ರಾಖಿ ಕೆಣಕಿದ ದಿಗ್ವಿಜಯ್ ಗೆ 50 ಕೋಟಿ ದಂಡ?
ದಿಗ್ವಿಜಯ್ ಹೇಳಿಕೆ ಖಂಡಿಸಿದ ರಾಖಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಮುಂಬೈ ಕಮೀಷನರ್ ಕಚೇರಿ ಹಾಗೂ ಮಹಾರಾಷ್ಟ್ರ ಗೃಹ ಇಲಾಖೆ ಕಾರ್ಯದರ್ಶಿ ಭೇಟಿ ಮಾಡಿ ದೂರು ಪತ್ರ ನೀಡಿದ್ದಾರೆ. ಕಾಂಗ್ರೆಸ್ ನಾಯಕ ದಿಗ್ವಿಜಯ್ ವಿರುದ್ಧ ಕ್ರಮ ಜರುಗಿಸುವಂತೆ ಮನವಿ ಮಾಡಿದ್ದಾರೆ.
ರಾಖಿ ಸಾವಂತ್ ಅವರಿಂದ ಲಿಖಿತ ದೂರು ಸ್ವೀಕರಿಸಲಾಗಿದೆ. ಅದರೆ, ಇನ್ನೂ ಕೇಸು ದಾಖಲಿಸಿಲ್ಲ. ಈ ಬಗ್ಗೆ ಕಾನೂನು ತಜ್ಞರ ಸಲಹೆ ಪಡೆದು ಮುಂದಿನ ಕ್ರಮ ಕೈಗೊಳ್ಳುವುದಾಗಿ ಗೋರೆ ಗಾಂವ್ ಪೊಲೀಸ್ ಠಾಣಾಧಿಕಾರಿ ಅರುಣ್ ಜಾಧವ್ ಹೇಳಿದ್ದಾರೆ.
ಸಾವಂತ್ ಅವರು ವೃತ್ತಿಪರ ಕಲಾವಿದೆ, ಸಮಾಜಿಕ ಕಾರ್ಯಕರ್ತೆ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುವುದರಿಂದ ಅವರ ಇಮೇಜ್ ಹಾಳಾಗುತ್ತದೆ ಎಂದು ರಾಖಿ ಸಾವಂತ್ ಪರ ವಕೀಲ ಇಜಾಜ್ ನಖ್ವಿ ಹೇಳಿದ್ದಾರೆ.
ಭ್ರಷ್ಟಾಚಾರ ವಿರೋಧಿ ಭಾರತ(IAC) ಸಂಘಟನೆಯ ಮುಖಂಡ, ಸಾಮಾಜಿಕ ಹೋರಾಟಗಾರ ಅರವಿಂದ್ ಕೇಜ್ರಿವಾಲ ಹಾಗೂ ಬಾಲಿವುಡ್ ನಟಿ ಕಮ್ ಐಟಂ ಡ್ಯಾನ್ಸರ್ ರಾಖಿ ಸಾವಂತ್ ಅವರನ್ನು ಹೋಲಿಸಿ ದಿಗ್ವಿಜಯ್ ಸಿಂಗ್ ಹೇಳಿಕೆ ನೀಡಿದ್ದರು.
"Arvind Kejriwal is like Rakhi Sawant. They both try and expose but with no substance. Apologies to Rakhi Sawant I am an old fan of hers !" ಎಂದು ಟ್ವೀಟ್ ಮಾಡಿದ್ದರು.
ಕಾಂಗ್ರೆಸ್ ಸರ್ಕಾರದ ವಿರುದ್ಧ ಅರವಿಂದ್ ಕೇಜ್ರಿವಾಲ ನಡೆಸಿರುವ ಸರಣಿ ಸುದ್ದಿಗೋಷ್ಠಿಗಳಿಂದ ಪರಿಣಾಮ ದಿಗ್ವಿಜಯ್ ಸಿಂಗ್ ಈ ರೀತಿ ಹೇಳಿಕೆ ನೀಡಿದ್ದರು.
ಎಐಸಿಸಿ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವದ್ರಾ ಹಾಗೂ ಡಿಎಲ್ ಎಫ್ ಸಂಸ್ಥೆ ನಡುವಿನ ಅಕ್ರಮ ವ್ಯವಹಾರಗಳನ್ನು ಅರವಿಂದ್ ಕೇಜ್ರಿವಾಲ ಮೊದಲಿಗೆ ಬಯಲಿಗೆಳೆದರು.
ನಂತರ ಪ್ರಮುಖ ಉದ್ಯಮಿ ರಿಲಯನ್ಸ್ ಕಂಪನಿಯ ಮುಖೇಶ್ ಅಂಬಾನಿ ಹಾಗೂ ಅನಿಲ್ ಅಂಬಾನಿ ಜೊತೆಗೆ ಯುಪಿಎ ಸರ್ಕಾರ ಅಕ್ರಮ ವ್ಯವಹಾರ ನಡೆಸಿದೆ ಎಂದು ಆರೋಪಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ













Click it and Unblock the Notifications