ಒನಕೆಯಿಂದ ಕುಡುಕ ಗಂಡನ ತಲೆ ಒಡೆದ ಪತ್ನಿ

ಸೋಮವಾರ(ನ.19) ಕುಡಿದು ಬಂದು ಪ್ರತಿದಿನ ಕಿರುಕುಳ ನೀಡುತ್ತಿದ್ದ ಗಂಡನ ತಲೆಗೆ ಹೆಂಡತಿ ಒನಕೆಯಿಂದ ಹೊಡೆದು ಭೀಕರವಾಗಿ ಕೊಲೆ ಮಾಡಿದಾಗ ದಂಪತಿಯ ನಾಲ್ಕು ವರ್ಷದ ಮಗು ಮೂಕ ಪ್ರೇಕ್ಷಕನಾಗಿ ಎಲ್ಲವನ್ನು ನೋಡುತ್ತಿತ್ತು ಎನ್ನಲಾಗಿದೆ.
ನಟರಾಜ ಲೇಔಟ್ ನ ನಿವಾಸಿ 35 ವರ್ಷದ ಉದಯ ಕುಮಾರ್ ಕೊಲೆಯಾದ ವ್ಯಕ್ತಿ. ಆತನ ಪತ್ನಿ 30 ವರ್ಷದ ಶಶಿರೇಖಾ ಕೊಲೆಗೈದ ಮೇಲೆ ನೆರೆಹೊರೆಯವರಿಗೆ ವಿಷಯ ತಿಳಿಸಿ ನಂತರ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾಳೆ.
ವಾಟರ್ ಟ್ಯಾಂಕರ್ ಚಾಲಕನಾಗಿದ್ದ ಉದಯ್ ಕುಮಾರ್ ಕ್ವಾಟರ್ ಹಾಕದೆ ಮನೆಗೆ ಬರುತ್ತಿರಲಿಲ್ಲ. ಕುಡಿದ ಮತ್ತಿನಲ್ಲಿ ಹೆಂಡತಿಗೆ ಹಿಗ್ಗಾಮುಗ್ಗಾ ಹೊಡೆಯುತ್ತಿದ್ದ. ಎಷ್ಟು ಹೇಳಿದರೂ ಕೇಳುತ್ತಿರಲಿಲ್ಲ. ಕೂಲಿ ಮಾಡಿ ಗಳಿಸಿಟ್ಟ ಹಣವನ್ನು ದೋಚಿಕೊಂಡು ಮತ್ತೆ ಕುಡಿದು ಬರುತ್ತಿದ್ದ ಎಂದು ತಿಳಿದು ಬಂದಿದೆ.
ಎರಡು ವರ್ಷದ ಹಿಂದೆ ನಟರಾಜ ಲೇಔಟ್ ಗೆ ಬಂದಿದ್ದ ಈ ದಂಪತಿ ಒಂದು ದಿನ ಕೂಡಾ ಸುಖವಾಗಿ ಸಂಸಾರ ಮಾಡಿದ್ದು ನೋಡಿಲ್ಲ. ಪ್ರತಿದಿನ ಏನಾದರೂ ವಿಷಯಕ್ಕೆ ಜಗಳ ನಡೆಯುತ್ತಲೇ ಇತ್ತು ಎಂದು ನೆರೆಮನೆಯವರು ಹೇಳಿಕೆ ನೀಡಿದ್ದಾರೆ.
ಕಳೆದ ರಾತ್ರಿ ಕೂಡಾ ಉದಯ್ ಕುಮಾರ್ ಜಗಳವಾಡಿದ್ದಾನೆ. ಗಾರೆ ಕೆಲಸಕ್ಕೆ ಹೋಗಿ ಸಂಸಾರ ನಿಭಾಯಿಸುತ್ತಿದ್ದ ಶಶಿ ರೇಖಾ ಸಿಟ್ಟಿಗೆದ್ದು ಉದಯ್ ಕುಮಾರ್ ತಲೆಗೆ ಜೋರಾಗಿ ಒನಕೆಯಿಂದ ಬಾರಿಸಿದ್ದಾಳೆ. ನೆತ್ತಿಗೆ ಬಲವಾದ ಪೆಟ್ಟು ಬಿದ್ದ ಪರಿಣಾಮ ಕೆಟ್ಟದಾಗಿ ಚೀರಿಕೊಂಡ ಉದಯ್ ಅಲ್ಲೇ ಕುಸಿದು ಬಿದ್ದಿದ್ದಾನೆ. ಆತನ ತಲೆ, ಕಿವಿಯಿಂದ ತೀವ್ರವಾಗಿ ರಕ್ತಸೋರಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಶಶಿರೇಖಾಳನ್ನು ವಶಕ್ಕೆ ತೆಗೆದುಕೊಂಡಿರುವ ಪೊಲೀಸರು ಉದಯ್ ಕುಮಾರ್ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಕಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಪೊಲೀಸರು ಹೇಳಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications