ಎಫ್ ಡಿಐ : ಸಂಸತ್ತಿನಲ್ಲಿ ಯುಪಿಎಗೆ ಸೋಲು ಖಚಿತ?

ನ. 22 ರಂದು ಆರಂಭವಾಗಲಿರುವ ಚಳಿಗಾಲದ ಅಧಿವೇಶನದಲ್ಲಿ ಎಫ್ ಡಿಐ ಬಗ್ಗೆ ಚರ್ಚೆ ಹಾಗೂ ಮಂಡನೆಗೆ ಯುಪಿಎ ತಯಾರಿ ನಡೆಸಿದ್ದರೆ, ಅವಿಶ್ವಾಸ ಗೊತ್ತುವಳಿ ಮಂಡಿಸಲು ಬಿಜೆಪಿ, ಟಿಎಂಸಿ ಹಾಗೂ ಎಡಪಕ್ಷಗಳು ಸಿದ್ಧತೆ ನಡೆಸಿದೆ.
ಆದರೆ, ಎಫ್ ಡಿಐಗೆ ಸಂಸತ್ತಿನ ಒಪ್ಪಿಗೆ ಅಗತ್ಯವಿದೆಯೇ? ತಾಂತ್ರಿಕವಾಗಿ ನೋಡಿದರೆ, ಎಫ್ ಡಿಐ ಸರ್ಕಾರದ ಕಾರ್ಯಕಾರಿ ನಿರ್ಣಯವಾಗಿದ್ದು, ಆರ್ಥಿಕ ಸುಧಾರಣೆಗಾಗಿ ಅನಿವಾರ್ಯ ಎಂದು ಸರ್ಕಾರ ವಾದಿಸಬಹುದಾಗಿದೆ. ಇದಕ್ಕೆ ಸಂಸತ್ತಿನ ಅನುಮತಿ, ಒಪ್ಪಿಗೆ ಅಗತ್ಯವಿರುವುದಿಲ್ಲ.
ಅದರೆ, ಒಂದು ಪಕ್ಷ ಸಂಸತ್ತಿನ ಅಧಿವೇಶನದಲ್ಲಿ ಎಫ್ ಡಿಐ ಪರ ವಿರೋಧ ಮತಗಳು ಬಿದ್ದರೆ ಯುಪಿಎ ಮುಖಭಂಗ ಅನುಭವಿಸುವುದು ಖಾತ್ರಿಯಾಗಿದೆ. ಎಫ್ ಡಿಐ ವಿಷಯದಲ್ಲಿ ಯುಪಿಎಗೆ ಸಮಾಜವಾದಿ ಪಕ್ಷ ಹಾಗೂ ಬಹುಜನ ಸಮಾಜವಾದಿ ಪಕ್ಷಗಳು ಬೆಂಬಲ ನೀಡುತ್ತಿಲ್ಲ.
ಡಿಎಂಕೆ ಕರುಣಾನಿಧಿ ಅವರು ಎಫ್ ಡಿಐ ಬಗ್ಗೆ ಸ್ಪಷ್ಟ ನಿಲುವು ವ್ಯಕ್ತಪಡಿಸಿಲ್ಲ. ಪಶ್ಚಿಮ ಬಂಗಾಳದಂತೆ ತಮಿಳುನಾಡಿನ ಸಣ್ಣ ಮತ್ತು ಮಧ್ಯಮ ಗಾತ್ರ ಉದ್ದಿಮೆ ನಡೆಸುತ್ತಿರುವ ವ್ಯಾಪಾರಿಗಳು ಎಫ್ ಡಿಐಗೆ ವಿರೋಧ ವ್ಯಕ್ತಪಡಿಸಿದ್ದನ್ನು ಕರುಣಾನಿಧಿ ಸೂಕ್ಷ್ಮವಾಗಿ ಗಮನಿಸಿದ್ದಾರೆ. ಎಫ್ ಡಿಐಗೆ ಸಂಪೂರ್ಣ ವಿರೋಧ ವ್ಯಕ್ತಪಡಿಸಿದರೆ ಯುಪಿಎಗೆ ವಿರೋಧ ವ್ಯಕ್ತಪಡಿಸಿದಂತೆ ಹಾಗೂ ಎನ್ ಡಿಎಗೆ ಪರೋಕ್ಷವಾಗಿ ಬೆಂಬಲ ನೀಡಿದಂತೆ ಆಗುತ್ತದೆ ಆದ್ದರಿಂದ ಕರುಣಾನಿಧಿ ದ್ವಂದ್ವ ಪರಿಸ್ಥಿತಿಯಲ್ಲಿದ್ದಾರೆ.
ಅಕಾಲಿ ದಳ ಬಿಟ್ಟು ಎನ್ ಡಿಎ ಮೈತ್ರಿಕೂಟ ಸಂಪೂರ್ಣವಾಗಿ ಎಫ್ ಡಿಐಗೆ ವಿರೋಧ ವ್ಯಕ್ತಪಡಿಸಿದೆ. ಟಿಎಂಸಿ, ಎಐಎಡಿಎಂಕೆ ಹಾಗೂ ಬಿಜೆಡಿ ಪಕ್ಷಗಳು ಬಂದ್ ನಡೆಸಿ ಭಾರಿ ಪ್ರತಿರೋಧ ಒಡ್ಡಿದೆ.
ಜೀವ ವಿಮೆ, ಬ್ಯಾಂಕಿಂಗ್, ಪಿಂಚಣಿ ಕ್ಷೇತ್ರಗಳಲ್ಲಿ ಎಫ್ ಡಿಐ ಬಗ್ಗೆ ಮತದಾನ ಅಗತ್ಯವಿದೆ. ಸಂಸತ್ತಿನಲ್ಲೇ ನಿರ್ಣಯವಾಗಲಿ ಎಂದು ಎಡಪಕ್ಷಗಳು ಘೋಷಿಸಿದೆ.
ಸಂಸತ್ತಿನಲ್ಲಿ ಯುಪಿಎ 262 ಸ್ಥಾನ ಪ್ಲಸ್ 50 ಬಾಹ್ಯ ಬೆಂಬಲ ಹೊಂದಿದೆ. ಎನ್ ಡಿಎ 151 ಹಾಗೂ ಎಡಪಕ್ಷಗಳು, ಇತರೆ 87 ಸ್ಥಾನ ಹೊಂದಿದೆ. ಚಳಿಗಾಲದ ಅಧಿವೇಶನದಲ್ಲಿ ಸುಮಾರು 100 ಕ್ಕೂ ಅಧಿಕ ಮಸೂದೆಗಳು ಬಾಕಿ ಇದ್ದು 3 ಮಸೂದೆಗಳು ಮಾತ್ರ ಅನುಮೋದನೆ ಪಡೆಯುವ ಸಾಧ್ಯತೆಯಿದೆ.
ಆದರೆ, ಚರ್ಚೆ ನಡೆಸದೆ ಪ್ರತಿಪಕ್ಷಗಳು ಎಂದಿನಂತೆ ಕಲಾಪವನ್ನು ಮುಂದೂಡುವಂತೆ ಮಾಡಿದರೆ ಯುಪಿಎಗೆ ಒಳ್ಳೆಯದು. ಒಟ್ಟಾರೆ, ಎಫ್ ಡಿಐ ತರುವಲ್ಲಿ ಯುಪಿಎ ಆತುರದ ನಿರ್ಧಾರ ಕೈಗೊಂಡಿದ್ದು ಈಗ ಕೈಕಚ್ಚಿಕೊಳ್ಳುವಂತಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications