ಸಚಿವ ಅರವಿಂದ ಲಿಂಬಾವಳಿ ವಿರುದ್ಧ ಲೋಕಾಯುಕ್ತ ತನಿಖೆ

ನಾಗರಾಜ್ ಎಂಬುವರು ನೀಡಿದ್ದ ದೂರಿನ ವಿಚಾರಣೆ ನಡೆಸಿದ ಲೋಕಾಯುಕ್ತ ವಿಶೇಷ ನ್ಯಾ. ಎನ್ ಕೆ ಸುಧೀಂದ್ರರಾವ್ ಅವರು ಮೇಲ್ಕಂಡ ಆರೋಪಿಗಳ ತನಿಖೆ ನಡೆಸಿ ಡಿ.15 ರೊಳಗೆ ವರದಿ ನೀಡುವಂತೆ ಆದೇಶ ನೀಡಿದರು.
ಕಾನೂನು ಬಾಹಿರವಾಗಿ ರಸ್ತೆ ಅಗಲೀಕರಣಕ್ಕೆ ಮುಂದಾಗಿದ್ದ ಡಿಎಲ್ ಎಫ್ ಕಂಪನಿಗೆ ಸಚಿವ ಅರವಿಂದ ಲಿಂಬಾವಳಿ ಅವರು ಸಹಕರಿಸಿದ್ದರು ಎಂದು ಆರೋಪಿಸಲಾಗಿದೆ.
ಇದಕ್ಕೂ ಮುನ್ನ ನಾಗರಾಜ್ ಅವರ ದೂರಿನ ಮೇರೆಗೆ ಪ್ರಾಥಮಿಕ ತನಿಖೆ ನಡೆಸಿದ್ದ ಬಿಎಂಟಿಎಫ್ ಪೊಲೀಸರು, ಡಿಎಲ್ ಎಫ್ ಕಂಪನಿ ವಿರುದ್ಧ ಎಫ್ ಐಆರ್ ದಾಖಲಿಸಿತ್ತು.
ಸಚಿವ ಅರವಿಂದ ಲಿಂಬಾವಳಿ ಉನ್ನತ ಶಿಕ್ಷಣ ಸಚಿವರಾಗಿದ್ದ ವೇಳೆ ಬಿಬಿಎಂಪಿಗೆ ಪತ್ರ ಬರೆದು ರಸ್ತೆ ನಿರ್ಮಾಣಕ್ಕೆ ಅವಕಾಶ ಮಾಡಿಕೊಡಬೇಕೆಂದು ಆಯುಕ್ತರಿಗೆ ಕೋರಿದ್ದರು.
ಇಲ್ಲಿ ರಸ್ತೆ ಅಗಲೀಕರಣ ಕಾನೂನು ಬಾಹಿರ ಎಂದು ಬೇಗೂರು ನಿವಾಸಿ ನಾಗರಾಜ್ ಎಂಬುವರು ಲೋಕಾಯುಕ್ತಕ್ಕೆ ದೂರು ನೀಡಿ ತನಿಖೆ ನಡೆಸುವಂತೆ ಮನವಿ ಸಲ್ಲಿಸಿದ್ದರು.
2009ರಲ್ಲಿ ಶಿಕ್ಷಣ ಸಚಿವರಾಗಿದ್ದ ಲಿಂಬಾವಳಿ ಅವರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೀಡಿದ ನಿರ್ದೇಶನದಿಂದ 2015ರ ಬಿಬಿಎಂಪಿ ಮಾಸ್ಟರ್ ಪ್ಲ್ಯಾನ್ ತಿರುಚಲಾಗಿದೆ.
ಅಕ್ಟೋಬರ್ 21, 2009ರಲ್ಲಿ ಈ ಪತ್ರ ಬರೆಯಲಾಗಿದೆ. ಕರ್ನಾಟಕ ನಗರ ಯೋಜನಾ ಕಾಯಿದೆ ಹಾಗೂ ಕರ್ನಾಟಕ ಮುನ್ಸಿಪಲ್ ಕಾಯಿದೆಯನ್ನು ಕೂಡಾ ಉಲ್ಲಂಘಿಸಲಾಗಿದೆ ಎಂದು ನಾಗರಾಜ್ ಆರೋಪಿಸಿದ್ದಾರೆ.
ಸದರಿ ವಿವಾದಿತ ಡಿಎಲ್ಎಫ್ ಜಾಗಕ್ಕೆ ಹೊಂದಿಕೊಂಡಂತೆ ನಾಗರಾಜ್ ಅವರು ಸಣ್ಣ ಪ್ರಮಾಣದ ಭೂಮಿಯನ್ನು ಹೊಂದಿದ್ದಾರೆ. ನಾಗರಾಜ್ ಹಾಗೂ ದಿವಂಗತ ಕಿರಣ್ ಎಂಬುವರ ಹೆಸರಿನಲ್ಲಿೀ ಜಾಗ ಇದೆ. ಆರು ಅಂತಸ್ತಿನ ಕಟ್ಟಡ ನಿರ್ಮಾಣಕ್ಕೆ ನಾಗರಾಜ್ ಸಜ್ಜಾಗಿದ್ದರು ಎಂದು ತಿಳಿದು ಬಂದಿದೆ.
ಆದರೆ, ಈ ಜಾಗದ ಪವರ್ ಆಫ್ ಅಟರ್ನಿ ಹೊಂದಿದ್ದ ಪ್ರಕರಣದ 8 ನೇ ಆರೋಪಿ ಕಸ್ತೂರಿ ಎಂಬ ಮಹಿಳೆ(ಕಿರಣ್ ಸಂಬಂಧಿ) ಡಿಎಲ್ಎಫ್ ಗೆ ಅನುಕೂಲವಾಗುವಂತೆ ಜಾಗದ ಪತ್ರವನ್ನು ತಿರುಚಿದ್ದಾರೆ. ನಂತರ ಸಚಿವರು 18 ಮೀ ನಿಂದ 24 ಮೀ ಗೆ ರಸ್ತೆ ಅಗಲೀಕರಣಕ್ಕೆ ಸೂಚಿಸಿದ್ದಾರೆ ಎಂದು ನಾಗರಾಜ್ ಆರೋಪಿಸಿದ್ದಾರೆ.
ಈ ಪ್ರಕರಣದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ಮಾಜಿ ಆಯುಕ್ತ ಐಎಎಸ್ ಅಧಿಕಾರಿ ಭರತ್ ಲಾಲ್ ಮೀನಾ, ಮಾಜಿ ಬಿಬಿಎಂಪಿ ಅಧಿಕಾರಿ ಕೆಎಂ ಶಿವಕುಮಾರ್, ಬಿಬಿಎಂಪಿ ಕಾರ್ಯಕಾರಿ ಇಂಜಿನಿಯರ್ ಲೋಕಮೀಶ್ ಹಾಗೂ ಡಿಎಲ್ ಎಫ್ ಕಂಪನಿ ಚೇರ್ಮನ್ ಕೆಪಿ ಸಿಂಗ್ ಅವರನ್ನು ಆರೋಪಿಗಳಾಗಿ ಹೆಸರಿಸಲಾಗಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications