ಸ್ವಾತಂತ್ರ್ಯ ಅಂದ್ರೆ ಸ್ವೇಚ್ಛೆಯಲ್ಲ : ಪಬ್ಲಿಕ್ ಟಿವಿ ರಂಗನಾಥ್

ಅವರು ಶುಕ್ರವಾರ ಬೆಂಗಳೂರಿನ ಭಾರತೀಯ ವಿದ್ಯಾಭವನದಲ್ಲಿ, ರಾಜ್ಯ ವಾರ್ತಾ ಇಲಾಖೆ ಹಾಗೂ ಭಾರತೀಯ ವಿದ್ಯಾಭವನದ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ಪತ್ರಿಕಾ ಅಕಾಡೆಮಿ ಏರ್ಪಡಿಸಿದ್ದ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಉದ್ಘಾಟನೆ ಹಾಗೂ 'ಮಾಧ್ಯಮ ಸ್ವಾತಂತ್ರ್ಯ' ಕುರಿತ ವಿಚಾರ ಸಂಕಿರಣದಲ್ಲಿ ಮಾತನಾಡುತ್ತಿದ್ದರು.
ದೇಶದಲ್ಲಿ ಸ್ವಾತಂತ್ರ್ಯದ ಜೊತೆಗೆ ಜವಾಬ್ದಾರಿಯೂ ಇರುವಂತೆ ಪತ್ರಿಕಾ ಸ್ವಾತಂತ್ರ್ಯದ ಜೊತೆಗೆ ಮಾಧ್ಯಮವು ಜವಾಬ್ದಾರಿಯಿಂದ ನಡೆದುಕೊಳ್ಳಬೇಕಾಗುತ್ತದೆ. ಮಾಧ್ಯಮಗಳ ವಿಸ್ತಾರ, ಆಳ, ಅಗಲದಲ್ಲಿ ಸರ್ಕಾರ ಮಾಧ್ಯಮಗಳನ್ನು ನಿಯಂತ್ರಿಸುವುದು ಸಾಧ್ಯವೆ ಇಲ್ಲ. ಆದರೆ ಮಾಧ್ಯಮ ಒಳಗೆ ಇರುವ ಲೋಪಗಳು ಮಾಧ್ಯಮವನ್ನು ತಿನ್ನುತ್ತಿವೆ. ಮಾಧ್ಯಮದ ಮೇಲೆ ಸರ್ಕಾರದ ನಿಯಂತ್ರಣ ಸಾಧುವಲ್ಲ, ಅದು ಆಗುವುದೂ ಇಲ್ಲ. ಪತ್ರಕರ್ತರು ಭ್ರಷ್ಟತೆಯ ಬಗ್ಗೆ ಬರೆಯಬೇಕೆ ವಿನಹ ಅದನ್ನು ಬಯಸಬಾರದು ಎಂದು ರಂಗನಾಥ್ ಕಿವಿಮಾತು ಹೇಳಿದರು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ರಾಜ್ಯ ವಾರ್ತಾ ಇಲಾಖೆಯ ನಿರ್ದೇಶಕ ಎನ್.ಆರ್. ವಿಶುಕುಮಾರ್ ಅವರು ಮಾತನಾಡಿ, ಸರ್ಕಾರ ಎಂದರೆ ಗುಲಾಮಿ ಸಂಸ್ಥೆಯಲ್ಲ. ಜನತೆ ಒಳಿತು ಬಯಸುವ ಸಂಸ್ಥೆ. ಜನರಿಗಾಗಿ ಕಾರ್ಯ ನಿರ್ವಹಿಸುತ್ತದೆ. ಅಭಿವೃದ್ಧಿ ಕಾರ್ಯಗಳನ್ನೂ ಮಾಡುತ್ತದೆ. ಅದರಲ್ಲಿರುವ ಸಣ್ಣ ಪುಟ್ಟ ಲೋಪಗಳೇ ಪ್ರಧಾನವಾಗಬಾರದು ಎಂದರು.
ಮಾಧ್ಯಮ ಸ್ವಾತಂತ್ರ್ಯ ಬಗ್ಗೆ ಮಾಧ್ಯಮದವರೇ ಅರಿವು ಮೂಡಿಸಲಿ ಎಂಬುದು ಸರ್ಕಾರದ ಆಶಯ. ಇಳಿವಯಸ್ಸಿನಲ್ಲೂ ಪತ್ರಿಕಾ ದಿನಾಚರಣೆಯಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳುವ ಹಿರಿಯರು ಇಲ್ಲಿದ್ದಾರೆ. ನಮ್ಮಲ್ಲಿ ಅಪರಾಧಿ ಪ್ರಜ್ಞೆ ಮೂಡಿದಾಗ ಮಾತ್ರ ಸಾಮಾಜಿಕ ಬದಲಾವಣೆ ಪ್ರಕ್ರಿಯೆ ಸಾಧ್ಯ ಈ ನಿಟ್ಟಿನಲ್ಲಿ ಆರಂಭವಾಗಿರುವ ಚರ್ಚೆ ಬದಲಾವಣೆಯ ಆರಂಭದ ಸೂಚನೆಯಾಗಿದೆ ಎಂದು ಹೇಳಿದರು.
ಸಮಾರಂಭದಲ್ಲಿ ಭಾರತೀಯ ವಿದ್ಯಾಭವನದ ಮಾಧ್ಯಮ ಭಾರತಿ ನಿರ್ದೇಶಕ ಜಯರಾಮ ಅಡಿಗ ಅವರು 'ಕುಲಪತಿ ಡಾ: ಕೆ.ಎಂ. ಮುನ್ಶಿ 125ನೇ ವರ್ಷೋತ್ಸವ ಸ್ಮರಣೆ : ಧ್ಯೇಯನಿಷ್ಠ ಪತ್ರಿಕೋದ್ಯಮ' ಕುರಿತು ಮಾತನಾಡಿದರು. ಭಾರತೀಯ ವಿದ್ಯಾಭವನದ ಎಚ್.ಎನ್. ಸುರೇಶ್, ವಾರ್ತಾ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications