ಹೊಸ ಬೆಂಗಳೂರು ವಿವಿಗೆ ಡಿವಿ ಗುಂಡಪ್ಪ ಹೆಸರು

ಕಳೆದ ವಾರ ದೆಹಲಿಗೆ ಪ್ರಯಾಣಿಸುತ್ತಿದ್ದಾಗ ಈ ರೀತಿ ಆಲೋಚನೆ ಬಂತು, ತಕ್ಷಣವೇ ಸಾಹಿತಿಗಳು, ಶಿಕ್ಷಣತಜ್ಞರ ಜೊತೆ ಸಮಾಲೋಚನೆ ನಡೆಸಿದೆ. ಎಲ್ಲರೂ ಡಿವಿಜಿ ಅವರ ಹೆಸರು ಸೂಕ್ತವಾಗಿದೆ ಎಂದರು ಎಂದು ಸಚಿವ ರವಿ ಹೇಳಿದರು.
ಹೋಸಕೋಟೆ ಸಮೀಪದ ದೇವನಹಳ್ಳಿ ಮೂಲದ ಡಿವಿ ಗುಂಡಪ್ಪ ಅವರ ಮಂಕುತಿಮ್ಮನ ಕಗ್ಗ, ಕನ್ನಡ ಭಗವದ್ಗೀತೆ ಎಂದೇ ಲೋಕಖ್ಯಾತಿ ಗಳಿಸಿದೆ. ಕವಿ, ದಾರ್ಶನಿಕ, ಸಾಹಿತಿ, ಸಮಾಜ ಸೇವಕ, ಪತ್ರಕರ್ತ ಹೀಗೆ ನಾನಾ ಕ್ಷೇತ್ರಗಳಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿದ ಡಿವಿ ಗುಂಡಪ್ಪ ಅವರ ಹೆಸರು ವಿವಿಗೆ ಇಡುವ ಮೂಲಕ ಅವರಿಗೆ ಸೂಕ್ತ ಗೌರವ ಸಲ್ಲಿಸಲು ಸರ್ಕಾರ ನಿರ್ಧರಿಸಿದೆ ಎಂದು ಸಚಿವ ಸಿಟಿ ರವಿ ಹೇಳಿದರು.
ಈ ವಾರದೊಳಗೆ ಬೆಂಗಳೂರು ವಿಶ್ವ ವಿದ್ಯಾಲಯ ಭಾಗವಾಗಲಿದೆ. ಶಿಕ್ಷಣ ತಜ್ಞರು ಈ ಬಗ್ಗೆ ಕಾರ್ಯಪ್ರವೃತ್ತರಾಗಿದ್ದಾರೆ. ವಾರಾಂತ್ಯದೊಳಗೆ ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ಉನ್ನತ ಶಿಕ್ಷಣ ಇಲಾಖೆ ಹೇಳಿದೆ.
ವಿವಿ ಒಡೆಯುತ್ತಿರುವುದೇಕೆ?: ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಒಳಪಡುವ ಕಾಲೇಜುಗಳ ಹಾಗೂ ವಿದ್ಯಾರ್ಥಿಗಳ ಸಂಖ್ಯೆ ಅತಿ ಹೆಚ್ಚಾಗಿರುವ ಹಿನ್ನಲೆಯಲ್ಲಿ ವಿಶ್ವವಿದ್ಯಾಲಯವನ್ನು ಎರಡು ಪ್ರತ್ಯೇಕ ವಿ.ವಿ.ಗಳನ್ನಾಗಿ ವಿಭಜನೆ ಮಾಡಲು ಈ ಹಿಂದಿನ ಉನ್ನತ ಶಿಕ್ಷಣ ಸಚಿವ ಡಾ.ವಿ.ಎಸ್. ಆಚಾರ್ಯ ಯೋಜಿಸಿದ್ದರು.
ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರ ಕಾಲದಲ್ಲಿ ಎನ್ ರುದ್ರಯ್ಯ ಸಮಿತಿ ಮಾಡಿದ್ದ ಶಿಫಾರಸ್ಸಿನ ಅನ್ವಯ ಈ ವಿಭಜನೆ ಕಾರ್ಯಕ್ಕೆ ಸರ್ಕಾರ ಮುಂದಾಗಿತ್ತು.
ಸದ್ಯ ಬೆಂಗಳೂರು ವಿವಿ ವ್ಯಾಪ್ತಿಗೆ ಸುಮಾರು 760ಕ್ಕೂ ಹೆಚ್ಚು ಕಾಲೇಜುಗಳು ಒಳಪಡುತ್ತವೆ. ವಿದ್ಯಾರ್ಥಿಗಳ ಸಂಖ್ಯೆ ಕೂಡ ಹೆಚ್ಚಾಗಿದೆ. ಇದರಿಂದ ಶಿಕ್ಷಣ ಗುಣಮಟ್ಟ ಕಾಪಾಡಿಕೊಳ್ಳಲು, ಪರೀಕ್ಷೆ ನಡೆಸಲು ಕೂಡಾ ಕಷ್ಟವಾಗುತ್ತಿದೆ. 250 ಕಾಲೇಜುಗಳಿಗೆ ಒಂದು ವಿ.ವಿಯನ್ನು ತೆರೆಯಲು ಚಿಂತನೆ ನಡೆಸಲಾಗಿದೆ ಎಂದು ಶಿಕ್ಷಣ ಇಲಾಖೆ ಹೇಳಿದೆ.
ಎಲ್ಲೆಲ್ಲಿ?: ಕೋಲಾರ ಮತ್ತು ಚಿಕ್ಕಬಳ್ಳಾಪುರ ವ್ಯಾಪ್ತಿಗೆ ಹೊಸಕೋಟೆ ಸಮೀಪ ಒಂದು ವಿಶ್ವ ವಿದ್ಯಾಲಯ, ಬಿಬಿಎಂಪಿ ವ್ಯಾಪ್ತಿಗೆ ಮತ್ತೊಂದು ಎಂದು ಯೋಜಿಸಲಾಗಿದೆ. ಬೆಂಗಳೂರು ಉತ್ತರ ಹಾಗೂ ದಕ್ಷಿಣ ವಿಶ್ವ ವಿದ್ಯಾಲಯ ಎಂದು ಹೆಸರಿಸುವ ಸಾಧ್ಯತೆಯಿತ್ತು. ಈಗ ಬೆಂಗಳೂರು ಉತ್ತರ ಬದಲು ಡಿವಿ ಗುಂಡಪ್ಪ ವಿಶ್ವ ವಿದ್ಯಾಲಯ ಎಂದು ಹೆಸರಿಸಲು ನಿರ್ಧರಿಸಲಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications