ಬೆಂಗಳೂರು ವಿವಿ ಮೈಲಾರಪ್ಪ ನೇಮಕ ರದ್ದು

ನೇಮಕ ಮಾಡುವಾಗ ನಿಯಮ ಪಾಲಿಸಿಲ್ಲ ಎಂದು ನ್ಯಾ. ಕುಮಾರ್ ಅವರಿದ್ದ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿದೆ. ಹೈ ಕೋರ್ಟ್ ಹೊರಡಿಸಿದ ನೇಮಕ ರದ್ದು ಆದೇಶವನ್ನು ಎರಡು ತಿಂಗಳ ಕಾಲ ತಡೆ ಹಿಡಿಯುವಂತೆ ಮೈಲಾರಪ್ಪ ಪರ ವಕೀಲ ಮನವಿ ಮಾಡಿಕೊಂಡರು.
ಆದರೆ, ಎರಡು ತಿಂಗಳು ತಡೆ ನೀಡಲು ಸಾಧ್ಯವಿಲ್ಲ. ಮೈಲಾರಪ್ಪ ಅವರು ಇಂದೇ (ನ.21, 2012) ಹುದ್ದೆ ತ್ಯಜಿಸಬೇಕು ಎಂದು ನ್ಯಾ.ಕುಮಾರ್ ಅವರು ಆದೇಶ ಹೊರಡಿಸಿದರು.
ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊಫೆಸರ್ ಮೈಲಾರಪ್ಪ ಅವರನ್ನು ನೂತನ ಕುಲಸಚಿವರಾಗಿ ನ.2, 2011ರಂದು ಕರ್ನಾಟಕ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿತ್ತು. ಈ ಮೂಲಕ ಕುಲಸಚಿವರಾಗಿ ನೇಮಕಗೊಂಡ ಮೊದಲ ದಲಿತ ಪ್ರೊಫೆಸರ್ ಎಂಬ ಕೀರ್ತಿಗೆ ಮೈಲಾರಪ್ಪ ಪಾತ್ರರಾಗಿದ್ದರು. ಅಲ್ಲದೆ 46 ವರ್ಷಕ್ಕೆ ವಿವಿ ರಿಜಿಸ್ಟ್ರಾರ್ ಆಗಿ ನೇಮಕಗೊಂಡು ಹೊಸ ಸಾಧನೆ ಮಾಡಿದ್ದರು.
ನಕಲು ಆರೋಪ: ಪ್ರೊ ಮೈಲಾರಪ್ಪ ಮಂಡಿಸಿದ್ದ ಪ್ರಬಂಧವೇ ನಕಲು. ಮೈಲಾರಪ್ಪ ಅವರ ಶಿಷ್ಯ ವೆಂಕಟರಮಣಪ್ಪ ಅವರು ನಂತರ ಅದೇ ಪ್ರಬಂಧವನ್ನು ಮಂಡಿಸಿದ್ದಾರೆ. ಮೈಲಾರಪ್ಪ ಅವರ ನೇಮಕಾತಿಯಲ್ಲಿ ಅಕ್ರಮ ನಡೆದಿದೆ. ವಿವಿ ನಿಯಮಗಳನ್ನು ಗಾಳಿಗೆ ತೂರಲಾಗಿದೆ ಎಂದು ವಾಸುದೇವ್ ಎಂಬುವವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಮೈಲಾರಪ್ಪ ಪ್ರತಿಕ್ರಿಯೆ: ವಿವಿ ರಿಜಿಸ್ಟ್ರಾರ್ ಆಗಿ ನಾನು ನನ್ನ ಸಾಮರ್ಥ್ಯಕ್ಕೆ ತಕ್ಕಂತೆ ಕರ್ತವ್ಯ ನಿರ್ವಹಿಸಿದ್ದೇನೆ. ಸರ್ಕಾರ ನೀಡಿದ ಹುದ್ದೆಯನ್ನು ಗೌರವದಿಂದ ಸ್ವೀಕರಿಸಿದ್ದೆ. ಈಗ ಹೈಕೋರ್ಟ್ ನೀಡಿರುವ ಆದೇಶವನ್ನು ಅದೇ ರೀತಿ ಪಾಲಿಸುತ್ತೇನೆ.
ನಾನು ಪ್ರೊಫೆಸರ್ ಆಗಿ 10 ವರ್ಷಗಳ ಕಾಲ ಸಂತೋಷದಿಂದ ಪಾಠ ಮಾಡಿದ್ದೇನೆ, ನನಗೆ ಅದೇ ಇಷ್ಟ. ಆದರೆ, ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್ ನಲ್ಲಿ ಪ್ರಶ್ನಿಸುತ್ತೇನೆ. ನ್ಯಾಯಾಂಗ ವ್ಯವಸ್ಥೆಯ ಮೇಲೆ ನಂಬಿಕೆ ಇದೆ. ನನಗೆ ಅನ್ಯಾಯವಾಗುವುದಿಲ್ಲ ಎಂದು ಮೈಲಾರಪ್ಪ ಅವರು ಹೇಳಿದರು.
ಡಾ.ಬಿ.ಸಿ.ಮೈಲಾರಪ್ಪ ಅಲಿಯಾಸ್ ಚಿಕ್ಕಮೇಲೂರಪ್ಪ ಅವರನ್ನು ನೂತನ ಕುಲಸಚಿವರನ್ನಾಗಿ ನೇಮಕ ಮಾಡಲು ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅನುಮತಿ ನೀಡಿರುವುದು ಶೈಕ್ಷಣಿಕ ವಲಯದಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿತ್ತು. ಮಾಜಿ ಶಾಸಕರೊಬ್ಬರ ನೆರವಿನಿಂದ ಮುಖ್ಯಮಂತ್ರಿಗಳ ಮೇಲೆ ಒತ್ತಡ ತಂದು ಕುಲಸಚಿವ ಸ್ಥಾನಕ್ಕೇರಿದ್ದಾರೆ ಎಂಬ ಸುದ್ದಿ ಹಬ್ಬಿತ್ತು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications