ಯಡಿಯೂರಪ್ಪ ಉಳಿಸಿಕೊಳ್ಳೋ ಕಾಲ ಮೀರುತ್ತಿದೆ

ಇದೇ ವೇಳೆ ಯಡಿಯೂರಪ್ಪ ಅವರು ಬಿಜೆಪಿ ಬಿಡಬಾರದು ಎಂದು ನ್ಯಾ.ಮೂರ್ತಿ ಡಾ. ರಾಮಾ ಜೋಯಿಸ್ ಕಿವಿಮಾತು ಹೇಳಿದ್ದಾರೆ.
ಕಳೆದ ವಾರ ಯಡಿಯೂರಪ್ಪನವರು ನಾನು ಎರಡು ತಪ್ಪು ಮಾಡಿದ್ದೇನೆ ಎಂದು ಹೇಳಿದ್ದಾರೆ. ಮೊದಲನೆಯದು: ವರಿಷ್ಠರ ಮಾತು ಕೇಳಿ ಮುಖ್ಯಮಂತ್ರಿ ಪದವಿಗೆ ರಾಜೀನಾಮೆ ಕೊಟ್ಟಿದ್ದು. ಎರಡನೆಯದು ಆಗಲೇ ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಹೋಗಬೇಕಿತ್ತು ಎಂದಿದ್ದಾರೆ.
ಮೊದಲನೇ ತಪ್ಪು ಸತ್ಯಸಂಗತಿ ಎರಡನೇಯದು ಆ ಕಾಲದ ಅನಿಸಿಕೆಯಲ್ಲಿ ತಪ್ಪೇನಿಲ್ಲ. ಆದರೆ, ಈಗ ಅವರಿಗೆ ಅವೆರಡು ತಪ್ಪು ಮಾಡಿದೆ ಎನ್ನಿಸುತ್ತಿರುವುದೇ ತಪ್ಪು.
ಆದ್ದರಿಂದ ಭಾರತೀಯ ಜನತಾ ಪಾರ್ಟಿಯನ್ನು ಬಿಟ್ಟು ಹೊಸ ಪಕ್ಷವನ್ನು ಕಟ್ಟಲು ಮುಂದುವರೆಯುತ್ತಿರುವುದು ಮೊದಲನೇ ತಪ್ಪು. ಈ ತಪ್ಪಿಗಾಗಿ ಅವರು ಮುಂದೆ ಪಶ್ಚಾತಾಪಡಬೇಕಾಗುತ್ತದೆ. ಜೊತೆಗೆ ಯಡಿಯೂರಪ್ಪ ಅವರನ್ನು ಉಳಿಸಿಕೊಳ್ಳಲಾಗದೆ ಬಿಜೆಪಿ ಕೂಡಾ ತೊಂದರೆ ಅನುಭವಿಸುವ ಸಾಧ್ಯತೆಯಿದೆ.
ಈವರೆಗೂ ಬಿಜೆಪಿ ಹೈಕಮಾಂಡ್ ಯಡಿಯೂರಪ್ಪ ಹೇಳಿದ್ದನ್ನೇ ಮಾಡಿದೆ. ಅವರು ಹೇಳಿದಂತೆ, ಸದಾನಂದ ಗೌಡರನ್ನು ಸಿಎಂಯಾಗಿ ಮಾಡಿದರು. 11 ತಿಂಗಳ ನಂತರ ಅವರು ಹೇಳಿದಂತೆ ಶೆಟ್ಟರ್ರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದರು.
ಹೀಗಿರುವಾಗ ಜೀವನಪೂರ್ತಿ ಪಕ್ಷಬಿಡುವ ಪ್ರಶ್ನೆಯೇ ಇಲ್ಲ ಎಂದು ಅನೇಕ ಬಾರಿ ಹೇಳಿದ್ದ ಅವರು ಮತ್ತೊಮ್ಮೆ ವಿಚಾರಮಾಡಿ, ಮತ್ತೊಮ್ಮೆ ತಪ್ಪು ನಿರ್ಧಾರ ಕೈಗೊಳ್ಳದಿರಲಿ ಎಂದು ರಾಮಾ ಜೋಯಿಸ್ ಹೇಳಿದ್ದಾರೆ.
ಅತಂತ್ರ ಸ್ಥಿತಿಯಲ್ಲಿ ನಿರಾಣಿ : ಸದಾ ಕಾಲ ಯಡಿಯೂರಪ್ಪ ಅವರ ನೆರಳಾಗಿ ಕಾಣಿಸಿಕೊಳ್ಳುತ್ತಿದ್ದ ಸಚಿವ ಮುರುಗೇಶ್ ನಿರಾಣಿ ಅವರು ಈಗ ಯಾಕೋ ವರಸೆ ಬದಲಾಯಿಸಿದ್ದಾರೆ. ಅಥವಾ ಸರಿ ನಿರ್ಣಯ ಕೈಗೊಳ್ಳಲಾಗದೆ ತಲೆ ಕೆಡಿಸಿಕೊಂಡಿದ್ದಾರೆ.
ಡಿ.9 ರಂದು ನಿಗದಿಯಾಗಿರುವ ಹಾವೇರಿ ಕೆಜಿಪಿ ಸಮಾವೇಶಕ್ಕೆ ಹೋಗುವ ಅಥವಾ ಬಿಡುವ ನಿರ್ಧಾರ ಮಾಡಿಲ್ಲ. ಎಲ್ಲದಕ್ಕೂ ಕಾಲವೇ ಉತ್ತರಿಸಲಿದೆ. ಸದ್ಯಕ್ಕಂತೂ ಬಿಜೆಪಿ ಸರ್ಕಾರದಲ್ಲಿ ಸಚಿವನಾಗಿದ್ದೇನೆ.
ರಾಜ್ಯ ಸರ್ಕಾರ ತನ್ನ ಐದು ವರ್ಷದ ಆಡಳಿತವನ್ನು ಪೂರ್ಣಗೊಳಿಸುತ್ತದೆ. ಯಾವುದೇ ಕಾರಣಕ್ಕೂ ಸರ್ಕಾರ ವಿಸರ್ಜನೆಯಾಗುವುದಿಲ್ಲ ಎಂದು ಕೈಗಾರಿಕಾ ಸಚಿವ ನಿರಾಣಿ ಹೇಳಿದ್ದಾರೆ.
ಅಡ್ವಾಣಿ ವಿರುದ್ಧ ಬಿಎಸ್ವೈ ಹೇಳಿಕೆ ಬಗ್ಗೆ ಪತ್ರಕರ್ತರ ಪ್ರಶ್ನೆಗೆ, ಅಡ್ವಾಣಿ, ಅನಂತಕುಮಾರ, ಯಡಿಯೂರಪ್ಪ ದೊಡ್ಡ ನಾಯಕರು. ಅವರ ಬಗ್ಗೆ ಮಾತನಾಡುವಷ್ಟ ದೊಡ್ಡವನಲ್ಲ ಎಂದು ಹೇಳಿದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications