ಚಿರನಿದ್ರೆಗೆ ಜಾರಿದ ಮರಾಠಿ ಹುಲಿ ಬಾಳಾ ಠಾಕ್ರೆ

ಕಳೆದ ನಾಲ್ಕು ದಿನಗಳಿಂದ ಅವರು ಜೀವನ್ಮರಣದ ನಡುವೆ ಹೋರಾಟ ನಡೆಸಿದ್ದರು. ಎರಡು ದಿನಗಳ ಹಿಂದೆ ಅವರಿಗೆ ಅಳವಡಿಸಲಾಗಿದ್ದ ಕೃತಕ ಶ್ವಾಸದ ಸಾಧನವನ್ನು ತೆಗೆಯಲಾಗಿತ್ತು. ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿದ್ದವು.
ಮರಾಠಿ ಹುಲಿ ಬಾಳಾ ಠಾಕ್ರೆ (23 ಜನವರಿ, 1926 - 17 ನವೆಂಬರ್, 2012) ಅವರು ತೀವ್ರ ಹೃದಯಾಘಾತಕ್ಕೊಳಗಾಗಿ ನಿಧನರಾದರು. ಅವರ ಅಂತಿಮ ಸಂಸ್ಕಾರವನ್ನು ಹಿಂದೂ ಧರ್ಮದ ಅನ್ವಯ ಭಾನುವಾರ, ನವೆಂಬರ್ 18ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ನೆರವೇರಿಸಲಾಗುತ್ತಿದೆ.
ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ರಾಜಕಾರಣಿಗಳು, ನಿನೆಮಾ ತಾರೆಯರು ಸೇರಿದಂತೆ ಗಣ್ಯರು ಅವರ ನಿವಾಸಕ್ಕೆ ದೌಡಾಯಿಸುತ್ತಿದ್ದಾರೆ. ಅಪಾರ ಸಂಖ್ಯೆಯಲ್ಲಿ ಅವರ ಅಭಿಮಾನಿಗಳು ಕೂಡ ಧಾವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ನಿವಾಸದ ಸುತ್ತ ಭಾರೀ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ನಗರದಾದ್ಯಂತ ಯಾವುದೇ ಅವಘಡ ಸಂಭವಿಸದಂತೆ ಎಲ್ಲೆಡೆ ಪೊಲೀಸರನ್ನು ನಿಯೋಜಿಸಲಾಗಿದೆ.
ಶಿವಸೇನೆಯ ಮುಖವಾಣಿಯಾಗಿದ್ದ 'ಸಾಮ್ನಾ' ಮರಾಠಿ ಪತ್ರಿಕೆಯ ಸಂಪಾದಕರಾಗಿ ಅವರು ಮುಂಬೈನಲ್ಲಿ ವಾಸಿಸುತ್ತಿದ್ದ ಬಾಂಗ್ಲಾದೇಶಿ ಮತ್ತು ಮರಾಠಿ ಕಲಿಯದ ಉತ್ತರ ಭಾರತೀಯರ ವಿರುದ್ಧ ತಮ್ಮ ಪ್ರಖರ ಸಂಪಾದಕೀಯಗಳ ಮೂಲಕ ಹೋರಾಟವನ್ನೇ ನಡೆಸಿದ್ದರು. ಬರಹಗಾರನಷ್ಟೇ ಅಲ್ಲ ಅವರು ವ್ಯಂಗ್ಯ ಚಿತ್ರಕಾರನಾಗಿಯೂ ಹೆಸರು ಗಳಿಸಿದ್ದರು.
ಮುಂಬೈನಲ್ಲಿ ಬಾಳಾ ಠಾಕ್ರೆ ಗೌರವಾರ್ಥ ವ್ಯಾಪಾರಿಗಳು ಸ್ವಯಂಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚುತ್ತಿದ್ದಾರೆ. ತಮ್ಮ ಆರಾಧ್ಯ ದೈವವನ್ನು ಕಳೆದುಕೊಂಡ ಅಭಿಮಾನಿಗಳು ರೊಚ್ಚಿಗೇಳಬಹುದೆಂದು ನಗರದಾದ್ಯಂತ 20 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ. ಕರ್ನಾಟಕದ ಬೆಳಗಾವಿಯಲ್ಲಿಯೂ ಕಟ್ಟೆಚ್ಚರದಿಂದ ಇರುವಂತೆ ಪೊಲೀಸರಿಗೆ ಆದೇಶ ನೀಡಲಾಗಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications