ಜಯನಗರದಲ್ಲಿ ಸಾವಯವ ತ್ಯಾಜ್ಯ ಘಟಕ ಭೀತಿ

ಜಯನಗರ ಸಾರ್ವಜನಿಕ ಈಜುಕೊಳ ಬಳಿ ಸಾವಯವ ತ್ಯಾಜ್ಯ ಘಟಕ ಸ್ಥಾಪನೆಗೆ ಸರ್ಕಾರ ಮುಂದಾಗಿತ್ತು. ಘಟಕ ಸ್ಥಾಪನೆ ವಿರೋಧಿಸಿ ಜಯನಗರ 1 ಹಾಗೂ 3ನೇ ಬ್ಲಾಕಿನ ನಾಗರೀಕರು ಪ್ರತಿಭಟನೆ ನಡೆಸಿದರು.
ಇಲ್ಲಿ ಘಟಕ ಸ್ಥಾಪಿಸುವುದರಿಂದ ಅಂತರ್ಜಲ ಕಲುಷಿತಗೊಳ್ಳುತ್ತದೆ. ಬ್ಯಾಕ್ಟೀರಿಯಾದಿಂದ ಹರಡುವ ರೋಗಗಳು ಹೆಚ್ಚುತ್ತದೆ. ಗ್ಯಾಸ್ಟ್ರೀಕ್, ಶ್ವಾಸಕೋಶ ಸಂಬಂಧಿ ಕಾಯಿಲೆಗಳು ಅಧಿಕವಾಗಲಿದೆ ಎಂದು ವೈದ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ನಾಗರೀಕ ಸಮಿತಿ ಅಧ್ಯಕ್ಷ ಜಿ ರಾಜಕುಮಾರ್ ಶ್ರೀವಾಸ್ತಾವ್ ಹೇಳಿದರು.
ಕರ್ನಾಟಕ ಮುನ್ಸಿಪಾಲ್ ಕಾರ್ಪೋರೇಟ್ ಕಾಯಿದೆ ಪ್ರಕಾರ ಇಲ್ಲಿ ಘಟಕ ಪರಿವರ್ತಕ ಸ್ಥಾಪನೆ ಮಾಡುವುದು ಕಾನೂನು ಉಲ್ಲಂಘನೆಯಾಗುತ್ತದೆ. ಅದರಲ್ಲೂ ಚರಂಡಿ ಕಾಲುವೆ ಮೇಲೆ ಘಟಕ ಪರಿವರ್ತಕ ಇರುವುದು ತಪ್ಪು ಎಂದು ನಾಗರೀಕರ ಸಮಿತಿ ಸದಸ್ಯರು ಹೇಳಿದ್ದಾರೆ.
ಸುಮಾರು 125 ಜನ ಸಹಿವುಳ್ಳ ಮನವಿ ಪತ್ರವನ್ನು ಬೆಂಗಳೂರಿನ ಮೇಯರ್ ವೆಂಕಟೇಶ್ ಮೂರ್ತಿ, ದಕ್ಷಿಣ ವಿಭಾಗದ ಆಯುಕ್ತ, ಮುಖ್ಯ ಇಂಜಿನಿಯರ್, ಹೆಚ್ಚುವರಿ ಆಯುಕ್ತ(ದಕ್ಷಿಣ), ಕಾರ್ಯಕಾರಿ ಇಂಜಿನಿಯರ್ ಹಾಗೂ ಸ್ಥಳೀಯ ಶಾಸಕ ಬಿಎನ್ ವಿಜಯ್ ಕುಮಾರ್ ಅವರಿಗೆ ಸಲ್ಲಿಸಲಾಗಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಹೆಚ್ಚುವರಿ ಅಯುಕ್ತ(ದಕ್ಷಿಣ) ಕೆವಿ ತ್ರಿಲೋಕ್ ಚಂದ್ರ, "ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಘಟಕ ಸ್ಥಾಪನೆ ಬಗ್ಗೆ ಕಾನೂನು ತಜ್ಞರ ಸಲಹೆ ಕೇಳಿದೆ. ಅವರ ಸಲಹೆಯಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
ಸಾವಯವ ತ್ಯಾಜ್ಯ ತೊಂದರೆ: ಸಾವಯವ ತ್ಯಾಜ್ಯ ಘಟಕ ಪರಿವರ್ತಕ ಸ್ಥಾಪನೆಯಿಂದ ತ್ಯಾಜ್ಯವನ್ನು ಗೊಬ್ಬರವಾಗಿ ಪರಿವರ್ತಿಸಬಹುದಾದರೂ ಸೂಕ್ತವಾಗಿ ಪ್ರಕ್ರಿಯೆ ನಡೆಯದಿದ್ದರೆ, ಸುತ್ತಮುತ್ತಲಿನ ಪ್ರದೇಶದ ಪರಿಸರ ಮಾಲಿನ್ಯಗೊಳ್ಳಲಿದೆ.
ಸಾವಯಮ ತ್ಯಾಜ್ಯ ಹಾಗೆ ಕೊಳೆಯಲು ಬಿಟ್ಟರೆ, ಸೊಳ್ಳೆ, ನೊಣಗಳ ಕಾಟ ಹೆಚ್ಚಳವಾಗಬಹುದು. ಚರ್ಮ ಸಂಬಂಧಿತ ಕಾಯಿಲೆಗಳು ಹೆಚ್ಚಾಗುವ ಸಂಭವವಿದೆ. ಬೆಂಗಳೂರಿನಲ್ಲಿ ಈಗಾಗಲೇ ಬಹುಪಾಲು ಜನ ಶ್ವಾಸಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿರುವುದರಿಂದ ಜನದಟ್ಟನೆ ಇರುವ ಪ್ರದೇಶದಲ್ಲಿ ಈ ರೀತಿ ಘಟಕ ಸ್ಥಾಪನೆ ಇನ್ನಷ್ಟು ಹಾನಿ ಉಂಟು ಮಾಡಬಹುದು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications