ಸೊರಬದಲ್ಲಿ ಕುಮಾರ್ vs ಬಂಗಾರಪ್ಪ ಸ್ಪರ್ಧೆ?

ಎಲ್ಲಾ ಪಕ್ಷಗಳಿಗಿಂತ ಜೆಡಿಎಸ್ ಪಕ್ಷ ಈ ವಿಷಯದಲ್ಲಿ ಮುಂದಿದ್ದು, ಸಮಾವೇಶಗಳ ಹೆಸರಿನಲ್ಲಿ ಊರೂರು ಸುತ್ತುತ್ತಾ ಯಾವ ಅಭ್ಯರ್ಥಿ ಪರ ಜನರ ಒಲವಿದೆ ಎಂಬ ಲೆಕ್ಕಾಚಾರ ಪಕ್ಕಾ ಮಾಡಿಕೊಳ್ಳುತ್ತಿದೆ.
ಈಗ ಇದೇ ಕೆಲಸವನ್ನು ಕಾಂಗ್ರೆಸ್ ಮುಂದುವರೆಸಿದ್ದು, ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಅವರ ಸೊರಬ ಕ್ಷೇತ್ರ ಯಾರು ಸ್ಪರ್ಧಿಸಬೇಕು ಎಂಬುದರ ಬಗ್ಗೆ ಚರ್ಚೆ, ಅಭಿಪ್ರಾಯ ಸಂಗ್ರಹ ಆರಂಭಗೊಂಡಿದೆ.
ಬಿಜೆಪಿ ಮಾತ್ರ ಇನ್ನೂ ಈ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಹಾಲಿ ಶಾಸಕರಿಗೆ ಟಿಕೆಟ್ ನೀಡುತ್ತೇವೆ ಎಂದು ರಾಜ್ಯಾಧ್ಯಕ್ಷ ಕೆಎಸ್ ಈಶ್ವರಪ್ಪ ಸಲೀಸಾಗಿ ಹೇಳಿದ್ದಾರೆ. ಆದರೆ, ಬೇರೆ ಪಕ್ಷಗಳಿಗೆ ಹೋಲಿಸಿದರೆ ಬಿಜೆಪಿಯಲ್ಲಿ ಟಿಕೆಟ್ ನೀಡುವುದು ಅಷ್ಟು ಸುಲಭದ ಮಾತಲ್ಲ.
ಈಗ ಸೊರಬ ಕ್ಷೇತ್ರದಲ್ಲಿ ಕುಮಾರ್ ಬಂಗಾರಪ್ಪ ಅವರೇ ಕಾಂಗ್ರೆಸ್ ಅಭ್ಯರ್ಥಿ ಎಂದು ಕಾಂಗ್ರೆಸ್ ವೀಕ್ಷಕರಿಗೆ ಅಭಿಪ್ರಾಯ ಸಂಗ್ರಹಣಾ ವರದಿಯನ್ನು ಸಲ್ಲಿಸಲಾಗಿದೆ.
ಕೆಪಿಸಿಸಿಯಿಂದ ನೇಮಕವಾದ ಜಿಲ್ಲಾ ಕಾಂಗ್ರೆಸ್ ವೀಕ್ಷಕ ಮಲ್ಲಿಕಾರ್ಜುನ ಸಮ್ಮುಖದಲ್ಲಿ ಸೊರಬ, ಆನವಟ್ಟಿ ಹಾಗೂ ತಾಳಗುಪ್ಪ ಹೋಬಳಿ ಕಾರ್ಯಕರ್ತರು, ಪದಾಧಿಕಾರಿಗಳು ಸಭೆ ಸೇರಿ ಈ ನಿರ್ಣಯ ಕೈಗೊಂಡಿದ್ದಾರೆ.
ಜೆಡಿಎಸ್ ತಂತ್ರ: ಕುಮಾರ್ ಬಂಗಾರಪ್ಪ ಪರ ಜನರ ಒಲವು ಮೂಡುತ್ತಿರುವ ಕಾರಣ ಹಾಗೂ ಬಿಜೆಪಿ ಅಭ್ಯರ್ಥಿ ಗೊಂದಲ ಇರುವುದರಿಂದ ಸೊರಬದಲ್ಲಿ ಕುಮಾರ್ ವಿರುದ್ಧ ಮಧು ಅವರನ್ನು ನಿಲ್ಲಿಸಿದರೆ ಹೇಗೆ ಎಂದು ಜೆಡಿಎಸ್ ಚಿಂತನೆ ನಡೆಸಿದೆ.
ಕುಟುಂಬದಲ್ಲಿ ಅಣ್ಣ ತಮ್ಮರ ಜಗಳ, ಎಸ್ ಬಂಗಾರಪ್ಪ ಅವರ ಅಂತ್ಯ ಸಂಸ್ಕಾರ ವೇಳೆ ರಾದ್ಧಾಂತ ಎಲ್ಲವೂ ಚುನಾವಣೆಯಲ್ಲಿ ಬಂಡವಾಳವಾಗುವ ನಿರೀಕ್ಷೆಯಿದೆ. ಆದರೆ, ಮಧು ಅವರ ಸ್ಪರ್ಧೆ ಬಗ್ಗೆ ಸ್ಪಷ್ಟ ಮಾಹಿತಿ ಇನ್ನೂ ಹೊರ ಬಿದ್ದಿಲ್ಲ.
ಬಿಜೆಪಿ ಹಾಲಿ ಶಾಸಕ ಹಾಲಪ್ಪ ಅವರು ಮತ್ತೊಮ್ಮೆ ಬಿಜೆಪಿ ಟಿಕೆಟ್ ಹಿಡಿದು ಜನರ ಮುಂದೆ ಹೋಗುವುದು ಸಾಧ್ಯವಿಲ್ಲದ ಮಾತು. ಕರ್ನಾಟಕ ಜನತಾ ಪಕ್ಷದ ಅಭ್ಯರ್ಥಿಯಾಗಿ ಹೋಗಿ ನಿಂತರೂ ಈ ಬಾರಿ ಗೆಲ್ಲುವುದು ಖಾತ್ರಿಯಿಲ್ಲ ಎನ್ನಲಾಗಿದೆ. ಒಟ್ಟಾರೆ ಸೊರಬ ಅಭ್ಯರ್ಥಿ ಆಯ್ಕೆ ಕುತೂಹಲ ಕೆರಳಿಸಿದೆ. ಬಿಜೆಪಿ ಮಾತ್ರ ನಿಧಾನಗತಿಯಲ್ಲಿ ರಣತಂತ್ರ ರೂಪಿಸುತ್ತಿದೆ.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications