ಎಚ್ ಡಿ ಕುಮಾರಸ್ವಾಮಿ ಒಬ್ಬ ಕಾಡು ಮನುಷ್ಯ
ಹಾಸನ, ನ 26: ರಾಜಕೀಯ ನಾಯಕರುಗಳ ಆರೋಪ ಪ್ರತ್ಯಾರೋಪ ತಾರಕಕ್ಕೇರಿದ್ದು, ಜೆಡಿಎಸ್ ರಾಜ್ಯಾಧ್ಯಕ್ಷ ಒಬ್ಬ 'ಕಾಡು ಮನುಷ್ಯ' ಎಂದು ಕರ್ನಾಟಕ ಜನತಾ ಪಕ್ಷದ ಅಧ್ಯಕ್ಷ ವಿ ಧನಂಜಯ ಕುಮಾರ್ ಆರೋಪಿಸಿದ್ದಾರೆ.
ಕುಮಾರಸ್ವಾಮಿ ಒಬ್ಬ ಮಾಜಿ ಮುಖ್ಯಮಂತ್ರಿ ಅನ್ನುವುದನ್ನು ಮರೆಯಬಾರದು. ನಮ್ಮ ಪಕ್ಷದ ವಿರುದ್ದ ಅವರು ಆಡಿದ ಮಾತು ಅವರಿಗೆ ಶೋಭೆ ತರುವಂತದಲ್ಲ, ಕಾಡು ಮನುಷ್ಯರ ರೀತಿಯಲ್ಲಿ ಅವರು ಮಾತನಾಡಿದ್ದಾರೆಂದು ಧನಂಜಯ ಕುಮಾರ್ ಕುಮಾರಸ್ವಾಮಿಗೆ ತಿರುಗೇಟು ನೀಡಿದ್ದಾರೆ.

ನಮ್ಮ ಪಕ್ಷವನ್ನು ಕಳ್ಳರ ಜೈಲಿಗೆ ಹೋಗುವ ಪಕ್ಷ ಎಂದು ಟೀಕಿಸಿದ್ದಾರೆ. ಮಾಜಿ ಮುಖ್ಯಮಂತ್ರಿಯೊಬ್ಬರ ಬಾಯಿಯಿಂದ ಇಂತಹ ಮಾತು ಬರಬಾರದು. ಅವರ ಮತ್ತು ಅವರ ಕುಟುಂಬದ ಮೇಲೂ ಭ್ರಷ್ಟಾಚಾರದ ಕೇಸುಗಳಿವೆ. ರಾಜ್ಯವನ್ನು ಯಾರು ಲೂಟಿ ಮಾಡಿದ್ದಾರೆನ್ನುವುದು ರಾಜ್ಯದ ಜನತೆಗೆ ಅರಿತಿದೆ ಎಂದು ಧನಂಜಯ ಕುಮಾರ್ ಹೇಳಿದ್ದಾರೆ.
ಬೆಂಗಳೂರು ಗ್ರಾಮಾಂತರ ಲೋಕಸಭಾ ಸದಸ್ಯರಾದ ಕುಮಾರಸ್ವಾಮಿಯವರು ಮೊದಲು ತಾನು ಆರಿಸಿ ಬಂದ ಕ್ಷೇತ್ರದ ಅಭಿವೃದ್ದಿ ಬಗ್ಗೆ ಗಮನ ಹರಿಸಲಿ. ಕುಮಾರಸ್ವಾಮಿ ಮತ್ತು ದೇವೇಗೌಡರಿಗೆ ಬೇರೆ ಪಕ್ಷದವರನ್ನು ಟೀಕಿಸಿವುದೇ ದೈನಂದಿನ ಕಾಯಕ ಎಂದು ಧನಂಜಯ ಕುಮಾರ್ ಲೇವಡಿ ಮಾಡಿದ್ದಾರೆ.
ದೇವೇಗೌಡರ ಕುಟುಂಬ ಎಲ್ಲರ ಬಗ್ಗೆ ಕೀಳು ಮಟ್ಟದಲ್ಲಿ ಟೀಕಿಸುವುದಕ್ಕೆ ಹೆಸರುವಾಸಿ ಅನ್ನೋದನ್ನಾ ನಮ್ಮ ರಾಜ್ಯದ ಜನತೆ ಅರಿತಿದಿದ್ದಾರೆ. ಅವರ ಹಾಗೆ ಕೀಳು ಶಬ್ದ ಬಳಸಿ ಚಪ್ಪಾಳೆ ಗಿಟ್ಟಿಸುವ ಅಗತ್ಯ ನಮಗಿಲ್ಲ. ಇನ್ನಾದರೂ ಮಾತನಾಡುವ ಭರದಲ್ಲಿ ಒಳ್ಳೆ ಶಬ್ದವನ್ನು ಬಳಸಿ ಎಂದು ಕುಮಾರಸ್ವಾಮಿಗೆ ಧನಂಜಯ ಕುಮಾರ್ ಕಿವಿಮಾತು ಹೇಳಿದ್ದಾರೆ.
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ತನ್ನ ಹೊಸ ಪಕ್ಷಕ್ಕೆ ಕರ್ನಾಟಕ ಜನತಾ ಪಕ್ಷ ಎಂದು ನಾಮಕರಣ ಮಾಡುವ ಬದಲು 'ಕಳ್ಳರ ಜೈಲು ಪಕ್ಷ' ಎಂದು ಹೆಸರಿಡುವುದು ಸೂಕ್ತ ಎಂದು ಎಚ್ ಡಿ ಕುಮಾರಸ್ವಾಮಿ ಪಕ್ಷದ ಕಚೇರಿಯಲ್ಲಿ ಲೇವಡಿ ಮಾಡಿದ್ದರು.
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Virat Kohli: ಎಲ್ಲೂ ಅವಕಾಶ ಸಿಗದಿದ್ರೆ ಸ್ಯಾಂಡಲ್ವುಡ್ಗೆ ಬರ್ತೀನಿ: ವಿರಾಟ್ ಕೊಹ್ಲಿ ವಿಡಿಯೋ ವೈರಲ್












Click it and Unblock the Notifications