ಟಾಗೋರ್ ದ್ವಿತೀಯ ದರ್ಜೆ ನಾಟಕಕಾರ : ಕಾರ್ನಾಡ್

ನೋಬೆಲ್ ಪ್ರಶಸ್ತಿ ಪಡೆದಿರುವ ಪ್ರಥಮ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ರವೀಂದ್ರನಾಥ ಟಾಗೋರ್ ಅವರು, "ಅತ್ಯದ್ಭುತ ಕವಿ, ಆದರೆ, ಎರಡನೇ ದರ್ಜೆಯ ನಾಟಕಕಾರ. ಅವರ ನಾಟಕಗಳನ್ನು ಸಹಿಸಿಕೊಳ್ಳಲು ಸಾಧ್ಯವೇ ಇಲ್ಲ" ಎಂದು ಖುದ್ದು ನಾಟಕರಾರರಾಗಿರುವ 74 ವರ್ಷದ ಗಿರೀಶ್ ಕಾರ್ನಾಡ್ ಅವರು ಅಜೀಂ ಪ್ರೇಂಜಿ ಫೌಂಡೇಷನ್ ಆಯೋಜಿಸಿದ್ದ 'ಸಂಸ್ಕೃತಿ ಮತ್ತು ಮನರಂಜನೆ' ಕಾರ್ಯಕ್ರಮದಲ್ಲಿ ಗುರುವಾರ ಹೇಳಿದ್ದಾರೆ.
"ರವೀಂದ್ರನಾಥ ಟಾಗೋರ್ ಅವರು ಅತ್ಯಂತ ಕಳಪೆಮಟ್ಟದ ನಾಟಕಗಳನ್ನು ಬರೆದಿದ್ದಾರೆ. ನಾವು ಪ್ರಾಯೋಗಿಕವಾಗಿ ಯೋಚಿಸುವುದನ್ನು ಕಲಿಯಬೇಕು" ಎಂದು ಕನ್ನಡದಲ್ಲಿ ಹಯವದನ, ನಾಗಮಂಡಲ, ತುಘಲಕ್, ಅಂಜು ಮಲ್ಲಿಗೆ, ತಲೆದಂಡ ಮುಂತಾದ ಖ್ಯಾತ ನಾಟಕಗಳನ್ನು ಬರೆದಿರುವ ಗಿರೀಶ್ ಕಾರ್ನಾಡ್ ಅವರು ಮತ್ತೊಂದು ಚರ್ಚೆಗೆ ವೇದಿಕೆ ಕಲ್ಪಿಸಿದ್ದಾರೆ.
ನೈಪಾಲ್ ಅವರನ್ನು ಮುಸ್ಲಿಂ ವಿರೋಧಿ ಎಂದು ವ್ಯಾಖ್ಯಾನಿಸಿ, ಅವರನ್ನು ಸನ್ಮಾನ ಮಾಡುವ ಅವಶ್ಯಕತೆಯಾದರೂ ಏನಿತ್ತು ಎಂದಿದ್ದಕ್ಕೆ ಸಾರಸ್ವತ ಲೋಕದಿಂದ ಅನೇಕ ಪರವಿರೋಧಿ ಹೇಳಿಕೆಗಳು ಬಂದಿವೆ. ಮತ್ತೊಬ್ಬ ಖ್ಯಾತ ಲೇಖಕಿ ಬಾಂಗ್ಲಾ ದೇಶದ ತಸ್ಲೀಮಾ ನಸ್ರೀನ್ ಅವರು, "ನೈಪಾಲ್ ಏನಾದರೂ ಭಾರತೀಯ ಭಾಷೆಯಲ್ಲಿ ಪುಸ್ತಕಗಳನ್ನು ಬರೆದಿದ್ದರೆ, ಭಾರತದಲ್ಲಿ ಕೂಡ ಅವರು ಗುರುತಿಸಲ್ಪಡುತ್ತಿರಲಿಲ್ಲ" ಎಂದು ಕಾರ್ನಾಡ್ ಅವರನ್ನು ಬೆಂಬಲಿಸಿ ಟ್ವೀಟ್ ಮಾಡಿದ್ದರು.
ಎಷ್ಟೇ ಟೀಕೆಗಳು ಬಂದಿದ್ದರೂ ಕಾರ್ನಾಡ್ ಅವರು ತಮ್ಮ ಹೇಳಿಕೆಯನ್ನು ಬಲವಾಗಿ ಸಮರ್ಥಿಸಿಕೊಂಡಿದ್ದರು. ಖ್ಯಾತ ಲೇಖಕ ನೈಪಾಲ್ ಅವರನ್ನು ಬಹಿರಂಗವಾಗಿ ಟೀಕಿಸಿದ್ದಕ್ಕೆ ಯಾವುದೇ ಖೇದವಿಲ್ಲ ಎಂದು ನುಡಿದಿದ್ದರು. ನನ್ನನ್ನು ಬೇಕಾದರೆ ಜಾತ್ಯತೀತ ಲೇಖಕ ಎಂದು ಜರೆಯಿರಿ, ಆದರೆ, ಮುಸ್ಲಿಂ ಸಮುದಾಯವನ್ನು ತೆಗಳುವ ಹಕ್ಕು ನೈಪಾಲ್ ಅವರಿಗೆ ಇಲ್ಲ. ಭಾರತದ ಇತಿಹಾಸದಲ್ಲಿ ಮುಸ್ಲಿಂರು ಪ್ರಮುಖ ಪಾತ್ರವಹಿಸಿದ್ದಾರೆ ಎಂಬ ಜ್ಞಾನ ಕೂಡ ನೈಪಾಲ್ ಅವರಿಗೆ ಇಲ್ಲ ಎಂದು ಗಿರೀಶ್ ಕಾರ್ನಾಡ್ ಕೆಂಡ ಕಾರಿದ್ದರು.
ಮುಂಬೈನಲ್ಲಿ ನಡೆದ ಸಾಹಿತ್ಯ ಸಮ್ಮೇಳನದಲ್ಲಿ ತಮ್ಮ ರಂಗಭೂಮಿಯ ಪಯಣದ ಬಗ್ಗೆ ಕಾರ್ನಾಡ್ ಅವರನ್ನು ಆಹ್ವಾನಿಸಲಾಗಿತ್ತು. ಅವರಿಗೆ ನೀಡಿದ್ದ ವಿಷಯಕ್ಕೂ ನೈಪಾಲ್ಗೂ ಸಂಬಂಧವೇ ಇರಲಿಲ್ಲ. ನೈಪಾಲ್ ಬಗ್ಗೆ ಟೀಕಿಸಿ ಅನಗತ್ಯ ವಿವಾದ ಸೃಷ್ಟಿಸುವ ಅವಶ್ಯಕತೆಯೇ ಇರಲಿಲ್ಲ ಎಂದು ಮುಂಬೈ ಸಾಹಿತ್ಯ ಸಮ್ಮೇಳನದ ಆಯೋಜಕ ಅನಿಲ್ ಧರಕರ್ ಅವರು ಗಿರೀಶ್ ಕಾರ್ನಾಡ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಮೊದಲು ನೈಪಾಲ್, ಈಗ ರವೀಂದ್ರನಾಥ ಟಾಗೋರ್, ಮುಂದೆ ಗಿರೀಶ್ ಕಾರ್ನಾಡ್ ಅವರ ಟೀಕೆಗೆ ಯಾರು ಗುರಿಯಾಗಲಿದ್ದಾರೆ?
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications