ಫೇಸ್ ಬುಕ್ ವಿವಾದ, ಪೊಲೀಸ್ ಅಮಾನತು, ಶಿವಸೇನೆ ಬಂದ್

ಮಹಾರಾಷ್ಟ್ರದ ಪಲ್ ಘರ್ ಪ್ರದೇಶದಲ್ಲಿ ಸಂಪೂರ್ಣ ಬಂದ್ ಆಚರಿಸಲಾಗುತ್ತಿದೆ. ಫೇಸ್ ಬುಕ್ ಕಾಮೆಂಟ್ ವಿವಾದದಲ್ಲಿ ಯುವತಿಯರ ಬಂಧನ ಕ್ರಮವನ್ನು ಶಿವಸೇನಾ ಸಮರ್ಥಿಸಿಕೊಂಡಿದೆ. ಬಾಳಾ ಠಾಕ್ರೆ ಅವರಿಗೆ ಅಪಮಾನ ಮಾಡಿದರೆ ಸಹಿಸಲು ಸಾಧ್ಯವಿಲ್ಲ ಎಂದು ಎಚ್ಚರಿಕೆ ನೀಡಿದೆ. ಈ ಮೂಲಕ ಶಿವಸೇನಾ ಅಸ್ತಿತ್ವ ಇನ್ನೂ ಪ್ರಬಲವಾಗಿ ಇದೇ ಎಂಬುದನ್ನು ತೋರಿಸಲು ಬಂದ್ ಆಚರಣೆಗೆ ಕರೆ ನೀಡಲಾಗಿದೆ.
ಫೇಸ್ ಬುಕ್ ಕಾಮೆಂಟ್ ಹಾಕಿದ್ದ ಯುವತಿ ಶಹೀನ್ ದಾಡ ಹಾಗೂ ಕಾಮೆಂಟ್ ಲೈಕ್ ಮಾಡಿದ್ದ ಆಕೆ ಗೆಳೆತಿ ರೇಣು ಶ್ರೀನಿವಾಸನ್ ಇಬ್ಬರಿಗೆ ಜಾಮೀನಿನ ಮೇಲೆ ಬಿಡುಗಡೆ ಸಿಕ್ಕಿದೆ. ಇಬ್ಬರು ತಲಾ 15,000 ರು ದಂಡ ಕಟ್ಟಿ ಜೈಲಿನಿಂದ ಹೊರಬಂದಿದ್ದರು.
ಈ ಬಂಧನವನ್ನು ಖಂಡಿಸಿ ವ್ಯಾಪಕ ಟೀಕೆಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಮಹಾರಾಷ್ಟ್ರ ಸರ್ಕಾರ, ಮಂಗಳವಾರ(ನ.28) ಇಬ್ಬರು ಪೊಲೀಸರನ್ನು ಅಮಾನತುಗೊಳಿಸಿ, ಮ್ಯಾಜಿಸ್ಟ್ರೇಟ್ ರನ್ನು ಎತ್ತಂಗಡಿ ಮಾಡಿತ್ತು.
ಥಾಣೆ(ಗ್ರಾಮೀಣ) ಠಾಣೆ ಎಸ್ಪಿ ರವೀಂದ್ರ ಸೆಂಗಾಂವ್ಕರ್ ಹಾಗೂ ಹಿರಿಯ ಪೊಲೀಸ್ ಇನ್ಸ್ ಪೆಕ್ಟರ್ ಶ್ರೀಕಾಮ್ತ್ ಪಿಂಗ್ಳೆ ಅವರನ್ನು ಅಮಾನತುಗೊಳಿಸಿ ತನಿಖೆಗೆ ಆದೇಶಿಸಲಾಗಿದೆ ಎಂದು ಮಹಾರಾಷ್ಟ್ರ ಗೃಹಸಚಿವ ಆರ್ ಆರ್ ಪಾಟೀಲ್ ಹೇಳಿದ್ದರು.
ಯುವತಿಯರಾದ ಶಹೀನ್ ದಾಡ ಹಾಗೂ ರೇಣು ಶ್ರೀನಿವಾಸನ್ ಅವರ ಬಂಧನ ಹಾಗೂ ಜಾಮೀನು ಆದೇಶ ನೀಡಿದ್ದ ಜುಡೀಶಿಯಲ್ ಮ್ಯಾಜಿಸ್ಟ್ರೇಟ್ ಆರ್ ಜಿ ಬಗಾಡೆ ಅವರನ್ನು ಬಾಂಬೆ ಹೈಕೋರ್ಟಿಗೆ ಎತ್ತಂಗಡಿ ಮಾಡಲಾಗಿದೆ.
ಯುವತಿಯ ಸಂಬಂಧಿಕರೊಬ್ಬರ ಕ್ಲಿನಿಕ್ ಮೇಲೆ ದಾಳಿ ಮಾಡಿದ ಆರೋಪದ ಮೇಲೆ ಸುಮಾರು 9 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ, ಬಂಧಿತರೆಲ್ಲರೂ ಶಿವಸೇನೆ ಕಾರ್ಯಕರ್ತರೇ? ಎಂಬುದನ್ನು ಪೊಲೀಸರು ಸ್ಪಷ್ಟಪಡಿಸಿಲ್ಲ.
ಫೇಸ್ ಬುಕ್ ಕಾಮೆಂಟ್, ಲೈಕ್ ಮಾಡಿದ್ದಕ್ಕೆ ಯುವತಿಯರನ್ನು ಬಂಧಿಸಿದ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಚೇರ್ಮನ್ ಮಾರ್ಕಂಡೇಯ ಕಟ್ಜು ಅವರು ತೀವ್ರವಾಗಿ ಖಂಡಿಸಿದ್ದರು.
ಮಹಾರಾಷ್ಟ್ರ ಮುಖ್ಯಮಂತ್ರಿ ಪೃಥ್ವಿರಾಜ್ ಚೌಹಾಣ್ ಅವರಿಗೆ ಪತ್ರ ಬರೆದಿರುವ ಕಟ್ಜು, ಪೊಲೀಸರ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು. ನಂತರ ಮಹಾರಾಷ್ಟ್ರ ಸರ್ಕಾರ ಮೇಲ್ಕಂಡ ಕ್ರಮ ಜರುಗಿಸಿತ್ತು.
ಬಾಳಾ ಠಾಕ್ರೆ ಅಂತಿಮ ಯಾತ್ರೆಯಲ್ಲಿ ಸುಮಾರು 20 ಲಕ್ಷಕ್ಕೂ ಅಧಿಕ ಜನ ಭಾಗಿಯಾಗಿದ್ದರು. 1 ಲಕ್ಷ ಆಟೋ, 30 ಸಾವಿರ ಟ್ಯಾಕ್ಸಿಗಳು ಸಂಚಾರ ಸ್ಥಗಿತಗೊಂಡಿತ್ತು. ಇದರಿಂದ ದೈನಂದಿನ ಚಟುವಟಿಕೆಗಳಿಗೆ ತೊಂದರೆ ಉಂಟಾಗಿತ್ತು.
ಇದನ್ನು ಖಂಡಿಸಿ 21 ವರ್ಷದ ಯುವತಿ ಫೇಸ್ ಬುಕ್ ನಲ್ಲಿ "Thackeray are born and die daily and one should not observe a bandh for that",ಎಂದು ಸ್ಟೇಟಸ್ ಹಾಕಿದ್ದಳು. ಇದನ್ನು ಆಕೆ ಗೆಳತಿಯೊಬ್ಬಳು ಲೈಕ್ ಮಾಡಿದ್ದಳು. ಈಗ ಇಬ್ಬರು ಪೊಲೀಸರ ಅತಿಥಿಯಾಗಿದ್ದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications