ದೇಗುಲ ಅರ್ಚಕರ ಸಂಬಳ ಕೊನೆಗೂ ಏರಿಕೆ

ಮುಜರಾಯಿ ಇಲಾಖೆಗೆ ಸೇರಿದ ದೇಗುಲಗಳ ವಾರ್ಷಿಕ ತಸ್ದಿಕ್ ಹಣವನ್ನು 12 ಸಾವಿರದಿಂದ 24 ಸಾವಿರ ರೂ. ಳಿಗೆ ಹೆಚ್ಚಿಸಿ ಸರ್ಕಾರ ಸದ್ಯದಲ್ಲೇ ಆದೇಶ ಹೊರಡಿಸಲಿದೆ. ಇದರ ಜೊತೆಗೆ ಸಂಬಳದಲ್ಲೂ 2,000 ರು ಏರಿಕೆಯಾಗಲಿದೆ ಎಂದು ಮುಜರಾಯಿ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ವಾರ್ಷಿಕ ತಸ್ತಿಕ್ ಹಣ ಹೆಚ್ಚಳ ರಾಜ್ಯದ ಸುಮಾರು 27 ಸಾವಿರ ದೇವಾಲಯಗಳ ಅರ್ಚಕರಿಗೆ ಆಗಲಿದೆ. ಇದರಿಂದ ಸರ್ಕಾರಕ್ಕೆ 24 ರಿಂದ 40 ಕೋಟಿ ರೂಪಾಯಿ ಹೆಚ್ಚಿನ ಹೊರೆಬೀಳಲಿದೆ ಎಂದು ಮುಜರಾಯಿ ಮಂತ್ರಿ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
ಬುಧವಾರ ವಿಧಾನಸೌಧದಲ್ಲಿ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಸಚಿವರು, ಅರ್ಚಕರ ಬೇಡಿಕೆಗಳ ಬಗ್ಗೆ ಸರ್ಕಾರಕ್ಕೆ ಸಹಾನುಭೂತಿ ಹೊಂದಿದೆ. ಎಲ್ಲ ಅರ್ಚಕರು ಆರ್ಥಿಕವಾಗಿ ಚೆನ್ನಾಗಿದ್ದಾರೆಂದು ಹೇಳಲಾಗದು.
ಆಯ್ದ ಅರ್ಚಕರಿಗೆ ಪ್ರತಿ ಜಿಲ್ಲೆ ಮತ್ತು ತಾಲ್ಲೂಕುಗಳಲ್ಲಿ ಏಳೆಂಟು ಲಕ್ಷ ರೂಪಾಯಿಗಳಲ್ಲಿ ಮನೆ ನಿರ್ಮಿಸಿ ಕೊಡುವ ಯೋಜನೆ ಇದೆ ಎಂದರು. ವಿಮಾ ಪರಿಹಾರ ಕಾರ್ಮಿಕರು, ಮೀನುಗಾರರಿಗೆ ಇರುವಂತೆಯೇ ಅರ್ಚಕರಿಗೂ ವಿಮಾ ಪರಿಹಾರ ನೀಡುವ ಬಗ್ಗೆಯೂ ಯೋಜನೆಯಿದೆ,
ಅರ್ಚಕರಿಗೆ ಸೂಕ್ತ ತರಬೇತಿ ನೀಡಲಾಗುವುದು. ಈ ಹಿನ್ನೆಲೆಯಲ್ಲಿ ಡಿ. 8ರಂದು ಮಂಗಳೂರಿನಲ್ಲಿ ಜಿಲ್ಲಾ ಅರ್ಚಕರ ಸಮಾವೇಶ ನಡೆಯಲಿದೆ. ಇಂತಹ ಸಮಾವೇಶವನ್ನು ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಮಾಡಬೇಕೆಂಬ ಬಗ್ಗೆ ಆಲೋಚನೆ ಇದೆ ಎಂದು ಶ್ರೀನಿವಾಸ ಪೂಜಾರಿ ಹೇಳಿದರು.
ಅರ್ಚಕರ ಸೇವಾ ನಿಯಮ-ಸಮಿತಿ ದೇವಾಲಯಗಳ ಸಿಬ್ಬಂದಿಗೆ ಸೇವಾ ನಿಯಮಗಳನ್ನು ರೂಪಿಸಲು ನಿವೃತ್ತ ನ್ಯಾಯಮೂರ್ತಿ ದೇಶಪಾಂಡೆ ಅಧ್ಯಕ್ಷತೆಯಲ್ಲಿ ಸಮಿತಿ ರಚನೆಯಾಗಿದೆ. ಈ ಸಮಿತಿಯು ಇಲಾಖೆಯ ಕಾರ್ಯದರ್ಶಿ ಮತ್ತು ಆಯುಕ್ತರನ್ನು ಒಳಗೊಂಡಿರುತ್ತದೆ.
ಅಲ್ಲದೆ, ರಾಜ್ಯದ ಪ್ರಮುಖ 25 ದೇವಾಲಯಗಳಲ್ಲಿ ಗೋಶಾಲೆಗಳನ್ನೂ ಕೂಡ ತೆರೆಯಲಾಗುವುದು. ದೇವಾಲಯಗಳಲ್ಲಿ 5 ರಿಂದ 10 ಎಕರೆ ಜಾಗ ಇದ್ದರೆ ಈ ಯೋಜನೆ ಜಾರಿಗೆ ತರಲಾಗುವುದು ಹೇಳಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ, ದೇವಾಲಯಗಳಲ್ಲಿ ಭಿಕ್ಷುಕರನ್ನು ನಿಯಂತ್ರಣ ಮಾಡಲಾಗುವುದು. ಇವೆಲ್ಲಾ ಯೋಜನೆಗಳ ಬಗ್ಗೆ ಇನ್ನೂ 15 ದಿನದೊಳಗೆ ರೂಪರೇಷೆ ತಯಾರಿಸಲಾಗುವುದು ಎಂದು ಹೇಳಿದರು.
ರಾಜ್ಯದಲ್ಲಿ ಒಟ್ಟು 34,000 ದೇಗುಲಗಳು ಮುಜರಾಯಿ ಇಲಾಖೆಗೆ ಒಳಪಟ್ಟಿದೆ. ಗೋಶಾಲೆ-ವೃದ್ಧಾಶ್ರಮ ಮುಜರಾಯಿ ಇಲಾಖೆಯ ಪ್ರಮುಖ ದೇವಾಲಯಗಳಲ್ಲಿ ಗೋಶಾಲೆ, ವೃದ್ಧಾಛಿಶ್ರಮ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು.
ಕೊಲ್ಲೂರಿನಲ್ಲಿ ಮಹಿಳೆಯರಿಗೆ, ಕುಕ್ಕೆ ಸುಬ್ರಮಣ್ಯದಲ್ಲಿ ಪುರುಷರಿಗೆ, ಗುಲ್ಬರ್ಗ ಗಾಣಿಗಪುರದಲ್ಲಿರುವ ದತ್ತಾತ್ತ್ರೇಯ ದೇವಾಲಯದಲ್ಲಿ ಬುದ್ಧಿಮಾಂದ್ಯರಿಗೆ, ಮಲೆಮಹದೇಶ್ವರ ಮತ್ತು ಸವದತ್ತಿ ರೇಣುಕಾಂಬ ದೇವಾಲಯಗಳಲ್ಲಿ ವೃದ್ಧಾಶ್ರಮಗಳ ತೆರೆಯಲು ಧಾರ್ಮಿಕ ಪರಿಷತ್ ಮಂಡಳಿ ಸಭೆ ನಿರ್ಣಯಿಸಿದೆ ಎಂದರು.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications