ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭದ್ರಾ ಮೇಲ್ದಂಡೆ ಹಗರಣ : ಬಿಎಸ್ ವೈ ಗೆ ಜಾಮೀನು

By Mahesh
|
Google Oneindia Kannada News

Yeddyurappa
ಬೆಂಗಳೂರು, ನ.28: ಭದ್ರಾ ಮೇಲ್ದಂಡೆ ಯೋಜನೆ ಹಗರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರಿಗೆ ಲೋಕಾಯುಕ್ತವಿಶೇಷ ನ್ಯಾಯಾಲಯ ಬುಧವಾರ (ನ.28) ಜಾಮೀನು ಮಂಜೂರು ಮಾಡಿದೆ. ವಿಚಾರಣೆಗೆ ಸಹಕರಿಸಬೇಕು, ಸಾಕ್ಷಿ ನಾಶಪಡಿಸಬಾರದು ಎಂದು ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಲಾಗಿದೆ.

ಪ್ರಕರಣದಲ್ಲಿ ಸಹ ಆರೋಪಿಗಳಾಗಿರುವ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿಎವೈ ರಾಘವೇಂದ್ರ, ವಿಜಯೇಂದ್ರ ಹಾಗೂ ಅಳಿಯ ಸೋಹನ್ ಕುಮಾರ್ ಅವರಿಗೂ ಜಾಮೀನು ಮಂಜೂರಾಗಿದೆ.

ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ [B-report: When police have filed a B report you will have to file an objections and you will have to lead your evidence to get issue summons to the accused.-ವಕೀಲ ರಾಜೀವ್] ನಲ್ಲಿ ಯಡಿಯೂರಪ್ಪ ಅವರನ್ನು ನಿರ್ದೋಷಿ ಎಂದು ನಮೂದಿಸಲಾಗಿತ್ತು.

ಇದಕ್ಕೆ ವೈಎಸ್ ವಿ ದತ್ತಾ ಪರ ವಕೀಲ ಪಿ.ಎನ್.ಹೆಗಡೆ ಅವರು ಆಕ್ಷೇಪ ವ್ಯಕ್ತಪಡಿಸಿದ್ದರು. ಯಡಿಯೂರಪ್ಪ ಅವರಿಗೆ ಕ್ಲೀನ್ ಚಿಟ್ ನೀಡಲು ಕಷ್ಟ. ಪ್ರಕರಣದ ಬಗ್ಗೆ ಮರು ತನಿಖೆ ನಡೆಸಿ ಹೊಸದಾಗಿ ಬಿ ರಿಪೋರ್ಟ್ ಸಲ್ಲಿಸುವಂತೆ' ಲೋಕಾಯುಕ್ತ ಕೋರ್ಟ್ ಆದೇಶಿಸಿತ್ತು.

ಲೋಕಾಯುಕ್ತ ತನಿಖಾಧಿಕಾರಿ ಡಿವೈಎಸ್ ಪಿ ಗಿರೀಶ್ ಎಸ್ ಅವರು ಆರ್ ಎನ್ ಎಸ್ ಇನ್ಫ್ರಾ ಸ್ಟಕ್ಚರ್ ಲಿ. ನೀಡಿರುವ ಗುತ್ತಿಗೆಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ವರದಿ ನೀಡಿದ್ದರು.

ಭದ್ರಾ ಮೇಲ್ದಂಡೆ ಕಾಮಗಾರಿ ಎರಡನೇ ಹಂತದ ಗುತ್ತಿಗೆಯಲ್ಲಿ ಅವ್ಯವಹಾರ ನಡೆದಿದ್ದು, ಯಡಿಯೂರಪ್ಪ ಅವರು ತಮಗೆ ಬೇಕಾದವರಿಗೆ ಗುತ್ತಿಗೆ ನೀಡಿ 16 ಕೋಟಿ ಲಂಚ ಪಡೆದಿದ್ದಾರೆ ಎಂದು ಜೆಡಿಎಸ್ ವಕ್ತಾರ ವೈಎಸ್ ವಿ ದತ್ತಾ ಅವರು ಲೋಕಾಯುಕ್ತದಲ್ಲಿ ಖಾಸಗಿ ದೂರು ಸಲ್ಲಿಸಿದ್ದರು.

ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಅಧಿಕ ಮೊತ್ತದ ಬಿಡ್ ಸಲ್ಲಿಸಿದ್ದ ಕಂಪನಿಗೆ (RNS Infrastructure) ಟೆಂಡರ್ ಅನುಮೋದಿಸುವ ಮುನ್ನ ಆ ಕಂಪನಿಯಿಂದ ಯಡಿಯೂರಪ್ಪ ಕುಟುಂಬದವರ ಕಂಪನಿಗೆ (Dhavalgiri Properties and Sahyadri Healthcare) ಲಂಚ ಸಂದಾಯವಾಗಿದೆ ಎಂಬುದು ಪ್ರಕರಣದ ಪ್ರಮುಖ ದೂರಾಗಿದೆ.

ಈ ಪ್ರಕರಣದಲ್ಲಿ ಆರ್ ಎನ್ ಎಸ್ ಇನ್ಫಾಸ್ಟಕ್ಚರ್ ಲಿ. ಜ್ಯೋತಿ ಲಿ. ಧವಳಗಿರಿ ಪ್ರಾಪರ್ಟೀಸ್, ಸಹ್ಯಾದ್ರಿ ಹೆಲ್ತ್ ಕೇರ್ ಮುರುಡೇಶ್ವರ ಎಂಟರ್ ಪ್ರೈಸರ್ ಸಂಸ್ಥೆಗಳ ಮೇಲೆ ಆರೋಪವಿದೆ. ಇದೇ ಹಗರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ.

English summary
Lokayukta Court today (Nov.28) granted anticipatory bail to former CM BS Yeddyurappa and kins. Yeddyurappa and kins are accused of irregularities in awarding an second phase of upper bhadra irrigation project to a private firm
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X