ರಾಯಣ್ಣ ಪುತ್ಥಳಿಗೆ ಚಪ್ಪಲಿಯೇಟು, ಚಿತ್ರದುರ್ಗ ಉದ್ವಿಗ್ನ
ಚಿತ್ರದುರ್ಗದಲ್ಲಿ ಶನಿವಾರ ಟಿಪ್ಪು ಸುಲ್ತಾನ್ (20 ನವೆಂಬರ್, 1750 - 4 ಮೇ 1799) ಜಯಂತಿಯನ್ನು ಆಚರಿಸಲಾಗುತ್ತಿತ್ತು. ಒಂದು ಕೋಮಿಗೆ ಸೇರಿದ ಜನರು ಊರಿನಲ್ಲಿ ಮೆರವಣಿಗೆ ನಡೆಸುತ್ತಿದ್ದರು. ಆ ಮೆರವಣಿಗೆ ಗಾಯತ್ರಿ ವೃತ್ತದಲ್ಲಿ ಹಾದುಹೋಗುವಾಗ ಕೆಲ ಕಿಡಿಗೇಡಿಗಳು ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಚಪ್ಪಲಿಯಿಂದ ಹೊಡೆದಿದ್ದಾರೆ.
ಇದನ್ನು ನೋಡಿದ ಕೆಲವರು ರಾಯಣ್ಣನನ್ನು ಅವಮಾನ ಮಾಡಿದವರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಸಂಗೊಳ್ಳಿ ರಾಯಣ್ಣನಿಗೆ ಅವಮಾನ ಮಾಡಿದ ಸುದ್ದಿ ಕಾಳ್ಗಿಚ್ಚಿನಂತೆ ಊರಲ್ಲೆಲ್ಲ ಹಬ್ಬಿ ಹಿಂದೂಪರ ಸಂಘಟನೆಗಳು ಕಿಡಿಗೇಡಿಗಳ ಮೇಲೆ ಹಲ್ಲೆ ಮಾಡಿದ್ದಾರೆ. ಸ್ಥಳದಲ್ಲಿ ಸಾವಿರಾರು ಜನ ಸೇರಿದ್ದರಿಂದ ಪರಿಸ್ಥಿತಿ ವಿಕೋಪಕ್ಕೆ ಹೋಗಿತ್ತು.
ಈ ಘಟನೆಯನ್ನು ಖಂಡಿಸಿ ಘಟನೆ ನಡೆದ ಸುತ್ತಲಿನ ಸ್ಥಳದಲ್ಲಿ ಕಲ್ಲು ತೂರಾಟ ಕೂಡ ನಡೆಯಿತು. ಕೂಡಲೆ ಸ್ಥಳಕ್ಕೆ ಆಗಮಿಸಿದ ಪೊಲೀಸ್ ಪಡೆ, ಕಲ್ಲು ತೂರಾಟ ನಡೆಸಿದ್ದ ವ್ಯಕ್ತಿಗಳನ್ನು ಚೆದುರಿಸಲು ಲಘು ಲಾಠಿ ಪ್ರಹಾರ ಕೂಡ ಮಾಡಿತು. ದೇಶಭಕ್ತ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಚಪ್ಪಲಿಯಿಂದ ಹೊಡೆದು ಅವಮಾನ ಮಾಡಿದ ಕಿಡಿಗೇಡಿಗಳನ್ನು ಕೂಡಲೆ ಬಂಧಿಸಿ ಶಿಕ್ಷಿಸಬೇಕು ಎಂದು ಹಿಂದೂಪರ ಸಂಘಟನೆಗಳು ಆಗ್ರಹಿಸಿವೆ.
ರಾಯಣ್ಣನ ಜೀವನಚರಿತ್ರೆ ಕುರಿತ ಕನ್ನಡ ಚಲನಚಿತ್ರ 'ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ' ಕನ್ನಡ ನಾಡಿನಾದ್ಯಂತ ಬಿಡುಗಡೆಯಾಗಿದ್ದು, ಕನ್ನಡ ಚಿತ್ರಪ್ರೇಮಿಗಳ ಪ್ರಶಂಸೆಗೆ ಪಾತ್ರವಾಗಿದೆ. ಬ್ರಿಟಿಷರ ವಿರುದ್ಧ ಹೋರಾಡಿ ಮಡಿದ ಮತ್ತೊಬ್ಬ ದೇಶಭಕ್ತೆ ಕಿತ್ತೂರು ಚೆನ್ನಮ್ಮನ ಬಗಲೈ ಭಂಟನಾಗಿದ್ದ ಸಂಗೊಳ್ಳಿ ರಾಯಣ್ಣ. ಇಂತಿರುವ ರಾಯಣ್ಣದ ಪುತ್ಥಳಿಯನ್ನು ಮತ್ತೊಬ್ಬ ವೀರ ಮದಕರಿ ನಾಯಕರ ಊರಾದ ಚಿತ್ರದುರ್ಗದಲ್ಲಿ ಸ್ಥಾಪಿಸಲಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ













Click it and Unblock the Notifications