ಹೊಸ ಅಡುಗೆ ಅನಿಲ ಸಂಪರ್ಕ ಇಲ್ಲ

ಒಂದಕ್ಕಿಂತ ಹೆಚ್ಚು ಎಲ್ಪಿಜಿ ಸಂಪರ್ಕ ಹೊಂದಿದ್ದವರನ್ನು ಪತ್ತೆ ಹಚ್ಚುವ ಕಾರ್ಯ ಇನ್ನೂ ಪೂರ್ಣ ಪ್ರಮಾಣದಲ್ಲಿ ಮುಗಿಯದಿರುವ ಹಿನ್ನಲೆಯಲ್ಲಿ ತೈಲ ಕಂಪೆನಿಗಳು ಈ ಮಹತ್ವದ ನಿರ್ಧಾರಕ್ಕೆ ಬಂದಿದೆ.
ಬೇನಾಮಿ ಹೆಸರಿನಲ್ಲಿ ಮತ್ತು ಹೆಚ್ಚುವರಿ ಎಲ್ಪಿಜಿ ಸಂಪರ್ಕ ಹೊಂದಿರುವ ಗ್ರಾಹಕರನ್ನು ಪತ್ತೆ ಹಚ್ಚುವ ಸಲುವಾಗಿ ಕಳೆದ ಸೆಪ್ಟಂಬರ್ ತಿಂಗಳಿನಿಂದಲೇ ಹೊಸ ಕನೆಕ್ಷನ್ ನೀಡುವುದನ್ನು ತೈಲ ಕಂಪೆನಿಗಳು ತಾತ್ಕಾಲಿಕವಾಗಿ ನಿಲ್ಲಿಸಿದ್ದವು.
ಮೇಘಾಲಯ, ಸಿಕ್ಕಿಂ, ನಾಗಾಲ್ಯಾಂಡ್ , ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಮಾತ್ರ ಹೊಸ ಸಂಪರ್ಕ ನೀಡಲು ತೈಲ ಕಂಪೆನಿಗಳು ಮುಂದೆ ಬಂದಿರುವ ಹಿನ್ನಲೆಯಲ್ಲಿ ಹೊಸ ಸಂಪರ್ಕ ಪಡೆಯಲು ಉತ್ಸುಕರಾಗಿದ್ದ ರಾಜ್ಯದ ಜನತೆಗೆ ನಿರಾಶೆಯಾಗಿದೆ.
ಅಕ್ರಮ ಎಲ್ಪಿಜಿ ಸಂಪರ್ಕ ಹೊಂದಿದವರನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ತೈಲ ಕಂಪೆನಿಗಳು 'ನಿಮ್ಮ ಗ್ರಾಹಕರನ್ನು ಅರಿಯಿರಿ' ಎನ್ನುವ ಆಂದೋಲನ ಜಾರಿ ಮಾಡಿದ್ದವು. ಇದರ ಅನ್ವಯ ಒಂದಕ್ಕಿಂತ ಹೆಚ್ಚು ಎಲ್ಪಿಜಿ ಸಂಪರ್ಕ ಹೊಂದಿದ್ದ ಗ್ರಾಹಕರು ತಮ್ಮ ಕುರಿತು ಮಾಹಿತಿ ಸಲ್ಲಿಸುವುದು ಕಡ್ಡಾಯ ಮಾಡಲಾಗಿತ್ತು.
ಆದರೆ ಇದಕ್ಕೆ ನಿರೀಕ್ಷಿತ ಮಟ್ಟದಲ್ಲಿ ಪ್ರತಿಕ್ರಿಯೆ ಬರದ ಹಿನ್ನಲೆಯಲ್ಲಿ ಮಾಹಿತಿ ಸಲ್ಲಿಸಲು ಇದ್ದ ಗಡುವನ್ನು ನವೆಂಬರ್ 15ರಿಂದ ನವೆಂಬರ್ 30ರವರೆಗೆ ವಿಸ್ತರಿಸಲು ತೈಲ ಕಂಪೆನಿಗಳಾದ ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದುಸ್ತಾನ್ ಪೆಟ್ರೋಲಿಯಂ ನಿರ್ಧರಿಸಿವೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications