ಮಹಿಳೆಯರನ್ನು ಗೌರವಿಸದ ಪಕ್ಷಗಳನ್ನು ತಿರಸ್ಕರಿಸಿ

ಮುಂಬರುವ ಚುನಾವಣೆಯಲ್ಲಿ ಈ ಎರಡು ರಾಷ್ಟ್ರೀಯ ಪಕ್ಷಗಳನ್ನು ಮತದಾರರು ತಿರಸ್ಕರಿಸಬೇಕಿದೆ. ಈ ಮೂಲಕ ತಕ್ಕ ಪಾಠ ಕಲಿಸಬೇಕಿದೆ ಎಂದು ಚಿತ್ರ ನಟಿ ಹಾಗೂ ಜೆಡಿಎಸ್ ಮುಖಂಡರಾದ ಮಾಳವಿಕಾ ಅವಿನಾಶ್ ಹೇಳಿದ್ದಾರೆ.
ಮದ್ದೂರು ತಾಲೂಕಿನ ಕೊಪ್ಪದ ಸರಕಾರಿ ಶಾಲಾ ಆವರಣದಲ್ಲಿ ಜಿಲ್ಲಾ ಜೆಡಿಎಸ್ ಮಹಿಳಾ ಘಟಕದ ವತಿಯಿಂದ ನಡೆದ ನಾಗಮಂಗಲ ವಿಧಾನಸಭಾ ಕ್ಷೇತ್ರದ 'ಮಹಿಳೆಯರ ಪ್ರಗತಿ ಗಾಗಿ ಬೃಹತ್ ಮಹಿಳಾ ಸಮಾವೇಶ' ದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಮಾರ್ಚ್ 02, 2012 ರಂದು ಮಾಳವಿಕಾ ಜೆಡಿಎಸ್ ಪಕ್ಷ ಸೇರಿಕೊಂಡು ಅದರ ಪ್ರಾಥಮಿಕ ಸದಸ್ಯತ್ವ ಪಡೆದರು. ಈಗ ಜೆಡಿಎಸ್ ಪಕ್ಷದ ನೂತನ ಕಾರ್ಯದರ್ಶಿಯಾಗಿ ಇತ್ತೀಚೆಗೆ ಆಯ್ಕೆಯಾಗಿದ್ದರು.
ಮಾಳವಿಕಾ ನಂತರ ಜೆಡಿಎಸ್ ಪಕ್ಷಕ್ಕೆ ನಟಿ ಪೂಜಾ ಗಾಂಧಿ ಸೇರಿಕೊಂಡಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ರಾಜಕೀಯದಲ್ಲಿ ಈಗಾಗಲೇ ಕನ್ನಡದ ನಟಿಯರಾದ ತಾರಾ, ಉಮಾಶ್ರೀ ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ.
ಜೆಡಿಎಸ್ ಸೇರಿದ್ದು ಏಕೆ?: ಸಮಾಜವಾದಿ ತತ್ತ್ವದಿಂದ ಬೆಳೆದು ಬಂದಿರುವ ಜೆಡಿಎಸ್ ಪಕ್ಷಕ್ಕೆ ನಾನು ಸೇರುತ್ತಿದ್ದೇನೆ. ನನಗೆ ಚಿಕ್ಕಂದಿನಿಂದಲೂ ರಾಜಕೀಯದ ಬಗ್ಗೆ ಆಸಕ್ತಿಯಿತ್ತು. ಕಾನೂನು ಶಿಕ್ಷಣ ಪಡೆಯುವಾಗ ಈ ಆಸಕ್ತಿ ಇನ್ನಷ್ಟು ಬೆಳೆಯಿತು. ರಾಜಕೀಯವನ್ನು ವೃತ್ತಿಯಾಗಿ ಸ್ವೀಕರಿಸುತ್ತಿದ್ದೇನೆ" ಎಂದು ಮಾಳವಿಕಾ ಈ ಹಿಂದೆ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.
ಮೀಸಲಾತಿ ಬಗ್ಗೆ ಚೆಲುವರಾಯ ಸ್ವಾಮಿ: ದೇವೇಗೌಡರು ಮೀಸಲಾತಿ ಜಾರಿಗೊಳಿಸಿದ್ದರಿಂದ ಇಂದು ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರು ಮತ್ತು ಹಿಂದುಳಿದ ವರ್ಗದವರು ಪ್ರಾತಿನಿಧ್ಯ ಪಡೆದಿದ್ದಾರೆ.
ಎಚ್.ಡಿ. ಕುಮಾರಸ್ವಾಮಿಯವರ ಅಧಿಕಾರಾವಧಿಯಲ್ಲಿ ಜಾರಿಗೆ ತಂದ ಭಾಗ್ಯಲಕ್ಷ್ಮಿ ಯೋಜನೆ, ಲಾಟರಿ ನಿಷೇಧ, ಸಾರಾಯಿ ನಿಷೇಧ, ಮಹಿಳೆಯರಿಗೆ ಉದ್ಯೋಗಾವಕಾಶ, ಉಚಿತ ಶಿಕ್ಷಣ, ಉಚಿತ ಸೈಕಲ್ ವಿತರಣೆ, ಸ್ತ್ರೀ ಶಕ್ತಿ ಸಂಘಗಳಿಗೆ ಹೆಚ್ಚಿನ ಒತ್ತು ಸೇರಿದಂತೆ ಹಲವಾರು ಯೋಜನೆಗಳು ಜನಪ್ರಿಯವಾಗಿವೆ ಎಂದರು.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications