ಜಿಂದಾಲ್ ಡೀಲ್: ಜೀ ಪತ್ರಕರ್ತರ ಬಂಧನ

ಜಿಂದಾಲ್ ಕಂಪನಿ ವಿರುದ್ಧ ಸುದ್ದಿ ಪ್ರಸಾರ ಮಾಡದಿರಲು ಜೀ ನ್ಯೂಸ್ ವರದಿಗಾರರು 100 ಕೋಟಿ ರು ಕೇಳಿದ್ದರು ಎಂದು ನವೀನ್ ಜಿಂದಾಲ್ ಆರೋಪಿಸಿದ್ದರು. ಜಿಂದಾಲ್ ಅವರ ಹೇಳಿಕೆ ಸುಳ್ಳು. ಇದರಿಂದ ನಮ್ಮ ಜೀ ಟಿವಿ ಬ್ರ್ಯಾಂಡ್ ಗೆ ಹೊಡೆತ ಬಿದ್ದಿದೆ ಎಂದು ಹೇಳಿ ಜೀ ಸಮೂಹ ಸಂಸ್ಥೆ ಜಿಂದಾಲ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿತ್ತು.
ಆದರೆ, ಕಳೆದ ರಾತ್ರಿ ಜೀ ನ್ಯೂಸ್ ಸಂಪಾದಕ ಸುಧೀರ್ ಚೌಧುರಿ ಹಾಗೂ ಜೀ ಬಿಸಿನೆಸ್ ಚಾನೆಲ್ ನ ಮುಖ್ಯಸ್ಥ ಸಮೀರ್ ಅಹ್ಲುವಾಲಿಯಾ ಅವರನ್ನು ದೆಹಲಿ ಕ್ರೈಂ ಬ್ರ್ಯಾಂಚ್ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬುಧವಾರ ನ್ಯಾಯಲಯದ ಮುಂದೆ ಹಾಜರುಪಡಿಸಲಾಗುತ್ತೆ.
ಜೀ ಟಿವಿ ತಂಡ ಒಡ್ಡಿದ್ದ ಡೀಲ್ ಕುರಿತಂತೆ ಗುರುವಾರ (ಅ.25) ಸುದ್ದಿಗೋಷ್ಠಿ ನಡೆಸಿದ ನವೀನ್, ಅವರು ತೋರಿಸಿದ ವಿಡಿಯೋ ಕ್ಲಿಪ್ಪಿಂಗ್ ನಕಲಿಯಾಗಿದೆ ಎಂದು ಜೀ ನ್ಯೂಸ್ ಹೇಳಿತ್ತು.
ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಜಿಂದಾಲ್ ಕಂಪನಿ ವಿರುದ್ಧ ಸ್ಟಿಂಗ್ ಆಪರೇಷನ್ ಜೀ ಟಿವಿ ನಡೆಸಿತ್ತು. ಈ ವಿಡಿಯೋ ಪ್ರಸಾರವಾಗಬಾರದು ಎಂದರೆ ಕೋಟ್ಯಂತರ ರುಪಾಯಿ ನೀಡುವಂತೆ ಬೆದರಿಕೆ ಒಡ್ಡಿತ್ತು ಎಂದು ನವೀನ್ ಜಿಂದಾಲ್ ಆರೋಪಿಸಿದ್ದರು.ವಿಡಿಯೋದಲ್ಲಿ ಜೀ ನ್ಯೂಸ್ ವರದಿಗಾರ ಹಾಗೂ ಜಿಂದಾಲ್ ಸಂಸ್ಥೆ ಸಿಬ್ಬಂದಿ ಜೊತೆ ಡೀಲ್ ಮಾಡುತ್ತಿರುವ ದೃಶ್ಯಗಳಿದೆ.
ಅದರೆ, ನೆವೀನ್ ಜಿಂದಾಲ್ ಮಾಡಿದ ಆರೋಪಗಳನ್ನು ಜೀ ಟಿವಿ ಸಂಸ್ಥೆ ನಿರಾಕರಿಸಿತ್ತು. ಈ ರೀತಿ ಆರೋಪಗಳು ಈ ಹಿಂದೆ ಕೂಡಾ ಕೇಳಿ ಬಂದಿತ್ತು. ನಾವು ಇದಕ್ಕೆಲ್ಲ ಹೆದರುವುದಿಲ್ಲ ಎಂದು ಜೀ ಎಂಟರ್ ಪ್ರೈಸರ್ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿಇಒ ಪುನೀತ್ ಗೋಯಾಂಕ ಹೇಳಿದ್ದರು.
ಇದಕ್ಕೆ ಪ್ರತಿಯಾಗಿ ನವೀನ್ ಜಿಂದಾಲ್ ಅವರು ಪುರಾವೆ ಸಮೇತ ಜೀ ಟಿವಿ ಡೀಲ್ ಬಯಲು ಮಾಡಿದ್ದಾರೆ. ಕಲ್ಲಿದ್ದಲು ಹಗರಣದಲ್ಲಿ ಜಿಂದಾಲ್ ಸಂಸ್ಥೆ ಪಾತ್ರ ಇದೆ ಎಂದು ಜೀ ನ್ಯೂಸ್ ವರದಿ ಮಾಡಿತ್ತು.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications