ಬಿಎಂಟಿಎಫ್ ಕಚೇರಿಗೆ ಸಚಿವ ಸುರೇಶ್ ಹಾಜರಾಗಿಲ್ಲ

ಸುರೇಶ್ ಕುಮಾರ್ ಅವರು ಸೇರಿದಂತೆ ಇತರೆ ಆರೋಪಿಗಳು ಬಿಎಂಟಿಎಫ್ ಕಚೇರಿಗೆ ಖುದ್ದು ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗಿತ್ತು.
ಅದರೆ, ಸುರೇಶ್ ಅವರ ಹಾಜರಾತಿ ವಿನಾಯತಿ ಕೋರಿ ಸುರೇಶ್ ಪರ ವಕೀಲರು ಬಿಎಂಟಿಎಫ್ ಕಚೇರಿಗೆ ಹಾಜರಾದರು. ಪ್ರಕರಣದ ಬಗ್ಗೆ ಉತ್ತರಿಸಲು ಹೆಚ್ಚಿನ ಕಾಲಾವಕಾಶ ಕೋರಿ ಅರ್ಜಿ ಸಲ್ಲಿಸಿದರು.
ಇತ್ತೀಚಿಗೆ ಜಿ ಕೆಟಗೆರಿ ನಿವೇಶನ ಅಕ್ರಮವಾಗಿ ಹೊಂದಿದ್ದ ಆರೋಪ ಪ್ರಕರಣದಲ್ಲಿ ಸುರೇಶ್ ಕುಮಾರ್ ಕ್ಲೀನ್ ಚೀಟ್ ಪಡೆದಿದ್ದರು.
ಆದರೆ, ಮತ್ತೊಂದು ಪ್ರಕರಣದಲ್ಲಿ ಸಿಲುಕಿಕೊಂಡಿದ್ದರು. ಶನಿವಾರ(ನ.3) ಬೆಂಗಳೂರು ಮೆಟ್ರೋಪಾಲಿಟನ್ ಟಾಸ್ಕ್ ಫೋರ್ಸ್ ಪೊಲೀಸರು ಭ್ರಷ್ಟಾಚಾರ ನಿಗ್ರಹ ತಡೆ ಕಾಯ್ದೆಯಡಿಯಲ್ಲಿ ದೂರು ದಾಖಲಿಸಿಕೊಂಡು ಎಫ್ ಐಆರ್ ಹಾಕಿದ್ದರು.
ದಿನೇಶ್ ಕಲ್ಲಹಳ್ಳಿ ಎಂಬುವರು ನೀಡಿದ ದೂರಿನ ಮೇರೆಗೆ ಬಿಎಂಟಿಎಫ್ ತಂಡ ಕಾನೂನು ಸಚಿವ ಸುರೇಶ್ ಕುಮಾರ್ ಅಲ್ಲದೆ ಮಾಜಿ ವಸತಿ ಸಚಿವ ಕೃಷ್ಣಯ್ಯ ಶೆಟ್ಟಿ ಮತ್ತು ಐಎಎಸ್ ಅಧಿಕಾರಿ ವಿ.ಪಿ. ಬಳಗಾರ್, ಕೆ. ಗೋಪಿನಾಥ್, ಕೆ. ನರಹರಿ ಮತ್ತು ಸೂರ್ಯನಾರಾಯಣ ರಾವ್ ಅವರನ್ನು ಸಹ ಆರೋಪಿಗಳಾಗಿ ಹೆಸರಿಸಿತ್ತು.
ಆರೋಪಿಗಳ ಮೇಲೆ ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988ರ ಅನ್ವಯ 13(1) ಹಾಗೂ 13(2), ಸಿಆರ್ ಪಿಸಿ ಸೆಕ್ಷನ್ 157 ಜೊತೆಗೆ ಐಪಿಸಿ ಸೆಕ್ಷನ್ 120ಬಿ, 149, 166, 218, 406,409 ಹಾಗೂ 420 ಕಲಂ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಏನಿದು ಪ್ರಕರಣ: ಲಗ್ಗೆರೆ ಬಳಿ ಇರುವ ಸರ್ವೆ ನಂ. 9/2 ಆರೆಸ್ಸೆಸ್ ಮುಖಂಡ ಮಾಜಿ ಎಂಎಲ್ ಸಿ ನರಹರಿ ಎಂಬುವರ ಸೋದರ ಗೋಪಿನಾಥ್ ಅವರಿಗೆ ಸೇರಿದೆ.
ಸದರಿ 4.2 ಎಕರೆ ಜಮೀನನ್ನು ಸ್ಲಂ ನಿವಾಸಿಗಳಿಗೆ ಮನೆ ನಿರ್ಮಿಸುವ ಸಲುವಾಗಿ 1982ರಲ್ಲಿ ಡಿನೋಟಿಫೈ ಮಾಡಲಾಗಿತ್ತು. 2003ರಲ್ಲಿ ಭೂಮಿ ವಶಕ್ಕೆ ತೆಗೆದುಕೊಳ್ಳಲಾಗಿತ್ತು. 6 ವರ್ಷ ನಂತರ ಸ್ಲಂ ಬೋರ್ಡ್(Karnataka Slum Development Board (KSDB)) ಮನೆ ನಿರ್ಮಾಣಕ್ಕೆ ಹಣ ಬಿಡುಗಡೆ ಮಾಡಿತ್ತು.
ಆದರೆ, ಯಡಿಯೂರಪ್ಪ ಅವರು ಅಧಿಕಾರದಲ್ಲಿದ್ದ ಕಾಲದಲ್ಲಿ ಸಚಿವ ಸುರೇಶ್ ಕುಮಾರ್ ಅವರು ತಮ್ಮ ಪ್ರಭಾವ ಬಳಸಿ ಅಕ್ರಮವಾಗಿ ಡಿನೋಟಿಫೈ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಗೋಪಿನಾಥ್ ಅವರಿಗೆ ಅನುಕೂಲವಾಗುವಂತೆ ಡಿನೋಟಿಫೈ ಮಾಡಿದ ಸರ್ಕಾರದ ಆದೇಶ ಹೊರಡಿಸಿತ್ತು.
ಸರ್ಕಾರದ ಆದೇಶಕ್ಕೆ ಕಾನೂನು ಕಾರ್ಯದರ್ಶಿಗಳು ವಿರೋಧ ವ್ಯಕ್ತಪಡಿಸಿದ್ದರು. ಆದರೆ, ಕಾನೂನು ಸಚಿವ ಸುರೇಶ್ ಕುಮಾರ್ ಅವರು ಅಕೌಂಟ್ ಜನರಲ್(AG) ಒಪ್ಪಿಗೆ ಸಿಕ್ಕಿದೆ ಎಂಬ ಕಾರಣ ಕೊಟ್ಟು ಡಿನೋಟಿಫೈ ಮಾಡಿದ್ದರು ಎಂದು ಆರೋಪಿಸಲಾಗಿದೆ.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications