ಆತ್ಮಹತ್ಯೆ ತಡೆಗೆ ಈ ಸಹಾಯವಾಣಿ ತಪ್ಪದೇ ಬಳಸಿ

ಬೆಂಗಳೂರಿಗರಲ್ಲಿ ಆತ್ಮಹತ್ಯೆ ಹೆಚ್ಚಾಗಲು ನಾನಾ ಕಾರಣಗಳು ಕಂಡು ಬಂದರೂ, ಮಾನಸಿಕ ಒತ್ತಡ, ಉದ್ಯೋಗದಲ್ಲಿ ಸ್ಪರ್ಧಾತ್ಮಕತೆ, ಆರ್ಥಿಕ ಸಂಕಷ್ಟವೇ ಮೂಲ ಕಾರಣ ಎಂದು ನಿಮ್ಹಾನ್ ಹೇಳಿದೆ.
ಆತ್ಮಹತ್ಯೆಗೆ ಏನು ಕಾರಣ: ಗುರುವಾರದ ಲೇಖನವನ್ನೇ ಗಮನಿಸಿದರೆ, ಆತ್ಮಹತ್ಯೆ ಮಾಡಿಕೊಂಡವರಲ್ಲಿ ಹದಿಹರೆಯದವರೇ ಹೆಚ್ಚು ಮಂದಿ. ವಿದ್ಯಾರ್ಥಿ/ನಿ ಸಾವಿಗೆ ಓದಿನ ಒತ್ತಡ, ಪ್ರೇಮ ಪ್ರಕರಣ, ಮಾನಸಿಕ ಖಿನ್ನತೆ ಕಾರಣ ಇರಬಹುದು. ಉಳಿದಂತೆ ಗೃಹಿಣಿಯರ ಸಾವಿಗೆ ವರದಕ್ಷಿಣೆ ಕಿರುಕುಳ, ಕೌಟುಂಬಿಕ ಕಲಹ ಪ್ರಮುಖ ಕಾರಣವಾಗಿದೆ.
ಕುಟುಂಬಕ್ಕೆ ಸೂಚನೆಯೂ ಸಿಗದಂತೆ ಎಲ್ಲಾ ಚೆನ್ನಾಗಿದ್ದವರು ಇದ್ದಕ್ಕಿದ್ದಂತೆ ಯಾವುದೋ ಸಣ್ಣ ಮಾನಸಿಕ ಒತ್ತಡ ಸಹಿಸಲಾಗದೆ ಆತ್ಮಹತ್ಯ್ಗೆ ಶರಣಾಗುವವರ ಸಂಖ್ಯೆ ಶೇ 57ರಷ್ಟಿರುವುದು ಭಯ ಹುಟ್ಟಿಸುತ್ತದೆ.
ಕೆಲಸದ ಒತ್ತಡದಿಂದ ಸಂಸಾರದ ಸಣ್ಣ ಸಮಸ್ಯೆಗೆ ಪರಿಹಾರ ಸಿಗದೆ ಟೆಕ್ಕಿಗಳು ಸಾಯುತ್ತಿದ್ದರೆ, ಅಪ್ಪ ಅಮ್ಮ ಓದು ಎಂದು ಬೈದರು ಎಂಬ ಕೊರಗಿನಲ್ಲಿ ವಿದ್ಯಾರ್ಥಿಗಳು ಸಾವನ್ನಪ್ಪುತ್ತಿರುವುದು ಬೆಂಗಳೂರಿನ ಪಾಲಿಗೆ ಅರಿಗಿಸಿಕೊಳ್ಳದ ದುಃಖವಾಗಿದೆ.
ಇತರೆ ನಗರಗಳಿಗೆ ಹೋಲಿಸಿದರೆ ಬೆಂಗಳೂರಿಗರಲ್ಲಿ ಮಾನಸಿಕ ಒತ್ತಡ ಹೆಚ್ಚಾಗಿದೆ. ಐಟಿ ವೃತ್ತಿಪರರಲ್ಲಂತೂ ಇದು ತುಂಬಾ ಹೆಚ್ಚಾಗಿದೆ. ಸಾಮಾಜಿಕ ಹಾಗೂ ಮಾನಸಿಕ ಭದ್ರತೆ ಇಲ್ಲದೆ ಅನೇಕ ಇಂಜಿನಿಯರ್ ಗಳು, ಟೆಕ್ಕಿಗಳು, ಉನ್ನತ ವ್ಯಾಸಂಗ ಮಾಡಿದ ವಿದ್ಯಾವಂತರೇ ದುಡುಕಿನ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಕೌನ್ಸಿಲರ್ ಮಂಜುಳಾ ರಾಮನ್ ಹೇಳಿದ್ದಾರೆ.
ಪರಿಹಾರ ಏನು?: 2002ರಲ್ಲೇ ಈ ರೀತಿ ಮಾನಸಿಕ ಒತ್ತಡ ನಿವಾರಣೆಗಾಗಿ ಆತ್ಮಹತ್ಯೆ ಯೋಚನೆ ನಿರ್ಮೂಲನೆಗಾಗಿ ಬೆಂಗಳೂರಿನಲ್ಲಿ SAHAI ಸಹಾಯವಾಣಿ ಆರಂಭಿಸಲಾಗಿದೆ.
ನಿಮ್ಹಾನ್ಸ್ ಸಂಸ್ಥೆ ಸಲಹೆ ಮೇರೆಗೆ ಕಾರ್ಯ ನಿರ್ವಹಿಸುವ ಈ ಸಹಾಯವಾಣಿಗೆ ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ಸಹಾಯಕವಾಗಿ ನಿಂತಿದೆ. SAHAI ಸಹಾಯವಾಣಿ ಇಂತಿದೆ: 080 - 25497777
ಏಕಾಂಗಿತನ, ಕೆಲಸದ ಒತ್ತಡ, ಆರ್ಥಿಕ-ಮಾನಸಿಕ ಭದ್ರತೆ, ಮಾನಸಿಕ ಖಿನ್ನತೆ ಮುಂತಾದ ಸಮಸ್ಯೆಗಳನ್ನು ಆಲಿಸಿ ಸೂಕ್ತ ಪರಿಹಾರ ನೀಡುವತ್ತ ನಮ್ಮ ಸಂಸ್ಥೆ ಕಾರ್ಯ ನಿರ್ವಹಿಸುತ್ತಿದೆ. ಬೆಂಗಳೂರಿಗೆ ಆತ್ಮಹತ್ಯಾ ರಾಜಧಾನಿ ಎಂಬ ಟ್ಯಾಗ್ ಆದಷ್ಟು ಬೇಗ ಕಳಚಲಿ ಎಂದು SAHAI ಸಂಸ್ಥೆ ವಕ್ತಾರರು ಆಶಿಸಿದ್ದಾರೆ. SAHAI ವೆಬ್ ತಾಣ ಕ್ಲಿಕ್ಕಿಸಿ
ಆತ್ಮಹತ್ಯೆ ಮಹಾ ಪಾಪ ಎನ್ನುವವರು ಮಾನಸಿಕ ಒತ್ತಡಕ್ಕೆ ಸಿಲುಕಿದವರನ್ನು SAHAI ಕಚೇರಿ ಅಥವಾ ನಿಮ್ಹಾನ್ಸ್ ಗೆ ಕರೆದುಕೊಂಡು ಸೂಕ್ತ ಚಿಕಿತ್ಸೆ ನೀಡಿದರೆ ಉತ್ತಮ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications