ಕೆಜೆಪಿಗೆ 50 ಶಾಸಕರಲ್ಲ 5 ಶಾಸಕರೂ ಹೋಗಲ್ಲ

ಬಿಜೆಪಿ ಬಿಡುವುದು ಯಡಿಯೂರಪ್ಪ ಅವರ ವೈಯಕ್ತಿಕ ವಿಚಾರ. ಸಾವಿರಾರು ಕಾರ್ಯಕರ್ತರು ಕಟ್ಟಿ ಬೆಳೆಸಿದ ಪಕ್ಷ ಒಂದೇ ಸಾರಿಗೆ ಬೀಳಿಸಲು ಸಾಧ್ಯವಿಲ್ಲ.
ರಾಜ್ಯದಲ್ಲಿ ಬಿಜೆಪಿ ಕಟ್ಟುವಲ್ಲಿ ಬಿಎಸ್ ಯಡಿಯೂರಪ್ಪ ಅವರದ್ದು ದೊಡ್ಡ ಪಾಲು ಇದೆ ನಿಜ. ಅವರೇ ಕಟ್ಟಿದ ಕನಸನ್ನು ಅವರೇ ನುಚ್ಚು ನೂರು ಮಾಡಿ ಹೋಗುವುದು ಸರಿಯಲ್ಲ. ಅವರು ಬಿಜೆಪಿಯಲ್ಲೇ ಉಳಿದರೆ ಸಂತೋಷ. ಆದರೆ, ಈಗ ಪರಿಸ್ಥಿತಿ ಕೈ ಮೀರುತ್ತಿದೆ ಎಂದು ಸಚಿವ ಸುರೇಶ್ ಹೇಳಿದರು.
ಬಿಎಂಟಿಎಫ್ ತನಿಖೆ ನಡೆಸಲಿ: ಲಗ್ಗೆರೆ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎಂಟಿಎಫ್ ಕಚೇರಿ ಕೇಳಿದ ಮಾಹಿತಿಗೆ ಉತ್ತರಿಸಿದ್ದೇನೆ. ಬಿಎಂಟಿಎಫ್ ಅಧಿಕಾರ ಮೊಟಕುಗೊಳಿಸಲು ಅಥವಾ ಪ್ರಕರಣ ಮುಚ್ಚಿ ಹಾಕಲು ಎಂದೂ ಯತ್ನಿಸಿಲ್ಲ.
ನನ್ನ ಪರ ಯಾವ ಅಧಿಕಾರಿಗಳು ವಕಾಲತ್ತು ವಹಿಸುತ್ತಿಲ್ಲ. ಬಿಎಂಟಿಎಫ್ ತನಿಖೆಗೆ ನಾನು ಅಡ್ಡಿಪಡಿಸುವುದಿಲ್ಲ ಎಂದು ಸುರೇಶ್ ಕುಮಾರ್ ಸ್ಪಷ್ಟಪಡಿಸಿದರು.
ಲಗ್ಗೆರೆ ಬಳಿ ಇರುವ ಸರ್ವೆ ನಂ. 9/2 ಆರೆಸ್ಸೆಸ್ ಮುಖಂಡ ಮಾಜಿ ಎಂಎಲ್ ಸಿ ನರಹರಿ ಎಂಬುವರ ಸೋದರ ಗೋಪಿನಾಥ್ ಅವರಿಗೆ ಸೇರಿದೆ.
ಸದರಿ 4.2 ಎಕರೆ ಜಮೀನನ್ನು ಸ್ಲಂ ನಿವಾಸಿಗಳಿಗೆ ಮನೆ ನಿರ್ಮಿಸುವ ಸಲುವಾಗಿ 1982ರಲ್ಲಿ ಡಿನೋಟಿಫೈ ಮಾಡಲಾಗಿತ್ತು. 2003ರಲ್ಲಿ ಭೂಮಿ ವಶಕ್ಕೆ ತೆಗೆದುಕೊಳ್ಳಲಾಗಿತ್ತು. 6 ವರ್ಷ ನಂತರ ಸ್ಲಂ ಬೋರ್ಡ್(Karnataka Slum Development Board (KSDB)) ಮನೆ ನಿರ್ಮಾಣಕ್ಕೆ ಹಣ ಬಿಡುಗಡೆ ಮಾಡಿತ್ತು.
ಆದರೆ, ಯಡಿಯೂರಪ್ಪ ಅವರು ಅಧಿಕಾರದಲ್ಲಿದ್ದ ಕಾಲದಲ್ಲಿ ಸಚಿವ ಸುರೇಶ್ ಕುಮಾರ್ ಅವರು ತಮ್ಮ ಪ್ರಭಾವ ಬಳಸಿ ಅಕ್ರಮವಾಗಿ ಡಿನೋಟಿಫೈ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಗೋಪಿನಾಥ್ ಅವರಿಗೆ ಅನುಕೂಲವಾಗುವಂತೆ ಡಿನೋಟಿಫೈ ಮಾಡಿದ ಸರ್ಕಾರದ ಆದೇಶ ಹೊರಡಿಸಿತ್ತು.
ಸರ್ಕಾರದ ಆದೇಶಕ್ಕೆ ಕಾನೂನು ಕಾರ್ಯದರ್ಶಿಗಳು ವಿರೋಧ ವ್ಯಕ್ತಪಡಿಸಿದ್ದರು. ಆದರೆ, ಕಾನೂನು ಸಚಿವ ಸುರೇಶ್ ಕುಮಾರ್ ಅವರು ಅಕೌಂಟ್ ಜನರಲ್(AG) ಒಪ್ಪಿಗೆ ಸಿಕ್ಕಿದೆ ಎಂಬ ಕಾರಣ ಕೊಟ್ಟು ಡಿನೋಟಿಫೈ ಮಾಡಿದ್ದರು ಎಂದು ಆರೋಪಿಸಲಾಗಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications