Get Updates
Get notified of breaking news, exclusive insights, and must-see stories!

6ನೇ ಬಾರಿ ರೆಡ್ಡಿ ಜಾಮೀನು ಅರ್ಜಿ ವಜಾ

Janardhana Redddy Bail Plea rejected OMC case
ಹೈದರಾಬಾದ್, ನ.27: ಓಬಳಾಪುರಂ ಮೈನಿಂಗ್ ಕಂಪನಿ(ಓಎಂಸಿ)ಯ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಗಣಿಧಣಿ ಮತ್ತು ಮಾಜಿ ಸಚಿವ ಜನಾರ್ದನ ರೆಡ್ಡಿ ಜಾಮೀನು ಅರ್ಜಿಯನ್ನು ಇಲ್ಲಿನ ಸಿಬಿಐ ವಿಶೇಷ ನ್ಯಾಯಾಲಯ ತಳ್ಳಿಹಾಕಿದೆ.

ಓಎಂಸಿ ಪ್ರಕರಣ ಸಂಬಂಧ ಕಳೆದ ವರ್ಷ ಸೆಪ್ಟೆಂಬರ್ ತಿಂಗಳಲ್ಲಿ ಸಿಬಿಐನಿಂದ ಬಳ್ಳಾರಿಯಲ್ಲಿ ಬಂಧಿತರಾಗಿದ್ದ ಗಾಲಿ ಜನಾರ್ಧನ ರೆಡ್ಡಿ ಜಾಮೀನು ಕೋರಿ ಸಲ್ಲಿಸಿದ್ದ 6ನೇ ಅರ್ಜಿಯನ್ನು ಕೂಡ ಕೋರ್ಟ್ ಸೋಮವಾರ(ನ.27) ತಿರಸ್ಕರಿಸಿದೆ.

ಚಂಚಲಗೂಡ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ರೆಡ್ಡಿ, ಮುಂದಿನ ವರ್ಷ ಕರ್ನಾಟಕ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಚುನಾವಣೆಯಲ್ಲಿ ಭಾಗವಹಿಸುವ ಸಲುವಾಗಿ ಜಾಮೀನು ನೀಡಬೇಕೆಂದು ಕೋರಿ ಸಿಬಿಐ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ನನ್ನ ಕಕ್ಷಿದಾರ ಜನಾರ್ದನ ರೆಡ್ಡಿ ಅವರಿಗೆ ಸಂಬಂಧಿಸಿದಂತೆ ತನಿಖೆ ಪೂರ್ಣಗೊಂಡಿದೆ. ರೆಡ್ಡಿಗೆ ಜಾಮೀನು ನೀಡುವುದು ಬೇಡ. ರೆಡ್ಡಿ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಿ ಎಂಬ ಸಿಬಿಐ ವಾದದಲ್ಲಿ ಅರ್ಥವಿಲ್ಲ. ಹಾಗಾಗಿ ರೆಡ್ಡಿ ಅವರಿಗೆ ಜಾಮೀನು ನೀಡಿ' ಎಂದು ರೆಡ್ಡಿ ವಕೀಲರು ಗುರುವಾರ(ನ.23) ಸಿಬಿಐ ಕೋರ್ಟಿಗೆ ಮನವಿ ಮಾಡಿಕೊಂಡಿದ್ದರು.

ಆದರೂ, ಅಕ್ರಮ ಗಣಿಗಾರಿಕೆ ಪ್ರಕರಣದ ತನಿಖೆ ಇನ್ನೂ ಮುಂದುವರೆದಿದ್ದು ರೆಡ್ಡಿಗೆ ಜಾಮೀನು ನೀಡಿದರೆ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ.

ಹಾಗಾಗಿ ಜಾಮೀನು ನೀಡಬಾರದು ಎಂದು ನ್ಯಾಯಾಲಯದಲ್ಲಿ ಸಿಬಿಐ ಬಲವಾಗಿ ಆಕ್ಷೇಪ ವ್ಯಕ್ತಪಡಿಸಿತು. ಜನಾರ್ಧನ ರೆಡ್ಡಿ, ಜಾಮೀನಿಗಾಗಿ ಲಂಚ ಪ್ರಕರಣದಲ್ಲಿ ಕೂಡ ಆರೋಪಿಯಾಗಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+