ಸರ್ಕಾರಿ ಶಾಲೆಗಳನ್ನು ಮುಚ್ಚುವುದಿಲ್ಲ: ಶೆಟ್ಟರ್

ಯಾವುದೇ ಕನ್ನಡ ಸರ್ಕಾರಿ ಶಾಲೆಗಳನ್ನು ಮುಚ್ಚುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ. ನಮ್ಮ ಸರ್ಕಾರ ಯಾವ ಶಾಲೆಯನ್ನು ಮುಚ್ಚುವುದಿಲ್ಲ ಎಂದು ಜಗದೀಶ್ ಶೆಟ್ಟರ್ ಅವರು ಬುಧವಾರ ಹೇಳಿದ್ದಾರೆ.
ಮಕ್ಕಳ ದಿನಾಚರಣೆ ದಿನ ಈ ಸಿಹಿ ಸುದ್ದಿಯನ್ನು ನೀಡಿದ ಶೆಟ್ಟರ್ ಮಾತನಾಡುತ್ತಾ, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ನಾವು ಬದ್ಧರಾಗಿದ್ದೇವೆ ಎಂದರು.
ಮಕ್ಕಳ ಅಭಿವೃದ್ಧಿಗಾಗಿ ವಿಶೇಷ ಯೋಜನೆಯನ್ನು ಸರ್ಕಾರ ಶೀಘ್ರದಲ್ಲೇ ಹೊರ ತರಲಿದೆ. ಇನ್ನಷ್ಟು ಸರ್ಕಾರಿ ಕನ್ನಡ ಶಾಲೆಗಳನ್ನು ಆರಂಭಿಸುವ ಸಾಧ್ಯತೆ ಕೂಡಾ ಇದೆ ಎಂದು ಸಿಎಂ ಶೆಟ್ಟರ್ ಹೇಳಿದರು.
ಶಾಲೆಗಳಲ್ಲಿ 2-3 ವಿದ್ಯಾರ್ಥಿಗಳಿರಲಿ, ನಾಲ್ಕೈದು ಶಿಕ್ಷಕರಿರಲಿ ನಾವು ಶಾಲೆ ಮುಚ್ಚುವುದಿಲ್ಲ. ಶಾಲೆಗಳಿಗೆ ಅಗತ್ಯವಿರುವ ಮೂಲ ಸೌಕರ್ಯ ಒದಗಿಸುತ್ತೇವೆ ಎಂದು ಶೆಟ್ಟರ್ ಹೇಳಿದರು.
ಕಡಿಮೆ ಮಕ್ಕಳ ಹಾಜರಾತಿವಿರುವ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚುವ ಅಥವಾ ಬೇರೆ ಶಾಲೆಗಳ ಜೊತೆ ವಿಲೀನಗೊಳಿಸುವ ಬಿಜೆಪಿ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು.
ಜ್ಞಾನಪೀಠ ಪ್ರಶಸ್ತಿ ಪಡೆದ ಹಿರಿಯ ಸಾಹಿತಿಗಳಾದ ಗಿರೀಶ್ ಕಾರ್ನಾಡ್, ಅನಂತಮೂರ್ತಿ, ಚಂದ್ರಶೇಖರ್ ಕಂಬಾರ ಅಲ್ಲದೆ ಚನ್ನವೀರ ಕಣವಿ ಮುಂತಾದವರು, ಸರಕಾರದ ಶಾಲೆ ಮುಚ್ಚುವ ನಿರ್ಧಾರವನ್ನು ಪ್ರಶ್ತ್ನಿಸಿ ಸಾರ್ವಜನಿಕ ಹಿತಾಶಕ್ತಿ ಅರ್ಜಿ ಸಲ್ಲಿಸಿದ್ದರು.
ಕರ್ನಾಟಕ ಹೈಕೋರ್ಟ್ ಪ್ರಕಾರ, ಐದಕ್ಕೂ ಕಡಿಮೆ ವಿದ್ಯಾರ್ಥಿಗಳಿರುವ ಸರಕಾರಿ ಶಾಲೆಗಳನ್ನು 1 ಕಿ.ಮೀ. ವ್ಯಾಪ್ತಿಯಲ್ಲಿರುವ ಮತ್ತೊಂದು ಶಾಲೆಯೊಂದಿಗೆ ವಿಲೀನಗೊಳಿಸಬೇಕು. ಆ ಮತ್ತೊಂದು ಶಾಲೆ 3 ಕಿ.ಮೀ. ವ್ಯಾಪ್ತಿಯಲ್ಲಿ ಇರದಿದ್ದರೆ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆಯನ್ನು ಸರ್ಕಾರ ಕಲ್ಪಿಸಿಕೊಡಬೇಕು.
ಹಾಗೆಯೆ, 6ನೇ ತರಗತಿಯಿಂದ 8ನೇ ತರಗತಿಯವರೆಗೆ ಸರಕಾರಿ ಶಾಲೆಗಳಲ್ಲಿ 10ಕ್ಕಿಂತ ಕಡಿಮೆ ವಿದ್ಯಾರ್ಥಿ, ವಿದ್ಯಾರ್ಥಿನಿಯರಿದ್ದರೆ ಅಂತಹ ಶಾಲೆಗಳನ್ನು ಕೂಡ 3 ಕಿ.ಮೀ. ವ್ಯಾಪ್ತಿಯೊಳಗಿನ ಮತ್ತೊಂದು ಶಾಲೆಯೊಂದಿಗೆ ವಿಲೀನಗೊಳಿಸಬೇಕು.
6ನೇ ತರಗತಿಯಿಂದ ಕರ್ನಾಟಕದಲ್ಲಿ ಆಂಗ್ಲ ಮಾಧ್ಯಮ ಪ್ರಾರಂಭಿಸಬೇಕೆಂದು ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಚಿಂತನೆ ನಡೆಸುತ್ತಿರುವ ಸಂದರ್ಭದಲ್ಲಿಯೇ ಕರ್ನಾಟಕ ಹೈಕೋರ್ಟಿನಿಂದ ಸರ್ಕಾರ ಪರ ಆದೇಶ ಬಂದಿತ್ತು.
ಆದರೆ, ನಂತರ ಸರ್ಕಾರಕ್ಕೆ ಹಿನ್ನಡೆ ಉಂಟಾಗಿ ಶಾಲೆ ಮುಚ್ಚುವ ನಿರ್ಧಾರಕ್ಕೆ ತಡೆ ನೀಡಲಾಗಿತ್ತು.
ರಾಜ್ಯದಲ್ಲಿ ಶಿಕ್ಷಕರಿದ್ದೆಡೆ ಮಕ್ಕಳಿಲ್ಲ, ಭರ್ತಿ ಮಕ್ಕಳಿದ್ದೆಡೆ ಶಿಕ್ಷಕರೇ ಇಲ್ಲ ಎಂಬಂತಹ ಪರಿಸ್ಥಿತಿ ಇದೆ. ಹಾಗೆಯೆ, ಶಿಕ್ಷಕರಿದ್ದು, ಮಕ್ಕಳೂ ಇದ್ದರೂ ಅವರಿಗೆ ಸರಿಯಾದ ಕಟ್ಟಡವೂ ಇಲ್ಲ ಎಂಬಂಥ ಗ್ರಾಮಗಳು ಅನೇಕವಿದೆ ಎಂಬುದನ್ನು ಮರೆಯುವಂತಿಲ್ಲ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications