ಕುಕ್ಕೆ:ಬ್ರಾಹ್ಮಣರ ಎಂಜಲೆಲೆಯ ಮೇಲೆ ಮಡೆಸ್ನಾನ ನಿಷೇಧ

ಇದರ ಬದಲು ದೇವರ ನೈವೇದ್ಯ ಹಾಕಲಾದ ಎಲೆಗಳ ಮೇಲೆ ಭಕ್ತಾದಿಗಳು ಉರುಳುವ ಪದ್ದತಿಯನ್ನು ಅಳವಡಿಸಿಕೊಳ್ಳಲಿ. ಗರ್ಭಗುಡಿಯಲ್ಲಿ ದೇವರಿಗೆ ಅನ್ನವನ್ನು ನೈವೇದ್ಯ ನೀಡಿ ನಂತರ ನೈವೇದ್ಯವನ್ನು ದೇವಾಲಯದಲ್ಲಿ ಆವರಣದಲ್ಲಿಟ್ಟು ಭಕ್ತರಿಗೆ ಉರುಳುಸೇವೆ ಮಾಡಲು ಅವಕಾಶ ನೀಡಬಹುದು ಎನ್ನುವ ಸಲಹೆಯನ್ನು ಕೋರ್ಟ್ ಸರಕಾರಕ್ಕೆ ನೀಡಿದೆ.
ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ಹಾಗೂ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರನ್ನು ಒಳಗೊಂಡ ಹೈಕೋರ್ಟ್ ವಿಭಾಗೀಯ ಪೀಠ, ಮೇಲು ಜಾತಿಯ ಜನರು ತಿಂದುಬಿಟ್ಟ ಊಟದ ಮೇಲೆ ಕೆಳ ವರ್ಗಗಳ ಜನರು ಉರುಳುವ ಆಚರಣೆ ಸಾಮಾಜಿಕವಾಗಿ ಕಳವಳ ಮೂಡಿಸುವಂತಹದ್ದು. ಅದನ್ನು ಕೋರ್ಟ್ ಒಪ್ಪಿಕೊಳ್ಳುವುದಿಲ್ಲ. ಮೇಲ್ವರ್ಗದ ಜನರೇ ಕೆಳ ವರ್ಗದ ಜನರು ತಿಂದುಬಿಟ್ಟ ಊಟದ ಮೇಲೆ ಏಕೆ ಉರುಳಬಾರದು ಎಂದು ಪ್ರಶ್ನಿಸಿತು.
ಮಡೆಸ್ನಾನ ಪದ್ಧತಿ ನಿಷೇಧಿಸಬೇಕು ಎಂದು ಕೋರಿ ನಿಡುಮಾಮಿಡಿ ಮಠದ ವೀರಭದ್ರ ಚನ್ನಮಲ್ಲ ಸ್ವಾಮೀಜಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ, ಅನ್ನದ ಮೇಲೆ ಉರುಳುವ ಹರಕೆ ಸಂಪೂರ್ಣ ಸ್ವಯಂಪ್ರೇರಿತವಾಗಿರಲಿ ಎಂದು ನಿರ್ದೇಶನ ನೀಡಿದೆ.
ಮಡೆಸ್ನಾನದಲ್ಲಿ ಎಲ್ಲ ಸಮುದಾಯದವರೂ ಪಾಲ್ಗೊಳ್ಳುತ್ತಾರೆ. ಇದನ್ನು ಆಚರಿಸುವಂತೆ ಯಾರ ಮೇಲೂ ಒತ್ತಡ ಹೇರುವುದಿಲ್ಲ. ಸರ್ಕಾರ ಎಂದೂ ಜಾತಿ ಅಥವಾ ಪಂಕ್ತಿ ಭೇದಕ್ಕೆ ಉತ್ತೇಜನ ನೀಡುವುದಿಲ್ಲ.
ಆದರೆ, ಮಡೆಸ್ನಾನ ಧಾರ್ಮಿಕ ನಂಬಿಕೆಯ ವಿಷಯವಾಗಿದ್ದು, ಜನರು ಸ್ವಯಂಪ್ರೇರಿತರಾಗಿ ಕೈಗೊಳ್ಳುತ್ತಿರುವ ಈ ಆಚರಣೆಯನ್ನು ನಿಷೇಧಿಸಲು ಸಾಧ್ಯವಿಲ್ಲ. ಹೀಗಾಗಿ, ಮಡೆಸಾನ್ನವನ್ನು ಬದಲಾದ ಸ್ವರೂಪ ದಲ್ಲಿ ಮುಂದುವರಿಸಲು ಅವಕಾಶ ನೀಡುವುದು ಸೂಕ್ತ ಎಂಬುದು ಸರ್ಕಾರದ ಭಾವನೆ ಎಂದು ಸರಕಾರ ಪರ ವಕೀಲರು ವಾದ ಮಂಡಿಸಿದರು.
ಇದು ಜನರ ನಂಬಿಕೆಯ ಪ್ರಶ್ನೆಯಾಗಿದ್ದು, ಜನರು ಸ್ವಯಂಪ್ರೇರಣೆಯಿಂದ ಪ್ರಜ್ಞಾಪೂರ್ವಕವಾಗಿ ಆಚರಣೆ ಮಾಡುತ್ತಿರುವುದರಿಂದ ಅದನ್ನು ನಿಷೇಧ ಮಾಡುವಂತೆ ಆದೇಶಿಸಲಾಗದು. ಆದರೆ, ಜನರೇ ಪದ್ದತಿಯನ್ನು ನಿಧಾನವಾಗಿ ಕೈಬಿಡಬೇಕು. ಹಾಗಾಗಿ ಮಡೆಸ್ನಾನ ಪದ್ದತಿಯನ್ನು ರೂಪಾಂತರಗೊಳಿಸಿ ಆಚರಿಸಲಿ ಎಂದು ಕೋರ್ಟ್ ಅಭಿಪ್ರಾಯಪಟ್ಟಿತು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications