ಠಾಕ್ರೆ ವಿರುದ್ಧ ಕಾಮೆಂಟ್ ಮಾಡಿದ ಮಹಿಳೆ ಜೈಲಿಗೆ
ಮುಂಬೈ, ನ.19: ಮರಾಠಿ ನಾಯಕ ಶಿವ ಸೇನಾ ಮುಖ್ಯಸ್ಥ ಬಾಳಾ ಠಾಕ್ರೆ ಅವರ ನಿಧನದ ಬಗ್ಗೆ ಸಾಮಾಜಿಕ ಜಾಲ ತಾಣ ಫೇಸ್ ಬುಕ್ ನಲ್ಲಿ ಸ್ಟೇಟಸ್ ಅಪ್ಡೇಡ್ ಮಾಡಿದ ಯುವತಿ ಈಗ ಪೊಲೀಸರ ಅತಿಥಿಯಾಗಿದ್ದಾಳೆ.
ಬಾಳಾಠಾಕ್ರೆ ಅಂತಿಮ ಯಾತ್ರೆಯಿಂದ ಬಹುತೇಕ ಮುಂಬೈ ಜನ ಜೀವನ ಸ್ತಬ್ದಗೊಂಡಿರುವ ಬಗ್ಗೆ ಆಕ್ಷೇಪಾರ್ಹವಾಗಿ 21 ವರ್ಷದ ಮಹಿಳೆ ಸ್ಟೇಟಸ್ ಹಾಕಿದ್ದಳು.

ಶನಿವಾರ ನಿಧನರಾದ 86 ವರ್ಷ ವಯಸ್ಸಿನ ಬಾಳಾ ಠಾಕ್ರೆ ಅವರ ಅಂತಿಮ ಯಾತ್ರೆ ಭಾನುವಾರ ಬೆಳಗ್ಗೆ 7.30ಕ್ಕೆ ಆರಂಭಗೊಂಡು ದಾದರ್ ನ ಶಿವಾಜಿ ಪಾರ್ಕ್ ನಲ್ಲಿ ಸಂಜೆ 6.30 ರ ಸುಮಾರಿಗೆ ಅಂತ್ಯಗೊಂಡಿತು.
ಈ ಅಂತಿಮ ಯಾತ್ರೆಯಲ್ಲಿ ಸುಮಾರು 20 ಲಕ್ಷಕ್ಕೂ ಅಧಿಕ ಜನ ಭಾಗಿಯಾಗಿದ್ದರು. 1 ಲಕ್ಷ ಆಟೋ, 30 ಸಾವಿರ ಟ್ಯಾಕ್ಸಿಗಳು ಸಂಚಾರ ಸ್ಥಗಿತಗೊಂಡಿತ್ತು. ಇದರಿಂದ ದೈನಂದಿನ ಚಟುವಟಿಕೆಗಳಿಗೆ ತೊಂದರೆ ಉಂಟಾಗಿತ್ತು.
ಇದನ್ನು ಖಂಡಿಸಿ 21 ವರ್ಷದ ಯುವತಿ ಫೇಸ್ ಬುಕ್ ನಲ್ಲಿ "Thackeray are born and die daily and one should not observe a bandh for that",ಎಂದು ಸ್ಟೇಟಸ್ ಹಾಕಿದ್ದಳು. ಇದನ್ನು ಆಕೆ ಗೆಳತಿಯೊಬ್ಬಳು ಲೈಕ್ ಮಾಡಿದ್ದಳು. ಈಗ ಇಬ್ಬರು ಪೊಲೀಸರ ಅತಿಥಿಯಾಗಿದ್ದಾರೆ ಎಂದು ಮುಂಬೈ ಮಿರರ್ ವರದಿ ಮಾಡಿದೆ.
ಇಬ್ಬರು ಯುವತಿಯರ ಮೇಲೆ ಐಪಿಸಿ ಸೆಕ್ಷನ್ 295(a) ಹಾಗೂ 2000ರ ಮಾಹಿತಿ ತಂತ್ರಜ್ಞಾನ ಕಾಯಿದೆ ಸೆಕ್ಷನ್ 649(a) ಅನ್ವಯ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಯುವತಿ ನಂತರ ತನ್ನ ತಪ್ಪಿನ ಅರಿವಾಗಿ ಕಾಮೆಂಟ್ ತೆಗೆದು ಹಾಕಿ, ಕ್ಷಮೆ ಕೋರಿದ್ದಾಳೆ. ಆದರೆ, ಇದಕ್ಕೂ ಮುನ್ನ ವಿಷಯ ತಿಳಿದ 2000ಕ್ಕೂ ಅಧಿಕ ಶಿವಸೇನಾ ಕಾರ್ಯಕರ್ತರು ಯುವತಿಯ ಮನೆ ಮೇಲೆ ದಾಳಿ ನಡೆಸಿ ದಾಂಧಲೆ ಎಬ್ಬಿಸಿದ್ದಾರೆ. ಆಕೆ ಸಂಬಂಧಿಕರೊಬ್ಬರ ಕ್ಲಿನಿಕ್ ಮೇಲೂ ದಾಳಿ ನಡೆದಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications