್ಟ ಉಂಟಾಗಿದೆ.
ವಿಜಯ್ ಮಲ್ಯ ಒಡೆತನದ ಕಿಂಗ್ ಫಿಷರ್ ವಿಮಾನಯಾನ ಸಂಸ್ಥೆಗೆ ಸಿಕ್ಕಾಪಟ್ಟೆ ಸಾಲ ಕೊಟ್ಟಿರುವ ಎಸ್ ಬಿಐ ಕಠಿಣ ಕ್ರಮಕ್ಕೆ ಮುಂದಾಗಿದೆ. ನವೆಂಬರ್ 30ರೊಳಗೆ ಸಾಲ ತೀರಿಸದಿದ್ದರೆ ಕಿಂಗ್ ಫಿಷರ್ ವಿಮಾನ ಹಾರಾಡಲು ಬಿಡುವುದಿಲ್ಲ ಎಂದು ಎಸ್ ಬಿಐ ಎಚ್ಚರಿಸಿತ್ತು.
ಸುಮಾರು 7,524 ಕೋಟಿ ರು ಸಾಲದ ಹೊರೆ ಹೊಂದಿರುವ ಕಿಂಗ್ ಫಿಷರ್ ಸಂಸ್ಥೆ ಸುಮಾರು 8000 ಕೋಟಿ ರು ನಷ್ಟು ನಷ್ಟ ಅನುಭವಿಸಿದೆ. 17 ಬ್ಯಾಂಕ್ ಗಳಿಂದ ಸಾಲ ಪಡೆದಿದೆ. ಎಸ್ ಬಿಐನಿಂದಲೇ ಅರ್ಧದಷ್ಟು ಸಾಲದ ಮೊತ್ತ ವಿಜಯ್ ಮಲ್ಯ ಪಡೆದಿದ್ದಾರೆ.
ಈ ಮೊದಲು ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ನಿರ್ಧರಿಸಲಾಗಿತ್ತು. ಡಿಜಿಸಿಎ ಕಿಂಗ್ ಫಿಷರ್ ಹಾರಾಟ ಪರವಾನಿಗೆ ರದ್ದು ಮಾಡಿತ್ತು.
ಈ ವರ್ಷದ ಡಿಸೆಂಬರೊಳಗೆ ನಾಲ್ಕು ತಿಂಗಳ ಸಂಬಳವನ್ನು ಎಲ್ಲ ಸಿಬ್ಬಂದಿಗಳಿಗೆ ನೀಡುವುದಾಗಿ ಅ.25 ರಂದು ಕಿಂಗ್ ಫಿಷರ್ ಸಂಸ್ಥೆ ಭರವಸೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.
ಕಿಂಗ್ ಫಿಷರ್ ವಿಮಾನಯಾನ ಸಂಸ್ಥೆ ತನ್ನ 4000 ಉದ್ಯೋಗಿಗಳ ಪೈಕಿ 2000 ಉದ್ಯೋಗಿಗಳಿಗೆ ಈ ವರ್ಷದ ಮಾರ್ಚ್ ತಿಂಗಳಿನ ತನಕ ಸಂಬಳ ನೀಡಿದೆ. ನಂತರ ಯಾರೊಬ್ಬರಿಗೂ ಸಂಬಳ ನೀಡಿರಲಿಲ್ಲ.
ಪೈಲಟ್ ಗಳ ಮುಷ್ಕರ, ವಿಮಾನ ಹಾರಾಟ ರದ್ದು, ವಿಮಾನಯಾನ ಸಂಸ್ಥೆ ಉಳಿಸಲು ಇತರೆ ಆಸ್ತಿ ಮಾರಾಟ ಮುಂತಾದ ಕಷ್ಟಕರ ಪರಿಸ್ಥಿತಿಯನ್ನು ಮಲ್ಯ ಎದುರಿಸಿದ್ದಾರೆ. ಬ್ಯಾಂಕು ಗಳ ಅಂದಾಜಿನ ಪ್ರಕಾರ 'ಕಿಂಗ್ ಫಿಷರ್' ಬ್ರಾಂಡ್ ಮೌಲ್ಯ ಸುಮಾರು 4,100 ಕೋಟಿ ಇದೆ. ವಿಜಯ್ ಮಲ್ಯ ಸಂಸ್ಥೆ ವೈಯಕ್ತಿಕ ಗ್ಯಾರಂಟಿಯಾಗಿ 248.97 ಕೋಟಿ ರು ತೂಗುತ್ತಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications