ನ.10 ಮಲಾಲ ಗೌರವ ದಿನಾಚರಣೆ : ವಿಶ್ವಸಂಸ್ಥೆ
ನ್ಯೂಯಾರ್ಕ್, ನ.9 : ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಪ್ರೇರಣೆಯಾಗಿರುವ ಪಾಕಿಸ್ತಾನದ ಮಕ್ಕಳ ಹಕ್ಕುಗಳ ಹೋರಾಟಗಾರ್ತಿ ಮಲಾಲ ಯೂಸಫಾಝಿ ಗೌರವಾರ್ಥ ನ.10 ರಂದು 'ಮಲಾಲ ದಿನಾಚರಣೆ' ವಿಶ್ವದೆಲ್ಲೆಡೆ ಆಚರಿಸಲಾಗುವುದು ಎಂದು ವಿಶ್ವಸಂಸ್ಥೆ ಅಧ್ಯಕ್ಷ ಬಾನ್ ಕಿನ್ ಮೂನ್ ಘೋಷಿಸಿದ್ದಾರೆ.
ನ.10ಕ್ಕೆ ಸರಿಯಾಗಿ ಮಲಾಲ ಮೇಲೆ ತಾಲಿಬಾನಿಗಳು ದಾಳಿ ಮಾಡಿ 30 ದಿನವಾಗುತ್ತದೆ. ನ. 10ರಂದು ವಿಶ್ವದೆಲ್ಲೆಡೆ ಮಲಾಲ ದಿನ ಆಚರಿಸಿ ಶಿಕ್ಷಣದ ಮಹತ್ವ ಸಾರಿದ ಮಲಾಲಳಿಗೆ ವಿಶ್ವದ ಮಹಿಳೆಯರ ಸಬಲೀಕರಣಕ್ಕೆ ಈ ದಿನ ಇನ್ನಷ್ಟು ಶಕ್ತಿ ತುಂಬಲಿ ಎಂದು ವಿಶ್ವಸಂಸ್ಥೆ ಅಧ್ಯಕ್ಷ ಬಾನ್ ಕಿ ಮೂನ್ ಹೇಳಿದ್ದಾರೆ.

ಶಿಕ್ಷಣ ಪ್ರತಿಯೊಬ್ಬರ ಹಕ್ಕು. ವಿಶ್ವಸಂಸ್ಥೆಯ ಶಿಕ್ಷಣ ಅಭಿಯಾನಕ್ಕೆ ಮಲಾಲ ದಿನಾಚರಣೆ ನಾಂದಿಯಾಗಲಿದೆ ಮತ್ತು ಶಿಕ್ಷಣ ಕೆಲವೇ ಮಂದಿಯ ಅಡಿಯಾಳಲ್ಲ ಎಂದು ಮೂನ್ ಹೇಳಿದ್ದಾರೆ.
ವಿಶ್ವಸಂಸ್ಥೆಯ ವಿಶ್ವ ಶಿಕ್ಷಣ ವಿಶೇಷ ನಿಯೋಗ ಶುಕ್ರವಾರ ಪಾಕಿಸ್ತಾನಕ್ಕೆ ಭೇಟಿ ನೀಡಿದೆ ಮತ್ತು ಪಾಕಿಸ್ತಾನದ ಅಧ್ಯಕ್ಷ ಅಸಿಫ್ ಅಲಿ ಜರ್ದಾರಿ ಅವರು ಪಾಕಿಸ್ತಾನದಲ್ಲಿ ಹೆಣ್ಣು ಮಕ್ಕಳ ಶಿಕ್ಷಣವನ್ನು ವಾಸ್ತವವಾಗಿ ಪರಿವರ್ತಿಸುತ್ತೇನೆ ಎಂದು ಒಪ್ಪಂದಕ್ಕೆ ಸಹಿ ಮಾಡಿದ್ದಾರೆ.
ವಿಶ್ವಸಂಸ್ಥೆಯ ಶಿಕ್ಷಣ ಅಭಿಯಾನಕ್ಕೆ ಮಲಾಲ ದಿನಾಚರಣೆ ನಾಂದಿಯಾಗಲಿದೆ ಮತ್ತು ಶಿಕ್ಷಣ ಕೆಲವೇ ಮಂದಿಯ ಅಡಿಯಾಳಲ್ಲ ಎಂದು ಮೂನ್ ತನ್ನ ಘೋಷಣೆಯಲ್ಲಿ ಹೇಳಿದ್ದಾರೆ.
ಅಕ್ಟೋಬರ್ 9 ರಂದು ಮಲಾಲ ಶಾಲೆಯಿಂದ ಹಿಂತಿರುಗುತ್ತಿದ್ದ ವೇಳೆ ತಾಲಿಬಾನಿಗಳು ಆಕೆ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ಆಕೆಗೆ ಪಾಕಿಸ್ತಾನದಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು.
ನಂತರ ಅಲ್ಲಿಂದ ಆಕೆಯನ್ನು ಲಂಡನ್ ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಲಾಲ ಈಗ ಚಿಕಿತ್ಸೆ ಸ್ಪಂದಿಸುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾಳೆ. ಪಾಕಿಸ್ತಾನದಲ್ಲಿ ಹೆಣ್ಣು ಮಕ್ಕಳಿಗೆ ಶಿಕ್ಷಣ ದೊರಕಿಸಿಕೊಡುವ ಬಗ್ಗೆ ಈ 15 ವರ್ಷದ ದಿಟ್ಟ ಬಾಲಕಿ ಹೋರಾಡುತ್ತಿದ್ದಾಳೆ.
ಪಾಕಿಸ್ತಾನದ ಶಾಂತಿ ಪುರಸ್ಕಾರ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿರುವ ಮಲಾಲ ಕನಸಿಗೆ ತಾಲಿಬಾನಿಗಳು ಅಡ್ಡ ನಿಂತಿದ್ದಾರೆ.
ಮಲಾಲ ಎಂಬ ಆಶಾಕಿರಣ: ಪಾಕಿಸ್ತಾನದ ಸ್ವಾತ್ ಜಿಲ್ಲೆಯ ಮಿಂಗೋರಾ ಎಂಬ ಸಣ್ಣ ಪಟ್ಟಣದಲ್ಲಿ ಮಲಾಲ ಹುಟ್ಟಿದ್ದು ಜುಲೈ 11, 1997. ತಾಲಿಬಾನಿಗಳ ಹುಟ್ಟೂರಾದ ಅಫಘಾನಿಸ್ತಾನಕ್ಕೆ ಹೊಂದಿಕೊಂಡಿರುವ ಈ ಕಣಿವೆಯಲ್ಲಿ ಜನ ಜೀವನ ಕಷ್ಟಕರ.
ಕವಿ, ಶಿಕ್ಷಕನಾಗಿರುವ ಮಲಾಲ ತಂದೆ ಜಿಯಾಯುದ್ದಿನ್ 'ಖುಷಾಲ್ ಪಬ್ಲಿಕ್ ಸ್ಕೂಲ್' ಎಂಬ ಹೆಣ್ಣುಮಕ್ಕಳ ಶಾಲೆ ನಡೆಸುತ್ತಿದ್ದರು. ಮಗಳನ್ನು ಡಾಕ್ಟರ್ ಅಥವಾ ಭವಿಷ್ಯದ ರಾಜಕಾರಣಿ ಮಾಡುವ ಕನಸು ಹೊತ್ತಿದ್ದಾರೆ.
2009ರಲ್ಲಿ ಮಲಾಲಳಿಗೆ ಬಿಬಿಸಿಯ ಉರ್ದು ಪತ್ರಿಕೆಗೆ ಡೈರಿ ಬರೆಯುವ ಅವಕಾಶ ಸಿಕ್ಕಿತ್ತು. 11ನೇ ವಯಸ್ಸಿನಲ್ಲೇ ತಾಲಿಬಾನಿಗಳ ವಿರುದ್ಧ ಬಹಿರಂಗವಾಗಿ ಭಾಷಣ ಮಾಡಿದ ಮಲಾಲ, ಶಿಕ್ಷಣ ಎಲ್ಲರ ಹಕ್ಕು ಎಂದು ಸಾರಿದಳು.
ಸ್ವಾತ್ ಕಣಿವೆಯಲ್ಲಿರುವ ಯಾವ ಹೆಣ್ಣುಮಕ್ಕಳೂ ಶಾಲೆಗಳಿಗೆ ಹೋಗಬಾರದೆಂದು ತಾಲಿಬಾನಿಗಳು ಕಟ್ಟಪ್ಪಣೆ ಹೊರಡಿಸಿದರೂ ಲೆಕ್ಕಿಸದೆ ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಹೋರಾಟ ನಡೆಸಿದ ಈ ಪುಟ್ಟ ಹೋರಾಟಗಾರ್ತಿಗೆ ತಾಲಿಬಾನಿ ರಕ್ಕಸರು ಗುಂಡಿಕ್ಕಿ ಕೊಲ್ಲಲು ವಿಫಲ ಯತ್ನ ನಡೆಸಿದರು. ಅದೃಷ್ಟವಶಾತ್ ಈ ದೇವರ ಕೂಸು ಸಹೃದಯಿಗಳ ಹಾರೈಕೆಯಿಂದ ಬದುಕುಳಿದೆ.
I have a new dream ... I must be a politician to save this country. There are so many crises in our country. I want to remove these crises. My purpose is to serve humanity. ಎನ್ನುವ ಮಲಾಲಳ ಬೆನ್ನ ಹಿಂದೆ ವಿಶ್ವಸಂಸ್ಥೆ ನಿಂತಿದೆ.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications