ಉಡುಪಿ ಮಲ್ಪೆ ಬಂದರಿನಲ್ಲಿ ಮಿನಿ ತಮಿಳುನಾಡು

ಒಂದು ಬಗೆಯ ವಿಶಿಷ್ಟ ತಳಿಯ ಮೀನನ್ನು ಹಿಡಿಯುವುದನ್ನು ನಿಷೇಧಿಸಿ ಉಡುಪಿ ಜಿಲ್ಲಾಡಳಿತ ನಿಷೇಧಿಸಿತ್ತು. ಆದರೂ ಕಾನೂನು ಬಾಹಿರವಾಗಿ ತಮಿಳುನಾಡಿನಿಂದ ಬಂದ ಮೀನುಗಾರರು ಆದೇಶ ಉಲ್ಲಂಘಿಸಿ ಮೀನುಗಾರಿಕೆಯಲ್ಲಿ ತೊಡಗಿದ್ದಾರೆ.
ರಾಜ್ಯದ ಮತ್ಯ್ಸಸಂಪತ್ತು ತಮಿಳರ ಪಾಲಾಗುತ್ತಿರುವುದನ್ನು ಈ ಹಿಂದೆಯೇ ಸ್ಥಳೀಯ ಮೀನುಗಾರರು ಜಿಲ್ಲಾಡಳಿತಕ್ಕೆ ಮತ್ತು ಪೊಲೀಸರಿಗೆ ದೂರು ನೀಡಿದ್ದರು.
ಗುರುವಾರ (ನ 22) ಭಾರೀ ಸಂಖ್ಯೆಯಲ್ಲಿ ಜಮಾಯಿಸಿದ್ದ ಮೀನುಗಾರರು ಮಲ್ಪೆ ಮೀನುಗಾರಿಕಾ ಬಂದರಿನ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಬಿಸಿ ಮುಟ್ಟಿಸಿದ್ದಾರೆ.
ಮಲ್ಪೆ ಮೀನುಗಾರರ ಅಶೋಷಿಯೇಶನ್ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಅಸಂಪ್ರದಾಯಿಕ ರೀತಿಯಲ್ಲಿ ಮೀನುಗಾರಿಕೆ ನಡೆಸುವುದು ಮತ್ತು ಅನ್ಯ ರಾಜ್ಯದವರು ಬಂದು ಮೀನುಗಾರಿಕೆ ನಡೆಸುವುದನ್ನು ತಡೆಗಟ್ಟ ಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.
ಅನ್ಯ ರಾಜ್ಯದವರು ಬಂದು ಇಲ್ಲಿ ಮೀನುಗಾರಿಕೆ ನಡೆಸಬಾರದು ಎನ್ನುವುದಕ್ಕೆ ಕಾನೂನಿನಲ್ಲಿ ಯಾವುದೇ ನಿಯಮಗಳಿಲ್ಲ. ಆದರೂ ಈ ಸಂಬಂಧ ಸಿಎಂ ಶೆಟ್ಟರ್ ಅವರ ಬಳಿ ಮಾತುಕತೆ ನಡೆಸಿದ್ದೇನೆ.
ಬೆಳಗಾವಿಯಲ್ಲಿ ಡಿಸೆಂಬರ್ 4ರಿಂದ ಆರಂಭವಾಗುವ ಚಳಿಗಾಲದ ಅಧಿವೇಶನದಲ್ಲಿ ಬೇರೆ ರಾಜ್ಯದವರು ನಮ್ಮ ರಾಜ್ಯದಲ್ಲಿ ಮೀನುಗಾರಿಕೆ ಮಾಡುವುದನ್ನು ನಿಷೇಧಿಸಿ ಮಸೂದೆ ಮಂಡಿಸಿ ಅದಕ್ಕೆ ಅಧಿವೇಶನದಲ್ಲಿ ಅನುಮತಿ ಪಡೆಯುತ್ತೇವೆ ಎನ್ನುವ ಭರವಸೆ ಮುಖ್ಯಮಂತ್ರಿಗಳು ನೀಡಿದ್ದಾರೆ ಎಂದು ಉಡುಪಿ ಶಾಸಕ ರಘುಪತಿ ಭಟ್ ಪ್ರತಿಭಟನಾಕಾರರಿಗೆ ಹೇಳಿದ್ದಾರೆ.
ಕರಾವಳಿ ತೀರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಅಕ್ರಮ ಮತ್ತು ಅಸಂಪ್ರದಾಯಿಕ ಮೀನುಗಾರಿಕೆ ನಿಷೇಧ ಆದೇಶ ಜಾರಿಯಲ್ಲಿತ್ತು. ಅಲ್ಲದೆ ಉಡುಪಿ ಕರಾವಳಿ ವ್ಯಾಪ್ತಿಯ 10 ನಾಟಿಕಲ್ ಮೈಲು ದೂರದವರೆಗೆ ಅನ್ಯ ರಾಜ್ಯದವರು ಮೀನುಗಾರಿಕೆ ನಡೆಸುವಂತಿಲ್ಲ ಎಂದು ಉಡುಪಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications