ಮೂವರು ಸಚಿವರಿಗೆ ರಾಜ್ಯಪಾಲರ ಮಹಾಮಂಗಳಾರತಿ

ವಿಶ್ವ ಮಕ್ಕಳ ದಿನಾಚರಣೆ ಸಂಬಂಧ ಶುಕ್ರವಾರ (ನ 16) ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಗೈರು ಹಾಜರಾಗಿದ್ದ ಸಚಿವರುಗಳಾದ ಆರ್ ಅಶೋಕ್, ಶೋಭಾ ಕರಂದ್ಲಾಜೆ ಮತ್ತು ವಿಶ್ವೇಶ್ವರ ಹೆಗಡೆ ಕಾಗೇರಿ ನಡುವಳಿಕೆಯನ್ನು ಖಂಡಿಸಿ ರಾಜ್ಯಪಾಲರುಈ ರೀತಿ ಹೇಳಿದ್ದಾರೆ.
ನನ್ನನ್ನು ನೋಡಿ ನೀವು ಕಲಿಯಿರಿ. ಕಳೆದ 18 ವರ್ಷದಿಂದ ಒಪ್ಪಿಕೊಂಡ ಕಾರ್ಯಕ್ರಮಕ್ಕೆ ಎಂದೂ ಗೈರು ಹಾಜರಾಗಲಿಲ್ಲ. ಅಲ್ಲದೇ ಸಮಾರಂಭಕ್ಕೆ ಮುಂಚಿತವಾಗಿ ಹೋಗಿರುತ್ತೇನೆ.
ಇನ್ನು ಮುಂದಾದರೂ ಸಚಿವರು ತಮ್ಮ ನಡುವಳಿಕೆಯನ್ನು ಬದಲಿಸಿಕೊಳ್ಳಲಿ. ಕಾರ್ಯಕ್ರಮಕ್ಕೆ ಬರಲಾಗದಿದ್ದರೆ ಒಪ್ಪಿಕೊಳ್ಳಲೇ ಬೇಡಿ ಎಂದು ಮೂವರು ಸಚಿವರ ಮೂಲಕ ರಾಜಕೀಯ ನಾಯಕರುಗಳಿಗೆ ರಾಜ್ಯಪಾಲ ಭಾರದ್ವಾಜ್ ಬುದ್ದಿಮಾತನ್ನು ಹೇಳಿದ್ದಾರೆ.
ಬೆಂಗಳೂರು ವಿವಿ ವಿಭಜನೆ ಮಾಡುವ ಪ್ರಸ್ತಾಪನೆ ಇದುವರೆಗೆ ನನ್ನಲ್ಲಿ ಬಂದಿಲ್ಲ. ಅಲ್ಲದೆ ವಿವಿಯ ಖಾಯಂ ಕುಲಪತಿ ಸ್ಥಾನಕ್ಕೆ ಯಾವುದೇ ಹೆಸರು ಶಿಫಾರಸುಗೊಂಡು ನನ್ನಲ್ಲಿ ಅನುಮೋದನೆಗೆ ಈವರೆಗೆ ಬಂದಿಲ್ಲ. ಒಂದು ವೇಳೆ ಬಂದರೆ ಸೂಕ್ತ ಕ್ರಮ ಕೈಗೊಳ್ಳುತ್ತೇನೆ ಎಂದು ರಾಜ್ಯಪಾಲರು ಹೇಳಿದ್ದಾರೆ.
ಭಾರತದಂತಹ ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಯಶಸ್ವಿಯಾಗುವುದು ಯುವಕರಿಂದ. ಯುವಕರು ದೇಶ ಕಟ್ಟಲು ಮುಂದೆ ಬರಬೇಕು. ನೆಹರೂ ಮತ್ತು ಗಾಂಧಿ ಆದರ್ಶವನ್ನು ಯುವಕರು ಪಾಲಿಸಿಕೊಳ್ಳಬೇಕೆಂದು ಭಾರದ್ವಾಜ್ ಯುವ ಸಮುದಾಯಕ್ಕೆ ಮನವಿ ಮಾಡಿದ್ದಾರೆ.
ಕಳೆದ ನಾಲ್ಕು ವರ್ಷದ ಅವಧಿಯಲ್ಲಿ ರಾಜ್ಯ ಮೂರು ಮುಖ್ಯಮಂತ್ರಿಗಳನ್ನು ಕಂಡಿದೆ. ಜಗದೀಶ್ ಶೆಟ್ಟರ್ ಒಬ್ಬ ಜಂಟಲ್ ಮ್ಯಾನ್. ನನ್ನ ಸಹಕಾರ ಅವರಿಗಿದೆ, ಆದರೆ ಜನರು ಬಿಜೆಪಿ ಸರಕಾರದ ಕಾರ್ಯವೈಖರಿಯ ಬಗ್ಗೆ ಸಮಾಧಾನ ಹೊಂದಿಲ್ಲ ಎಂದು ಭಾರದ್ವಾಜ್ ಬೇಸರ ವ್ಯಕ್ತ ಪಡಿಸಿದ್ದಾರೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications