ಐಐಎಂಬಿ ಆಡಳಿತಾಧಿಕಾರಿಯಿಂದ ಲೈಂಗಿಕ ಕಿರುಕುಳ

ಐಐಎಂ-ಬಿನ ಮುಖ್ಯ ಆಡಳಿತಾಧಿಕಾರಿಯೊಬ್ಬರು ಮಹಿಳಾ ವೈದ್ಯಾಧಿಕಾರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಎದುರಿಸುತ್ತಿದ್ದಾರೆ. 2009ರಿಂದ ಸತತ ಎರಡು ವರ್ಷಗಳ ಕಾಲ ತಮ್ಮ ಮೇಲೆ ಲೈಂಗಿಕ ದಬ್ಬಾಳಿಕೆ ನಡೆಸಿದ್ದಾರೆ ಎಂದು ಮಹಿಳಾ ವೈದ್ಯಾಧಿಕಾರಿ ದೂರಿದ್ದಾರೆ. ಇದನ್ನು ವಿರೋಧಿಸಿ ಮಹಿಳಾ ಸಂಘಟನೆಗಳು ಗುರುವಾರ ಪ್ರತಿಭಟನೆ ನಡೆಸಿದವು.
ಆಡಳಿತಾಧಿಕಾರಿ ಪೀಡನೆಯಿಂದ ಬೇಸತ್ತ ಮಹಿಳಾ ವೈದ್ಯಾಧಿಕಾರಿ ಐಐಎಂಬಿಯ ಜೆಂಡರ್ ಸೆನ್ಸಿಟಿವ್ ಕಮಿಟಿಗೆ 2011ರಲ್ಲಿ ದೂರು ಸಲ್ಲಿಸಿದ್ದರು. ಆದರೆ, ವಿಚಾರಣೆ ನಡೆಯುತ್ತಿರುವಾಗಲೇ ವೈದ್ಯಾಧಿಕಾರಿಯನ್ನು 2012ರ ಜನವರಿಯಲ್ಲಿ ಕೆಲಸದಿಂದ ತೆಗೆದುಹಾಕಲಾಗಿದೆ.
ತಾತ್ಕಾಲಿಕ ಉದ್ಯೋಗಿಯಾಗಿ ಕೆಲಸ ಮಾಡುತ್ತಿದ್ದ ಮಹಿಳೆಯ ಸೇವೆಯನ್ನು 2009ರಲ್ಲಿ ಖಾಯಂಗೊಳಿಸಲಾಗಿತ್ತು ಮತ್ತು ಆಕೆಯನ್ನು ಲೈಂಗಿಕ ಕಿರುಕುಳ ನೀಡಿದ ಮುಖ್ಯ ಆಡಳಿತಾಧಿಕಾರಿಯ ಅಡಿಯಲ್ಲಿ ನೇಮಿಸಲಾಗಿತ್ತು. ಆಗಿಂದಲೇ ಆತ ಕಿರುಕುಳ ನೀಡಲು ಆರಂಭಿಸಿದ್ದಾನೆ. ಇದನ್ನು ವಿರೋಧಿಸಿ ಐಐಎಂಬಿ ಮ್ಯಾನೇಜ್ಮೆಂಟಿಗೆ ದೂರು ನೀಡಿದ ಮೇಲೆ ಮತ್ತಷ್ಟು ಲೈಂಗಿಕ ಕಿರುಕುಳ ನೀಡಲು ಆರಂಭಿಸಿದ ಎಂದು ಅವರು ಆರೋಪಿಸಿದ್ದಾರೆ.
ನಂತರ ಅವರನ್ನು ಬೇರೆ ವಿಭಾಗಕ್ಕೆ ವರ್ಗಾಯಿಸಿದ ಮೇಲೂ ಕೆಲಸ ಮಾಡಲಾಗದಂತಹ ವಾತಾವರಣವನ್ನು ಸೃಷ್ಟಿಸಲಾಗಿದೆ. ಮುಂದುವರಿದ ಕಿರುಕುಳವನ್ನು ಸಹಿಸಲಾಗದೆ ಲಿಖಿತ ದೂರು ನೀಡುವುದು ಖಾತ್ರಿಯಾಗುತ್ತಿದ್ದಂತೆ ಕೆಲಸ ಬಿಡಲು ಆಕೆಗೆ ಸೂಚಿಸಲಾಗಿದೆ. ಜನವರಿ 30, 2012ರಂದು ಲಿಖಿತ ದೂರು ನೀಡಿದ ಮರುದಿನವೇ ಜನವರಿ 31ರಂದು ಆಕೆಯನ್ನು ಕೆಲಸದಿಂದ ಕಿತ್ತುಹಾಕಲಾಗಿದೆ.
ಕೆಲಸದಿಂದ ಕಿತ್ತುಹಾಕಿದ್ದನ್ನು ಪ್ರಶ್ನಿಸಿ ಮಹಿಳಾ ವೈದ್ಯಾಧಿಕಾರಿ ಕರ್ನಾಟಕ ಹೈಕೋರ್ಟನ್ನು ಸಂಪರ್ಕಿಸಿದಾಗ ಅವರು ಸಲ್ಲಿಸಿದ ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿದೆ. ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಯುತ್ತಿದ್ದಾಗ ತಮ್ಮನ್ನು ಮಾತ್ರ ಕೆಲಸದಿಂದ ಕಿತ್ತುಹಾಕಲಾಯಿತು, ಆದರೆ, ಕಿರುಕುಳು ನೀಡಿದವರನ್ನು ಅಮಾನತಿನಲ್ಲಿ ಇಡಲಿಲ್ಲ. ನನಗೆ ನ್ಯಾಯ ದೊರಕಿಸಿಕೊಡುವವರು ಯಾರು ಎಂದು ಮಹಿಳೆ ಗೋಳು ತೋಡಿಕೊಂಡಿದ್ದಾರೆ.
ಮಹಿಳೆಯನ್ನು ಬೆಂಬಲಿಸಿ ಮಹಿಳಾ ಸಂಘಟನೆಗಳು ಪ್ರತಿಭಟನೆಗೆ ಇಳಿದಿದ್ದರೆ, ಐಐಎಂಬಿಯ ಮುಖ್ಯ ಆಡಳಿತಾಧಿಕಾರಿಯನ್ನು ಬೆಂಬಲಿಸಿ ಮ್ಯಾನೇಜ್ಮೆಂಟ್ ಸಂಸ್ಥೆಯ ಸಿಬ್ಬಂದಿಗಳು ಪ್ರತಿಭಟನೆಗೆ ಇಳಿದವೆ. ಈ ಕುರಿತಂತೆ ತಾವೇ ಸ್ವತಃ ಐಐಎಂಬಿ ಮ್ಯಾನೇಜ್ಮೆಂಟನ್ನು ಸಂಪರ್ಕಿಸುವುದಾಗಿ ಮಹಿಳಾ ಸಂಘಟನೆಗಳು ಹೇಳಿವೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications