ಟಾಗೋರ್ ದ್ವಿತೀಯ ದರ್ಜೆ ನಾಟಕಕಾರ : ಕಾರ್ನಾಡ್

ನೋಬೆಲ್ ಪ್ರಶಸ್ತಿ ಪಡೆದಿರುವ ಪ್ರಥಮ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ರವೀಂದ್ರನಾಥ ಟಾಗೋರ್ ಅವರು, "ಅತ್ಯದ್ಭುತ ಕವಿ, ಆದರೆ, ಎರಡನೇ ದರ್ಜೆಯ ನಾಟಕಕಾರ. ಅವರ ನಾಟಕಗಳನ್ನು ಸಹಿಸಿಕೊಳ್ಳಲು ಸಾಧ್ಯವೇ ಇಲ್ಲ" ಎಂದು ಖುದ್ದು ನಾಟಕರಾರರಾಗಿರುವ 74 ವರ್ಷದ ಗಿರೀಶ್ ಕಾರ್ನಾಡ್ ಅವರು ಅಜೀಂ ಪ್ರೇಂಜಿ ಫೌಂಡೇಷನ್ ಆಯೋಜಿಸಿದ್ದ 'ಸಂಸ್ಕೃತಿ ಮತ್ತು ಮನರಂಜನೆ' ಕಾರ್ಯಕ್ರಮದಲ್ಲಿ ಗುರುವಾರ ಹೇಳಿದ್ದಾರೆ.
"ರವೀಂದ್ರನಾಥ ಟಾಗೋರ್ ಅವರು ಅತ್ಯಂತ ಕಳಪೆಮಟ್ಟದ ನಾಟಕಗಳನ್ನು ಬರೆದಿದ್ದಾರೆ. ನಾವು ಪ್ರಾಯೋಗಿಕವಾಗಿ ಯೋಚಿಸುವುದನ್ನು ಕಲಿಯಬೇಕು" ಎಂದು ಕನ್ನಡದಲ್ಲಿ ಹಯವದನ, ನಾಗಮಂಡಲ, ತುಘಲಕ್, ಅಂಜು ಮಲ್ಲಿಗೆ, ತಲೆದಂಡ ಮುಂತಾದ ಖ್ಯಾತ ನಾಟಕಗಳನ್ನು ಬರೆದಿರುವ ಗಿರೀಶ್ ಕಾರ್ನಾಡ್ ಅವರು ಮತ್ತೊಂದು ಚರ್ಚೆಗೆ ವೇದಿಕೆ ಕಲ್ಪಿಸಿದ್ದಾರೆ.
ನೈಪಾಲ್ ಅವರನ್ನು ಮುಸ್ಲಿಂ ವಿರೋಧಿ ಎಂದು ವ್ಯಾಖ್ಯಾನಿಸಿ, ಅವರನ್ನು ಸನ್ಮಾನ ಮಾಡುವ ಅವಶ್ಯಕತೆಯಾದರೂ ಏನಿತ್ತು ಎಂದಿದ್ದಕ್ಕೆ ಸಾರಸ್ವತ ಲೋಕದಿಂದ ಅನೇಕ ಪರವಿರೋಧಿ ಹೇಳಿಕೆಗಳು ಬಂದಿವೆ. ಮತ್ತೊಬ್ಬ ಖ್ಯಾತ ಲೇಖಕಿ ಬಾಂಗ್ಲಾ ದೇಶದ ತಸ್ಲೀಮಾ ನಸ್ರೀನ್ ಅವರು, "ನೈಪಾಲ್ ಏನಾದರೂ ಭಾರತೀಯ ಭಾಷೆಯಲ್ಲಿ ಪುಸ್ತಕಗಳನ್ನು ಬರೆದಿದ್ದರೆ, ಭಾರತದಲ್ಲಿ ಕೂಡ ಅವರು ಗುರುತಿಸಲ್ಪಡುತ್ತಿರಲಿಲ್ಲ" ಎಂದು ಕಾರ್ನಾಡ್ ಅವರನ್ನು ಬೆಂಬಲಿಸಿ ಟ್ವೀಟ್ ಮಾಡಿದ್ದರು.
ಎಷ್ಟೇ ಟೀಕೆಗಳು ಬಂದಿದ್ದರೂ ಕಾರ್ನಾಡ್ ಅವರು ತಮ್ಮ ಹೇಳಿಕೆಯನ್ನು ಬಲವಾಗಿ ಸಮರ್ಥಿಸಿಕೊಂಡಿದ್ದರು. ಖ್ಯಾತ ಲೇಖಕ ನೈಪಾಲ್ ಅವರನ್ನು ಬಹಿರಂಗವಾಗಿ ಟೀಕಿಸಿದ್ದಕ್ಕೆ ಯಾವುದೇ ಖೇದವಿಲ್ಲ ಎಂದು ನುಡಿದಿದ್ದರು. ನನ್ನನ್ನು ಬೇಕಾದರೆ ಜಾತ್ಯತೀತ ಲೇಖಕ ಎಂದು ಜರೆಯಿರಿ, ಆದರೆ, ಮುಸ್ಲಿಂ ಸಮುದಾಯವನ್ನು ತೆಗಳುವ ಹಕ್ಕು ನೈಪಾಲ್ ಅವರಿಗೆ ಇಲ್ಲ. ಭಾರತದ ಇತಿಹಾಸದಲ್ಲಿ ಮುಸ್ಲಿಂರು ಪ್ರಮುಖ ಪಾತ್ರವಹಿಸಿದ್ದಾರೆ ಎಂಬ ಜ್ಞಾನ ಕೂಡ ನೈಪಾಲ್ ಅವರಿಗೆ ಇಲ್ಲ ಎಂದು ಗಿರೀಶ್ ಕಾರ್ನಾಡ್ ಕೆಂಡ ಕಾರಿದ್ದರು.
ಮುಂಬೈನಲ್ಲಿ ನಡೆದ ಸಾಹಿತ್ಯ ಸಮ್ಮೇಳನದಲ್ಲಿ ತಮ್ಮ ರಂಗಭೂಮಿಯ ಪಯಣದ ಬಗ್ಗೆ ಕಾರ್ನಾಡ್ ಅವರನ್ನು ಆಹ್ವಾನಿಸಲಾಗಿತ್ತು. ಅವರಿಗೆ ನೀಡಿದ್ದ ವಿಷಯಕ್ಕೂ ನೈಪಾಲ್ಗೂ ಸಂಬಂಧವೇ ಇರಲಿಲ್ಲ. ನೈಪಾಲ್ ಬಗ್ಗೆ ಟೀಕಿಸಿ ಅನಗತ್ಯ ವಿವಾದ ಸೃಷ್ಟಿಸುವ ಅವಶ್ಯಕತೆಯೇ ಇರಲಿಲ್ಲ ಎಂದು ಮುಂಬೈ ಸಾಹಿತ್ಯ ಸಮ್ಮೇಳನದ ಆಯೋಜಕ ಅನಿಲ್ ಧರಕರ್ ಅವರು ಗಿರೀಶ್ ಕಾರ್ನಾಡ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಮೊದಲು ನೈಪಾಲ್, ಈಗ ರವೀಂದ್ರನಾಥ ಟಾಗೋರ್, ಮುಂದೆ ಗಿರೀಶ್ ಕಾರ್ನಾಡ್ ಅವರ ಟೀಕೆಗೆ ಯಾರು ಗುರಿಯಾಗಲಿದ್ದಾರೆ?
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications