ಬಂಗಾರಪ್ಪಗೆ ಬಂದ ದುಸ್ಥಿತಿ ಯಡಿಯೂರಪ್ಪಗೆ ಬಾರದಿರಲಿ

ಹೊಸ ಪಕ್ಷ ಸ್ಥಾಪನೆ ಮಾಡಿದ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಮತ್ತು ದೇವರಾಜ್ ಅರಸು ಅವರ ದುಸ್ಥಿತಿ ಏನಾಯಿತು ಎನ್ನುವುದು ಎಲ್ಲರಿಗೂ ತಿಳಿದಿರುವ ವಿಚಾರ. ಅವರಿಗೆ ಬಂದಂತಹ ಪರಿಸ್ಥಿತಿ ಯಡಿಯೂರಪ್ಪ ಅವರಿಗೆ ಬಾರದಿರಲಿ ಎಂದು ಈಶ್ವರಪ್ಪ ಹೇಳಿದ್ದಾರೆ.
ಬಿಜೆಪಿ ನನ್ನ ಹೆತ್ತ ತಾಯಿಯ ಹಾಗೆ ಎಂದು ಯಡಿಯೂರಪ್ಪ ಬಹಳಷ್ಟು ಬಾರಿ ಹೇಳಿದ್ದರು. ಈಗಲೂ ಅವರು ಬಿಜೆಪಿ ತೊರೆಯುವುದಿಲ್ಲ ಎನ್ನುವ ವಿಶ್ವಾಸ ನಮಗಿದೆ ಎಂದು ಉಪಮುಖ್ಯಮಂತ್ರಿ ಈಶ್ವರಪ್ಪ ಭರವಸೆ ವ್ಯಕ್ತ ಪಡಿಸಿದ್ದಾರೆ.
ಬಂಗಾರಪ್ಪ ಮತ್ತು ಅರಸು ಅವರು ಹೊಸ ಪಕ್ಷ ಕಟ್ಟಲು ಹೋಗಿ ತೊಂದರೆ ಅನುಭವಿಸಿದ್ದಾರೆ. ಅವರು ಎದುರಿಸಿದ ಪರಿಸ್ಥಿತಿ ಯಡಿಯೂರಪ್ಪ ಅವರಿಗೆ ಬರಬಾರದೆನ್ನುವ ಕಾಳಜಿ ನಮಗಿದೆ ಎಂದು ಈಶ್ವರಪ್ಪ ಹೇಳಿದ್ದಾರೆ.
ಈ ಹಿಂದೆ ಕೂಡಾ ಹೇಳಿದ ಹಾಗೆ ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ. ಅಶಿಸ್ತನ್ನು ನಾವು ಸಹಿಸಿಕೊಳ್ಳುವುದಿಲ್ಲ, ಪಕ್ಷ ವಿರೋಧಿ ಚಟುವಟಿಕೆ ನಡೆಸಿದರೆ ಪರಿಣಾಮ ನೆಟ್ಟಗಿರದೆಂದು ಈಶ್ವರಪ್ಪ, ಯಡಿಯೂರಪ್ಪ ಬೆಂಬಲಿಗರಿಗೆ ಎಚ್ಚರಿಸಿದ್ದಾರೆ.
ತುರುವೇಕೆರೆ ಮಾಜಿ ಶಾಸಕ ಎಂ ಡಿ ಲಕ್ಷ್ಮೀನಾರಾಯಣ ಬಿಜೆಪಿಯಲ್ಲಿಲ್ಲ, ಆದರೂ ಕೈಮಗ್ಗ ಮಂಡಳಿಯ ಅಧ್ಯಕ್ಷ ಹುದ್ದೆಯನ್ನು ಉಳಿಸಿಕೊಂಡಿದ್ದಾರೆ. ಸದ್ಯದಲ್ಲೇ ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಈಶ್ವರಪ್ಪ ಹೇಳಿದ್ದಾರೆ.
ಬಿಜೆಪಿಯಿಂದ 60 -70 ಶಾಸಕರು ಹಾವೇರಿ ಸಮಾವೇಶದಲ್ಲಿ ಭಾಗವಹಿಸುತ್ತಾರೆ ಎನ್ನುವ ಸುದ್ದಿ ಸತ್ಯಕ್ಕೆ ದೂರವಾದದ್ದು. ಒಂದು ವೇಳೆ ಸಮಾವೇಶದ ನಡೆದರೂ ಮೂರು ಅಥವಾ ನಾಲ್ಕು ಶಾಸಕರು ಭಾಗವಹಿಸಬಹುದು. ಆ ಶಾಸಕರನ್ನು ಕರೆದು ಮಾತನಾಡಿಸುತ್ತೇವೆ ಎಂದು ಈಶ್ವರಪ್ಪ ಹೇಳಿದ್ದಾರೆ.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications