ಬೆಂಗಳೂರು ಸ್ಫೋಟ: ಮದನಿ ಜಾಮೀನು ವಜಾ

ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಅವರ ಭಾಷಣ ಸಮಾರಂಭದಲ್ಲಿ ಸರಣಿ ಸ್ಫೋಟ ಸಂಭವಿಸಿದ ಪ್ರಕರಣದ ಹಿಂದೆ ಮದನಿ ಸಂಚು ಇದೆ ಎಂದು ಆರೋಪಿಸಲಾಗಿದೆ. ಈ ಸ್ಫೋಟದಲ್ಲಿ ಸುಮಾರು 58 ಜನ ಸಾವನ್ನಪ್ಪಿದ್ದು, 200 ಜನ ಗಾಯಗೊಂಡಿದ್ದರು.
1998ರ ಕೊಯಮತ್ತೂರು ಬಾಂಬ್ ಸ್ಫೋಟದ ಆರೋಪ ಹೊತ್ತು ಕೊಯಮತ್ತೂರು ಜೈಲಿನಲ್ಲಿದ್ದ ಮದನಿ 2007ರಲ್ಲಿ ಹೊರ ಬಂದಿದ್ದ.
ಮದನಿಗೆ ಸುಪ್ರೀಂಕೋರ್ಟ್ ನ್ಯಾಯಪೀಠ ಕೂಡಾ ಜಾಮೀನು ನಿರಾಕರಿಸಿದೆ. ಈ ಮುಂಚೆ ಜಾಮೀನು ನೀಡಿಕೆ ಬಗ್ಗೆ ನ್ಯಾಯಪೀಠದ ಇಬ್ಬರು ನ್ಯಾಯಮೂರ್ತಿಗಳ ಮಧ್ಯೆ ಭಿನ್ನಾಭಿಪ್ರಾಯ ತಲೆದೋರಿತ್ತು.
ನಂತರ ಪೀಪಲ್ಸ್ ಡೆಮಾಕ್ರೆಟಿಕ್ ಪಾರ್ಟಿ ಸ್ಥಾಪಕ ಅಬ್ದುಲ್ ಮದನಿ ಅನಾರೋಗ್ಯಕ್ಕೆ ಬೆಂಗಳೂರಿನಲ್ಲಿರುವ ಕೊಟ್ಟಕ್ಕಲ್ ಆರ್ಯ ವೈದ್ಯ ಶಾಲಾ ಆಸ್ಪತ್ರೆಗಳಲ್ಲಿ ಸೂಕ್ತ ಚಿಕಿತ್ಸೆ ಕೊಡಿಸುವಂತೆ ಕರ್ನಾಟಕ ಸರ್ಕಾರಕ್ಕೆ ಆದೇಶ ನೀಡಿತ್ತು.
ಬೆಂಗಳೂರು ಸರಣಿ ಸ್ಫೋಟದ ಆರೋಪಿ ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ನಾಯಕ ಅಬ್ದುಲ್ ನಾಸಿರ್ ಮದನಿ ಬಂಧನ ಅಥವಾ ಶರಣಾಗತಿ ಕುರಿತ ಅಶ್ಚಿತತೆ ಮುಂದುವರಿದಿತ್ತು. ಆತನ ಬಂಧನಕ್ಕೆ ಅನುವು ಮಾಡಿಕೊಡುವಲ್ಲಿ ಕೇರಳ ಸರಕಾರ ಸಹಕಾರ ನೀಡುತ್ತಿಲ್ಲ ಎಂದು ಕರ್ನಾಟಕ ಸರ್ಕಾರ ನೇರವಾಗಿ ಆರೋಪಿಸಿತ್ತು.
2008ರಲ್ಲಿ ಬೆಂಗಳೂರಿನಲ್ಲಿ ಸುಮಾರು 9 ಕಡೆ ಸಂಭವಿಸಿದ ಸರಣಿ ಸ್ಫೋಟದಲ್ಲಿ 2 ಸಾವನ್ನಪ್ಪಿದ್ದರು. 20ಕ್ಕೂ ಅಧಿಕ ಜನ ಗಾಯಗೊಂಡಿದ್ದರು.
ಕೊಯಮತ್ತೂರಿನ ಸರಣಿ ಸ್ಫೋಟ ರುವಾರಿಯೂ ಆಗಿರುವ ಮದನಿ ಕೊಯಮತ್ತೂರು ಸ್ಫೋಟ ಪ್ರಕರಣದಿಂದ ಖುಲಾಸೆಗೊಂಡಿದ್ದಾನೆ. ಆದರೆ, ಬೆಂಗಳೂರು ಪ್ರಕರಣದ ಪ್ರಮುಖ ಆರೋಪಿಯಾಗಿರುವ ಮದನಿ ಪ್ರಸ್ತುತ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾನೆ.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications