ಆಸ್ತಿ ಮುಟ್ಟುಗೋಲು ಕಟ್ಟಾ ಸುಬ್ರಮಣ್ಯ ನಾಯ್ಡು ಕಂಗಾಲು

ತಮ್ಮ ಸಚಿವ ಸ್ಥಾನ ದುರುಪಯೋಗಪಡಿಸಿಕೊಂಡು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಿಂದ (ಕೆಐಎಡಿಬಿ) ತಮ್ಮದೇ ಕುಟಂಬಸ್ಥರ ಇಟಾಸ್ಕಾ ಕಂಪನಿಗೆ ಭೂಮಿ ಕೊಡಿಸಿದ್ದಾರೆಂದು ಆರೋಪಿಸಿ, ಜಾರಿ ನಿರ್ದೇಶನಾಲಯವು ಲೇವಾದೇವಿ ಕಾಯ್ದೆ 2002ರ (money laundering) ಅಡಿ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ವಿರುದ್ಧ ಪ್ರಕರಣ ದಾಖಲಿಸಿಕೊಂಡಿದೆ.
'ಜಾರಿ ನಿರ್ದೇಶನಾಲಯವು ನಾಯ್ಡು ಅವರಲ್ಲದೆ, ಅವರ ಪುತ್ರ ಕಟ್ಟಾ ಜಗದೀಶ್, ಇಟಾಸ್ಕಾ ಸಾಫ್ಟ್ವೇರ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಎಸ್ ವಿ ಶ್ರೀನಿವಾಸ್, ಬಿಬಿಎಂಪಿ ಸದಸ್ಯ ಎಂ ಗೋಪಿ ಅವರ ಆಸ್ತಿಯನ್ನು ಜಪ್ತಿ ಮಾಡಿದ್ದು, ನ್ಯಾಯಾಲಯದಲ್ಲಿ ಪ್ರಕರಣವನ್ನೂ ದಾಖಲಿಸಿದೆ.
ಇಟಾಸ್ಕಾ ಸಂಸ್ಥೆಗೆ ಭೂಮಿಯನ್ನು ಕೊಡಿಸಲು 87 ಕೋಟಿ ರೂ ಲಂಚ ಪಡೆದಿದ್ದಾರೆ ಎಂಬ ಆರೋಪವನ್ನು ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಮತ್ತು ಅವರ ಪುತ್ರ ಹಾಗೂ ಪಾಲಿಕೆ ಸದಸ್ಯ ಜಗದೀಶ್ ಎದುರಿಸುತ್ತಿದ್ದಾರೆ.
'ಎಲ್ಲ ಆಸ್ತಿ ಮತ್ತು ಬ್ಯಾಂಕ್ ಖಾತೆಗಳನ್ನು ಮುಂಜಾಗ್ರತಾ ಕ್ರಮವಾಗಿ ಎರಡು ತಿಂಗಳ ಹಿಂದೆಯೇ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿದ ಮೇಲೆ ನೋಟಿಸ್ ನೀಡಿತ್ತು. ಆರೋಪದ ವಿರುದ್ಧದ ಆಕ್ಷೇಪಗಳನ್ನು ಆಗಲೇ ಸಲ್ಲಿಸಲಾಗಿದೆ.
ಒಂದೆಡೆ ಕಟ್ಟಾ ಸೇರಿದಂತೆ ನಾಲ್ವರಿಗೂ ಅವರ ಬ್ಯಾಂಕ್ ಖಾತೆ ಉಪಯೋಗಿಸಲು ಸಾಧ್ಯವಾಗುತ್ತಿಲ್ಲ. ಇನ್ನೊಂದೆಡೆ ಅವರ ಆಸ್ತಿಯನ್ನು ಪರಭಾರೆ ಮಾಡಲೂ ಆಗುತ್ತಿಲ್ಲ' ಎಂದು ತಮ್ಮ ವಕೀಲರ ಮೂಲಕ ಕಟ್ಟಾ ನಾಯ್ಡು ಅವರು ಲೋಕಾಯುಕ್ತ ಕೋರ್ಟಿಗೆ ಶನಿವಾರ ಅಲವತ್ತುಕೊಂಡಿದ್ದಾರೆ. ಕಟ್ಟಾ ಪರ ವಕೀಲ ಸಿಎಚ್ ಜಾಧವ್ ಅವರು ಜಿಲ್ಲಾ ವಿಶೇಷ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಶನಿವಾರ ಈ ಮಾಹಿತಿ ಸಲ್ಲಿಸಿದ್ದಾರೆ.
'ಪ್ರಕರಣ ನಡೆದ ಅವಧಿಯಲ್ಲಿ ಸಂಪಾದಿಸಿದ ಆಸ್ತಿಯನ್ನು ಮಾತ್ರ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಕಾನೂನು ಹೇಳುತ್ತದೆ. ಇದಕ್ಕೂ ಮೊದಲು ಖರೀದಿಸಿದ ಆಸ್ತಿಯನ್ನೂ ಜಪ್ತು ಮಾಡಲಾಗಿದೆ. ಈ ಕ್ರಮದ ವಿರುದ್ಧ ನ್ಯಾಯಾಲಯದಲ್ಲಿ ದಾವೆ ಹೂಡಲಾಗುವುದು ಎಂದು ಕಟ್ಟಾ ವಕೀಲರು ಹೇಳಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications