ಕೆಜೆಪಿಗೆ 50 ಶಾಸಕರಲ್ಲ 5 ಶಾಸಕರೂ ಹೋಗಲ್ಲ

ಬಿಜೆಪಿ ಬಿಡುವುದು ಯಡಿಯೂರಪ್ಪ ಅವರ ವೈಯಕ್ತಿಕ ವಿಚಾರ. ಸಾವಿರಾರು ಕಾರ್ಯಕರ್ತರು ಕಟ್ಟಿ ಬೆಳೆಸಿದ ಪಕ್ಷ ಒಂದೇ ಸಾರಿಗೆ ಬೀಳಿಸಲು ಸಾಧ್ಯವಿಲ್ಲ.
ರಾಜ್ಯದಲ್ಲಿ ಬಿಜೆಪಿ ಕಟ್ಟುವಲ್ಲಿ ಬಿಎಸ್ ಯಡಿಯೂರಪ್ಪ ಅವರದ್ದು ದೊಡ್ಡ ಪಾಲು ಇದೆ ನಿಜ. ಅವರೇ ಕಟ್ಟಿದ ಕನಸನ್ನು ಅವರೇ ನುಚ್ಚು ನೂರು ಮಾಡಿ ಹೋಗುವುದು ಸರಿಯಲ್ಲ. ಅವರು ಬಿಜೆಪಿಯಲ್ಲೇ ಉಳಿದರೆ ಸಂತೋಷ. ಆದರೆ, ಈಗ ಪರಿಸ್ಥಿತಿ ಕೈ ಮೀರುತ್ತಿದೆ ಎಂದು ಸಚಿವ ಸುರೇಶ್ ಹೇಳಿದರು.
ಬಿಎಂಟಿಎಫ್ ತನಿಖೆ ನಡೆಸಲಿ: ಲಗ್ಗೆರೆ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎಂಟಿಎಫ್ ಕಚೇರಿ ಕೇಳಿದ ಮಾಹಿತಿಗೆ ಉತ್ತರಿಸಿದ್ದೇನೆ. ಬಿಎಂಟಿಎಫ್ ಅಧಿಕಾರ ಮೊಟಕುಗೊಳಿಸಲು ಅಥವಾ ಪ್ರಕರಣ ಮುಚ್ಚಿ ಹಾಕಲು ಎಂದೂ ಯತ್ನಿಸಿಲ್ಲ.
ನನ್ನ ಪರ ಯಾವ ಅಧಿಕಾರಿಗಳು ವಕಾಲತ್ತು ವಹಿಸುತ್ತಿಲ್ಲ. ಬಿಎಂಟಿಎಫ್ ತನಿಖೆಗೆ ನಾನು ಅಡ್ಡಿಪಡಿಸುವುದಿಲ್ಲ ಎಂದು ಸುರೇಶ್ ಕುಮಾರ್ ಸ್ಪಷ್ಟಪಡಿಸಿದರು.
ಲಗ್ಗೆರೆ ಬಳಿ ಇರುವ ಸರ್ವೆ ನಂ. 9/2 ಆರೆಸ್ಸೆಸ್ ಮುಖಂಡ ಮಾಜಿ ಎಂಎಲ್ ಸಿ ನರಹರಿ ಎಂಬುವರ ಸೋದರ ಗೋಪಿನಾಥ್ ಅವರಿಗೆ ಸೇರಿದೆ.
ಸದರಿ 4.2 ಎಕರೆ ಜಮೀನನ್ನು ಸ್ಲಂ ನಿವಾಸಿಗಳಿಗೆ ಮನೆ ನಿರ್ಮಿಸುವ ಸಲುವಾಗಿ 1982ರಲ್ಲಿ ಡಿನೋಟಿಫೈ ಮಾಡಲಾಗಿತ್ತು. 2003ರಲ್ಲಿ ಭೂಮಿ ವಶಕ್ಕೆ ತೆಗೆದುಕೊಳ್ಳಲಾಗಿತ್ತು. 6 ವರ್ಷ ನಂತರ ಸ್ಲಂ ಬೋರ್ಡ್(Karnataka Slum Development Board (KSDB)) ಮನೆ ನಿರ್ಮಾಣಕ್ಕೆ ಹಣ ಬಿಡುಗಡೆ ಮಾಡಿತ್ತು.
ಆದರೆ, ಯಡಿಯೂರಪ್ಪ ಅವರು ಅಧಿಕಾರದಲ್ಲಿದ್ದ ಕಾಲದಲ್ಲಿ ಸಚಿವ ಸುರೇಶ್ ಕುಮಾರ್ ಅವರು ತಮ್ಮ ಪ್ರಭಾವ ಬಳಸಿ ಅಕ್ರಮವಾಗಿ ಡಿನೋಟಿಫೈ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಗೋಪಿನಾಥ್ ಅವರಿಗೆ ಅನುಕೂಲವಾಗುವಂತೆ ಡಿನೋಟಿಫೈ ಮಾಡಿದ ಸರ್ಕಾರದ ಆದೇಶ ಹೊರಡಿಸಿತ್ತು.
ಸರ್ಕಾರದ ಆದೇಶಕ್ಕೆ ಕಾನೂನು ಕಾರ್ಯದರ್ಶಿಗಳು ವಿರೋಧ ವ್ಯಕ್ತಪಡಿಸಿದ್ದರು. ಆದರೆ, ಕಾನೂನು ಸಚಿವ ಸುರೇಶ್ ಕುಮಾರ್ ಅವರು ಅಕೌಂಟ್ ಜನರಲ್(AG) ಒಪ್ಪಿಗೆ ಸಿಕ್ಕಿದೆ ಎಂಬ ಕಾರಣ ಕೊಟ್ಟು ಡಿನೋಟಿಫೈ ಮಾಡಿದ್ದರು ಎಂದು ಆರೋಪಿಸಲಾಗಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications