ಕರ್ನಾಟಕದಲ್ಲಿ ಚುನಾವಣೆ ಗಾಳಿ: ಗಾಲಿ ರೆಡ್ಡಿ ಕಣಕ್ಕೆ?

ಅನೇಕ ತಿಂಗಳುಗಳಿಂದ ಜೈಲು ಗರ್ಭದಲ್ಲಿರುವ ಕರ್ನಾಟಕದ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಶ್ರೀರಾಮುಲು ಸ್ಥಾಪಿಸಿರುವ ಬಿಎಸ್ಆರ್ ಕಾಂಗ್ರೆಸ್ ಪಕ್ಷದಿಂದ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರಾ? ಎಂದು ಬಳ್ಳಾರಿಯ ಜನತೆ ಕೇಳುತ್ತಿರುವಾಗಲೇ ಅತ್ತ ಹೈದರಾಬಾದಿನಲ್ಲಿ ಜನಾರ್ದನ ರೆಡ್ಡಿ ಪರ ವಕೀಲರು ನಮ್ಮ ರೆಡ್ಡಿಗೆ ಇನ್ನಾದರೂ ಜಾಮೀನು ಕೊಡಿ ಎಂದು ಕೋರ್ಟಿನಲ್ಲಿ ಅಲವತ್ತುಕೊಂಡಿದ್ದಾರೆ.
'ನನ್ನ ಕಕ್ಷಿದಾರರು ಮಾಜಿ ಸಚಿವರು. ರಾಜಕೀಯವಾಗಿ ಚಲಾವಣೆಯಲ್ಲಿದ್ದಾರೆ. ಅಲ್ಲದೆ ಕರ್ನಾಟಕದಲ್ಲಿ ಈಗ ಚುನಾವಣೆ ಪರ್ವ ಆರಂಭವಾಗಿದೆ. ಜನಾರ್ದನ ರೆಡ್ಡಿ ಅವರೂ ಚುನಾವಣೆಗೆ ಸ್ಪರ್ಧಿಸಬಹುದು. ಹಾಗಾಗಿ ಅವರಿಗೆ ಜಾಮೀನು ನೀಡಿ' ಎಂದು ರೆಡ್ಡಿ ವಕೀಲರು ಹೈದರಾಬಾದಿನಲ್ಲಿರುವ ಸಿಬಿಐ ಕೋರ್ಟಿಗೆ ಮೊರೆಹೋಗಿದ್ದಾರೆ.
'ನನ್ನ ಕಕ್ಷಿದಾರ ಜನಾರ್ದನ ರೆಡ್ಡಿ ಅವರಿಗೆ ಸಂಬಂಧಿಸಿದಂತೆ ತನಿಖೆ ಪೂರ್ಣಗೊಂಡಿದೆ. ರೆಡ್ಡಿಗೆ ಜಾಮೀನು ನೀಡುವುದು ಬೇಡ. ರೆಡ್ಡಿ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಿ ಎಂಬ ಸಿಬಿಐ ವಾದದಲ್ಲಿ ಅರ್ಥವಿಲ್ಲ. ಹಾಗಾಗಿ ರೆಡ್ಡಿ ಅವರಿಗೆ ಜಾಮೀನು ನೀಡಿ' ಎಂದು ರೆಡ್ಡಿ ವಕೀಲರು ಗುರುವಾರ ಸಿಬಿಐ ಕೋರ್ಟಿಗೆ ಮನವಿ ಮಾಡಿಕೊಂಡಿದ್ದಾರೆ.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸಿಬಿಐ ವಕೀಲರು 'ರೆಡ್ಡಿಗೆ ಜಾಮೀನು ನೀಡಿದರೆ ಸಾಕ್ಷಿದಾರರಿಗೆ ಬೆದರಿಕೆಯೊಡ್ಡಿ, ಸಾಕ್ಷ್ಯ ನಾಶಪಡಿಸುತ್ತಾರೆ. ಆದ್ದರಿಂದ ಅವರಿಗೆ ಜಾಮೀನು ನೀಡಬೇಡಿ' ಎಂದು ಪ್ರತಿವಾದ ಮಂಡಿಸಿದರು. ಇದಕ್ಕೆ ಉತ್ತರಿಸಿದ ರೆಡ್ಡಿ ವಕೀಲರು 'ಸಾಕ್ಷ್ಯಗಳೆಲ್ಲ ಈಗಾಗಲೇ ಅಧಿಕೃತವಾಗಿ, ವೈಜ್ಞಾನಿಕವಾಗಿ ದಾಖಲಾಗಿದೆ. ಅಂತಹುದರಲ್ಲಿ ಅದನ್ನೆಲ್ಲ ಹಾಳು ಮಾಡುತ್ತಾರೆ ಎಂಬ ಸಿಬಿಐ ವಾದದಲ್ಲಿ ಹುರುಳಿಲ್ಲ' ಎಂದು ಕೋರ್ಟ್ ಗಮನ ಸೆಳೆದರು.
ಸಿಬಿಐ ಪ್ರತಿವಾದವನ್ನು ಆಧರಿಸಿ ಜಾಮೀನು ಬಗ್ಗೆ ಆದೇಶ ನೀಡುವುದಾಗಿ ತಿಳಿಸಿದ ಸಿಬಿಐ ಕೋರ್ಟ್, ವಿಚಾರಣೆಯನ್ನು ಮುಂದೂಡಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications